Monday, August 3, 2026
Homeಸೂರ್ಯಗಗನI ಗ್ರಾಮೀಣ ಬ್ಯಾಂಕ್‌ I ನೌಕರರ I ಪ್ರತಿಭಟನೆ I

I ಗ್ರಾಮೀಣ ಬ್ಯಾಂಕ್‌ I ನೌಕರರ I ಪ್ರತಿಭಟನೆ I

I ಗ್ರಾಮೀಣ ಬ್ಯಾಂಕ್‌ I ನೌಕರರ I ಪ್ರತಿಭಟನೆ I

ಶಿವಮೊಗ್ಗ: ಗ್ರಾಮೀಣ ಬ್ಯಾಂಕ್‌ ನೌಕರರ ಒಕ್ಕೂಟವು 17 ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬುಧವಾರ ಮುಷ್ಕರದಲ್ಲಿ ಪಾಲ್ಗೊಂಡಿತ್ತು. ಕೇಂದ್ರ ಕಾರ್ಮಿಕ ಸಂಘಟನೆಗಳು ಮತ್ತು ವಲಯವಾರು ಅಖಿಲ ಭಾರತ ಒಕ್ಕೂಟಗಳ ಜಂಟಿ ವೇದಿಕೆಯ ಕರೆಯಂತೆ ಮುಷ್ಕರದಲ್ಲಿ ಭಾಗವಹಿಸಲಾಗಿತ್ತು.

ಐಪಿಓ ಪ್ರಸ್ತಾವನೆಯನ್ನು ಹಿಂತೆಗೆದುಕೊಳ್ಳಬೇಕು ಮತ್ತು ಗ್ರಾಮೀಣ ಬ್ಯಾಂಕುಗಳ ಖಾಸಗಿಕರಣ ಬೇಡ. ಪ್ರಾಯೋಜಕ ಬ್ಯಾಂಕ್‌ಗಳಿಂದ ಬೇರ್ಪಡಿಸಬೇಕು ಮತ್ತು ರಾಷ್ಟ್ರೀಯ ಗ್ರಾಮೀಣ ಬ್ಯಾಂಕನ್ನು ಸ್ಥಾಪಿಸಿ ಅದರ ಮಾರ್ಗದರ್ಶನದಲ್ಲಿ ಎಲ್ಲಾ 28 ರಾಜ್ಯ ಮಟ್ಟದ ಗ್ರಾಮೀಣ ಬ್ಯಾಂಕುಗಳು ಕಾರ್ಯನಿರ್ವಹಿಸಬೇಕು. ಗ್ರಾಮೀಣ ಬ್ಯಾಂಕುಗಳಲ್ಲಿ ಖಾಲಿ ಇರುವ 30000 ಕೂ ಹೆಚ್ಚು ಹುದ್ದೆಗಳನ್ನು ತಕ್ಷಣವೇ ನೇಮಕಾತಿ ಮಾಡಬೇಕು.

ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಇರುವಂತೆ ಸಮನಾಗಿ ಬಡ್ತಿ ನೀತಿಯನ್ನು ಜಾರಿಗೊಳಿಸಬೇಕು.  ಅಗತ್ಯತೆಗೆ ತಕ್ಕಂತೆ ಮಾನವಶಕ್ತಿ ನೀತಿ ಮತ್ತು ವರ್ಗಾವಣೆ ನೀತಿಯನ್ನು ರೂಪಿಸಬೇಕು. ಕ್ಯಾಶುವಲ್,ಅರೆಕಾಲಿಕ, ಹೊರಗುತ್ತಿಗೆ , ದೈನಂದಿನ ಕೂಲಿ ನೌಕರರನ್ನು ಖಾಯಂಗೊಳಿಸಬೇಕೆಂಬ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ಒಕ್ಕೂಟದ ಕೇಂದ್ರ ಸಮಿತಿ ಸದಸ್ಯರಾದ ಆರ್. ರಾಜಶೇಖರ್ ಮತ್ತು ಮಹಾಬಲಶ್ವರಪ್ಪ, ಕೆ ಎಸ್ ದೇವರಾಜ್, ಜಗದೀಶ್ ಹೆಚ್. ಆರ್, ವಿಘ್ನೇಶ್ವರ ಹೆಗಡೆ ಮತ್ತಿತರರು ಮುಷ್ಕರದಲ್ಲಿ ಭಾಗವಹಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I