Sunday, August 2, 2026
Homeಸೂರ್ಯಗಗನI ರೋಟರಿ ರಿವರ್‌ಸೈಡ್ ಸಂಸ್ಥೆಯಿಂದ I ನಿರಂತರ ಸೇವಾ ಕಾರ್ಯ I ವಿಶ್ವನಾಥ ನಾಯಕ I

I ರೋಟರಿ ರಿವರ್‌ಸೈಡ್ ಸಂಸ್ಥೆಯಿಂದ I ನಿರಂತರ ಸೇವಾ ಕಾರ್ಯ I ವಿಶ್ವನಾಥ ನಾಯಕ I

I ರೋಟರಿ ರಿವರ್‌ಸೈಡ್ ಸಂಸ್ಥೆಯಿಂದ I ನಿರಂತರ ಸೇವಾ ಕಾರ್ಯ I ವಿಶ್ವನಾಥ ನಾಯಕ I

ಶಿವಮೊಗ್ಗ: ರೋಟರಿ ಸಂಸ್ಥೆಯು ನಿರಂತರವಾಗಿ ಸಮಾಜಮುಖಿ ಕೆಲಸಗಳನ್ನು ಮಾಡುವ ಜತೆಯಲ್ಲಿ ಸಂಕಷ್ಟದಲ್ಲಿ ಇರುವವರಿಗೆ ನೆರವು ಒದಗಿಸುವ ಕೆಲಸ ಮಾಡುತ್ತಿದೆ ಎಂದು ರೋಟರಿ ಕ್ಲಬ್ ಶಿವಮೊಗ್ಗ ರಿವರ್‌ಸೈಡ್ ಸಂಸ್ಥೆ ಅಧ್ಯಕ್ಷ ವಿಶ್ವನಾಥ ನಾಯಕ ಹೇಳಿದರು.

ಸವಳಂಗ ರಸ್ತೆಯ ಸುಶೋಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನವೀನ್ ಎಂಬ ಪ್ಯಾಸೆಂಜರ್ ಆಟೋ ಚಾಲಕರಿಗೆ ತಕ್ಷಣದ ನೆರವು ಒದಗಿಸಿದರು. ನಂತರ ಮಾತನಾಡಿ, ಸಮಾಜದಲ್ಲಿ ಮಾನವೀಯತೆ, ಸೇವಾ ಮನೋಭಾವ ಮತ್ತು ಸಹಕಾರದ ನಿಜವಾದ ಮಾದರಿಯನ್ನು ತೋರಿಸಿರುವುದು ರೋಟರಿ ಸಂಸ್ಥೆ ಎಂದು ತಿಳಿಸಿದರು.

ವೈದ್ಯಕೀಯ ವೃತ್ತಿಯ ಧರ್ಮವನ್ನು ಕಾಪಾಡಿಕೊಂಡು, ಬಡ ರೋಗಿಗಳಿಗೆ ಸಹಾನುಭೂತಿಯಿಂದ ನೆರವಾಗುತ್ತಿರುವ ಡಾ. ಪ್ರದೀಪ್ ಅವರ ಸೇವಾ ಮನೋಭಾವವು ಸಮಾಜಕ್ಕೆ ಮಾದರಿಯಾಗಿದೆ ಎಂದರು.

ನವೀನ್ ಅವರು ಕಿಡ್ನಿ ಮತ್ತು ಲಿವರ್ ವೈಫಲ್ಯದಿಂದ ಬಳಲುತ್ತಿದ್ದು, ಅತೀವ ಗಂಭೀರ ಪರಿಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ವೈದ್ಯಕೀಯ ವೆಚ್ಚದ ಭಾರವನ್ನು ಹೊರುವ ಸ್ಥಿತಿಯಲ್ಲಿಲ್ಲ. ಈ ವಿಚಾರ ತಿಳಿದು ರೋಟರಿ ಕ್ಲಬ್ ಶಿವಮೊಗ್ಗ ರಿವರ್ ಸೈಡ್ ಪದಾಧಿಕಾರಿಗಳು ನೆರವು ಒದಗಿಸಿದರು.

ಅಧ್ಯಕ್ಷ ವಿಶ್ವನಾಥ್ ನಾಯಕ ಅವರು ಹೆಚ್ಚಿನ ಮೊತ್ತವನ್ನು ನೀಡಿದರು. ಸದಸ್ಯರಾದ ರುಥ್ವಿಕ್ ಮಲ್ಲೇಶ್, ಇತರ ರೋಟರಿ ಮಿತ್ರರು ಸಹ ಕೈಜೋಡಿಸಿದರು.

ರೋಟರಿ ಕ್ಲಬ್ ಶಿವಮೊಗ್ಗ ರಿವರ್‌ಸೈಡ್ ಸಂಸ್ಥೆ ಕಾರ್ಯದರ್ಶಿ ನಿತಿನ್ ಯಾದವ್, ಕ್ಲಬ್ ಸರ್ವೀಸ್ ನಿರ್ದೇಶಕ ರಾಜೇಂದ್ರ ಕುಮಾರ್, ಸುಜಯಾ ಇತರರು ಇದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I