Sunday, August 2, 2026
Homeಸೂರ್ಯಗಗನI ಉಸ್ತುವಾರಿ ಸಚಿವರ ಹೇಳಿಕೆಯನ್ನು ತಿರುಚಿ I, ಸಾರ್ವಜನಿಕ ಶಾಂತಿಭಂಗ I ಮಾಡಲೊರಟವರ ವಿರುದ್ದ I...

I ಉಸ್ತುವಾರಿ ಸಚಿವರ ಹೇಳಿಕೆಯನ್ನು ತಿರುಚಿ I, ಸಾರ್ವಜನಿಕ ಶಾಂತಿಭಂಗ I ಮಾಡಲೊರಟವರ ವಿರುದ್ದ I ಕಾನೂನು ಕ್ರಮಕ್ಕೆ ಒತ್ತಾಯ I

I ಉಸ್ತುವಾರಿ ಸಚಿವರ ಹೇಳಿಕೆಯನ್ನು ತಿರುಚಿ I, ಸಾರ್ವಜನಿಕ ಶಾಂತಿಭಂಗ I ಮಾಡಲೊರಟವರ ವಿರುದ್ದ I ಕಾನೂನು ಕ್ರಮಕ್ಕೆ ಒತ್ತಾಯ I

ಶಿವಮೊಗ್ಗ :  ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪನವರ ಹೇಳಿಕೆ ತಿರುಚಿ ಸಾರ್ವಜನಿಕ ಶಾಂತಿಗೆ ಭಂಗ ತರುವಂತೆ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿರುವ ಕಿಡಿಗೇಡಿಗಳ ವಿರುದ್ದ ಕ್ರಮ ಜರುಗಿಸುವಂತೆ ಆಗ್ರಹಿಸಿ ಇಂದು ಜಿಲ್ಲಾರಕ್ಷಣಾಧಿಕಾರಿಗಳಿಗೆ ಮನವಿ ನೀಡಲಾಯಿತು

ಮನವಿಯಲ್ಲಿ ತಿಳಿಸಿದಂತೆ ವಿವರಿಸಿ ನಗರದ ಮೆಗ್ಗಾನ್ ಆಸ್ಪತ್ರೆಯ ಭೇಟಿಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿರುವಾಗ, ಮಾಧ್ಯಮ ಪ್ರತಿನಿಧಿಗಳು ಸಿಗಂಧೂರು ಸೇತುವೆ ವಿಷಯವಾಗಿ ಕೇಳಿರುವ ಪ್ರಶ್ನೆಗೆ ಪ್ರತಿಕ್ರಿಸುವಾಗ, ಸಿಗಂಧೂರು ದೇವಸ್ಥಾನವನ್ನು ಯಾರು ಹಾಳು ಮಾಡಲು ಪ್ರಯತ್ನಿಸಿದರು ಎಂಬುದನ್ನು ಒಂದು ತಿಂಗಳಲ್ಲಿ ಹೇಳುತ್ತೇನೆ ಎಂದು ಮಾದ್ಯಮದವರ ಮುಂದೆ ನೀಡಿದ ಹೇಳಿಕೆಯನ್ನು ಕೆಲವು ಸಂಘಟನೆಯ ಸೋಶಿಯಲ್ ಮೀಡಿಯಾ ಕಾರ್ಯಕರ್ತರು ಉದ್ದೇಶಪೂರ್ವಕವಾಗಿ ಅರ್ದಕ್ಕೆ ಕತ್ತರಿಸಿ, “ಸಿಗಂದೂರು ದೇವಸ್ಥಾನವನ್ನು ಹೇಗೆ ಹಾಳು ಮಾಡಬೇಕೆಂದು ಒಂದು ತಿಂಗಳೊಳಗೆ ನಿಮಗೆ ಡಿಟೈಲ್ ಹೇಳುವೆ ” ಎಂಬ 19 ಸೆಕೆಂಡ್ ವಿಡಿಯೋವನ್ನು ಮಾಡಿ ಅದರ ಕೆಳಗಡೆ ಅಜ್ಞಾನಿ ವಿದ್ಯಾ ಮಂತ್ರಿಗಳೇ ಸಿಗಂದೂರು ಚೌಡೇಶ್ವರಿ ಮಾತೆಯಮಂದಿರ ಹಾಳು ಮಾಡ್ತೀವಿ ಎಂದ ನಾಲಿಗೆಗೆ ತಾಯಿ ಬರೆ ಹಾಕುವುದು ನಿಶ್ಚಿತ, ಎಂದು ದೇವರ ಚಿತ್ರದೊಂದಿಗೆ ಬರೆದ ವಿಡಿಯೋ ವೈರಲ್ ಮಾಡಿದ್ದು, ಈ ರೀತಿ ಹೇಳಿಕೆಯನ್ನು ತಿರುಚಿರುವುರೊಂದಿಗೆ ಜನರಲ್ಲಿ ಧಾರ್ಮಿಕ ಭಾವನೆಯನ್ನು ಕೆರಳಿಸಿ ಮಂತ್ರಿಗಳ ಬಗ್ಗೆ ದ್ವೇಷ ಭಾವನೆ ಮೂಡುವಂತೆ ಪ್ರಚೋದಿಸಿ. ಜನರನ್ನು ಉದ್ರೆಕಗೊಳಿಸಿ ಸಮಾಜದಲ್ಲಿ ಅಶಾಂತಿ ಮೂಡಿಸಿ ಸಂಘರ್ಷ ಏರ್ಪಡಿಸುವ ಉದ್ದೇಶ ಹೊಂದಿರುವ ಕೆಲವು ಸಂಘಟನೆಯ ಕಾರ್ಯಕರ್ತರು ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋವನ್ನು ವೈರಲ್ ಮಾಡಿದ್ದು, ಮಂತ್ರಿಗಳನ್ನು ಗೌರವಿಸುತ್ತಿದ್ದ ಸಮಾಜದಲ್ಲಿ, ಜಿಲ್ಲಾ ಉಸ್ತುವಾರಿ ಸಚಿವರು ಧಾರ್ಮಿಕ ಭಾವನೆಗೆ ದಕ್ಕೆ ತರುವ ಹೇಳಿಕೆ ನೀಡಿದ್ದಾರೆ ಎಂದು ಜನ ತಪ್ಪು ಭಾವನೆ ಮೂಡುವಂತೆ ಸಾರ್ವಜನಿಕರನ್ನು ಉದ್ರಿಕಿಸುವಂತೆ ಪ್ರಚೋದಿಸುತ್ತಿದ್ದಾರೆ .ಎಂದು ಆರೋಪಿಸಲಾಗಿದೆ,

ಈ ಹಿಂದಿನ ಸರ್ಕಾರವು ಸಿಗಂಧೂರು ದೇವಸ್ಥಾನವನ್ನು ಮುಜರಾಯಿಗೆ ಸೇರಿಸಲು ಹುನ್ನಾರ ನೆಡೆಸಿದ್ದನ್ನು ಹಾಗೂ ಆಡಳಿತ ಮಂಡಳಿಗೆ ನೀಡಿದ್ದ ಕಿರುಕುಳ, ದೇವಸ್ಥಾನದ ಅಭಿವೃದ್ಧಿಗೆ ಅಡ್ಡಿಪಡಿಸಿರುವುದನ್ನು ಖಂಡಿಸಿ ಮಾನ್ಯ ಮಧು ಬಂಗಾಪ್ಪನವರು ಸಿಗಂಧೂರು ಕ್ಷೇತ್ರ ಹೋರಾಟ ಸಮಿತಿ ರಚಿಸಿ ಹಿಂದಿನ ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡಿ ಶ್ರೀ ಕ್ಷೇತ್ರ ಸಿಗಂಧೂರು ದೇವಸ್ಥಾನ ಬಹುಸಂಖ್ಯಾತ ಈಡಿಗ ಸಮಾಜದ ಅಸ್ಮಿತೆ, ಪವಿತ್ರ ಧಾರ್ಮಿಕ ಕ್ಷೇತ್ರವಾಗಿದ್ದು ಸರ್ಕಾರ ಮುಜರಾಯಿಗೆ ಸೇರಿಸುವ ಹುನ್ನಾರ ಕೈಬಿಡದಿದ್ದರೆ ಜೇನು ಗೂಡಿಗೆ ಕೈ ಹಾಕಿದಂತೆ ಎಂದು ಎಚ್ಚರಿಸಿ ಹೋರಾಟದ ಎಚ್ಚರಿಕೆಯನ್ನು ನೀಡಿದ್ದರು. ಅಂದಿನಿಂದ ಪ್ರತಿಹಂತದಲ್ಲು ಶ್ರೀ ಕ್ಷೇತ್ರದ ವಿಷಯವಾಗಿ ಸಲ್ಲದ ಸುಳ್ಳುಸುದ್ದಿ ಹರಡುವ ಕುತಂತ್ರ ರಾಜಕಾರಣ ಮಾಡುತ್ತಿದ್ದು, ಈ ನಕಲಿ ವೀಡಿಯೊ ಸೃಷ್ಠಿ ಇದರ ಭಾಗವಾಗಿದೆ ಪ್ರತಿಭಟನಾಕಾರರು ತಿಳಿಸಿದ್ದಾರೆ,

ಈ ರೀತಿಯ ಹೇಳಿಕೆಯಿಂದ ಸಮಾಜದಲ್ಲಿ ಅಶಾಂತಿ ಮೂಡಿ ಶಾಂತಿಭಂಗವಾಗುವ ಸಾದ್ಯತೆಗಳಿರುವುದರಿಂದ, ಉಸ್ತುವಾರಿ ಸಚಿವರಾದ ಮಾನ್ಯ ಶ್ರೀ ಮಧುಬಂಗಾರಪ್ಪನವರ ಹೇಳಿಕೆಯನ್ನು ತಿರುಚಿರುವವರ ಮೇಲೆ ಮೊಕದ್ದಮೆ ದಾಖಲಿಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಈ ಮೂಲಕ  ಶಿವಮೊಗ್ಗ ಜಿಲ್ಲಾ ಆರ್ಯ ಈಡಿಗರ ಸಂಘ ಎಸ್ಪಿಯವರಿಗೆ ನೀಡಿದ ಮನವಿಯಲ್ಲಿ ತಿಳಿಸಿದೆ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I