Saturday, August 1, 2026
Homeಸೂರ್ಯಗಗನಮೂಡ ವಿಷಯದಲ್ಲಿ 'ಮಾಡಿದ್ದುಣ್ಣೊ ಮಹಾರಾಯ' ಸ್ಥಿತಿಗೆ ತಲುಪಿದ ಕಾಂಗ್ರೆಸ್ ಸರ್ಕಾರ  : ಶಾಸಕ ಚನ್ನಬಸಪ್ಪ

ಮೂಡ ವಿಷಯದಲ್ಲಿ ‘ಮಾಡಿದ್ದುಣ್ಣೊ ಮಹಾರಾಯ’ ಸ್ಥಿತಿಗೆ ತಲುಪಿದ ಕಾಂಗ್ರೆಸ್ ಸರ್ಕಾರ  : ಶಾಸಕ ಚನ್ನಬಸಪ್ಪ

ಮೂಡ ವಿಷಯದಲ್ಲಿ ‘ಮಾಡಿದ್ದುಣ್ಣೊ ಮಹಾರಾಯ’ ಸ್ಥಿತಿಗೆ ತಲುಪಿದ ಕಾಂಗ್ರೆಸ್ ಸರ್ಕಾರ  : ಶಾಸಕ ಚನ್ನಬಸಪ್ಪ

ಶಿವಮೊಗ್ಗ : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಆರ್ಥಿಕ ಹಗರಣದ ಪಾರದರ್ಶಕ ತನಿಖೆಗೆ ಹೈಕೋರ್ಟ್ ಸಿಬಿಐಗೆ ನೀಡಿರುವುದು ಸ್ವಾಗತಾರ್ಹ ಮತ್ತು ನ್ಯಾಯದ ದಿಕ್ಕಿನಲ್ಲಿ ನಡೆದಿರುವ ಮಹತ್ವದ ಹೆಜ್ಜೆಯಾಗಿದೆ. ಈ ಮೂಲಕ ಸುಮಾರು 87 ಕೋಟಿ ರೂಪಾಯಿಗಳ ದುರುಪಯೋಗದ ಒತ್ತಡಕ್ಕೆ ಬಲಿಯಾಗಿದ್ದ ಶಿವಮೊಗ್ಗದ ನಿವಾಸಿ ಚಂದ್ರಶೇಖರನ್ ಅವರ ಸಾವಿಗೆ ನ್ಯಾಯ ಕೊಡಿಸುವ ಕಾರ್ಯಕ್ಕೆ ಜಯ ಸಿಕ್ಕಂತಾಗಿದೆ. ಇದು ಭಾರತೀಯ ಜನತಾ ಪಕ್ಷದ ನಿರಂತರ ಹೋರಾಟಕ್ಕೆ ಸಿಕ್ಕ ಫಲ. ಜೊತೆಗೆ ಇದು ವಾಸ್ತವದ ಗೆಲುವು ಮತ್ತು ಕಾಂಗ್ರೆಸ್‌ನ ಕಪಟ ನೀತಿಯ ಅಸಲಿ ಮುಖ ಬಯಲಾಗಿದೆ ಎಂದು ಶಾಸಕ ಚೆನ್ನಬಸಪ್ಪ ತಿಳಿಸಿದ್ದಾರೆ,

ಅವರು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿ, ಈ ಹಗರಣ ಕೇವಲ ಆರ್ಥಿಕ ಅಕ್ರಮವಷ್ಟೇ ಅಲ್ಲ, ಇದು ವಾಲ್ಮೀಕಿ ಸಮುದಾಯದ ಹಕ್ಕುಗಳನ್ನು ದುರ್ಬಳಕೆ ಮಾಡಿದ ರಾಜಕೀಯ ಧಿಕ್ಕಾರದ ಉದಾಹರಣೆ. ಸಮುದಾಯದ ಕಲ್ಯಾಣಕ್ಕಾಗಿ ಮೀಸಲಾದ ಕೋಟಿಗಟ್ಟಲೆ ಹಣವನ್ನು ಕಾಂಗ್ರೆಸ್ ಸರ್ಕಾರ ತನ್ನ ರಾಜಕೀಯ ದುರಾಶೆಗಾಗಿ ಲೂಟಿ ಮಾಡಿದ್ದು, ಬಳ್ಳಾರಿ ಉಪಚುನಾವಣೆ, ತೆಲಂಗಾಣ ಮತ್ತು ವಯನಾಡ್ ಚುನಾವಣೆಯಲ್ಲಿ ಅಕ್ರಮವಾಗಿ ಹಣ ಹರಿಸುತ್ತಾ ಭಾರತೀಯ ಪ್ರಜಾಪ್ರಭುತ್ವಕ್ಕೆ ಅಪಮಾನ ಎಸಗಿದೆ ಎಂದಿದ್ದಾರೆ,

ವಾಲ್ಮೀಕಿ ನಿಗಮದಲ್ಲಿ ನಡೆದ ಈ ಭಾರೀ ಹಗರಣದಲ್ಲಿ ಕಾಂಗ್ರೆಸ್‌ ಸರ್ಕಾರದ ಹಲವು ಹಿರಿಯ ನಾಯಕರು ನೇರವಾಗಿ ಸಂಬಂಧ ಹೊಂದಿದ್ದು, ಸರ್ಕಾರದ ನೈತಿಕತೆ ಮತ್ತು ಜವಾಬ್ದಾರಿತ್ವಕ್ಕೆ ಗಂಭೀರ ಆಘಾತ ನೀಡಿದೆ. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಈ ಹಗರಣಕ್ಕೆ ಮುಖ್ಯಮಂತ್ರಿಯಾದ ಶ್ರೀ ಸಿದ್ದರಾಮಯ್ಯನವರೇ ನೇರ ಹೊಣೆಗಾರರಾಗಿದ್ದು, ಅವರು ತಕ್ಷಣವೇ ತಮ್ಮ ಹುದ್ದೆಯಿಂದ ರಾಜೀನಾಮೆ ನೀಡಿ ತನಿಖೆಗೆ ಸಂಪೂರ್ಣ ಸಹಕರಿಸಬೇಕಾಗಿದೆ ಎಂದು ಹೇಳಿದ್ದಾರೆ,

ಸಮುದಾಯದ ಹೆಸರಿನಲ್ಲಿ ಮತ ಯಾಚಿಸಿ, ನಂತರ ಅವರ ಅಭಿವೃದ್ಧಿಗೆ ಮೀಸಲಾದ ನಿಧಿಗಳನ್ನು ದುರುಪಯೋಗಪಡಿಸಿಕೊಳ್ಳುವುದು ಕಾಂಗ್ರೆಸ್ ಪಕ್ಷದ ರಾಜಕೀಯ ಸಂಸ್ಕೃತಿಯಲ್ಲಿಯೇ ಬಡಗಿದೆ. ಇಂತಹ ನೈತಿಕತೆವಿಲ್ಲದ ಅಕ್ರಮಗಳನ್ನು ಭಾರತೀಯ ಜನತಾ ಪಕ್ಷ ಎಂದಿಗೂ ಸಹಿಸುವುದಿಲ್ಲ. ಇವುಗಳ ವಿರುದ್ಧ ಈಗಾಗಲೇ ಹೋರಾಟ ನಡೆಸುತ್ತಿದ್ದು, ಮುಂದೆಯೂ ನಿರಂತರವಾಗಿ ಹೋರಾಡುವ ದೃಢ ಪ್ರತಿಜ್ಞೆಯೊಂದಿಗೆ ಬದ್ಧವಾಗಿದೆ ಎಂದು ಶಾಸಕ ಚೆನ್ನಬಸಪ್ಪನವರು ಸೂರ್ಯಗಗನದ ಸುದ್ದಿ ಬ್ಯುರೋಗೆ ವಿವರಿಸಿದ್ದಾರೆ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I