Sunday, August 2, 2026
Homeಸೂರ್ಯಗಗನI ಅಂಗದಾನ ಉತ್ತೇಜಿಸಲು I ಎಲ್ಲರೂ ಸಹಕರಿಸಿ I ದಿನೇಶ್ ಗುಂಡೂರಾವ್ I

I ಅಂಗದಾನ ಉತ್ತೇಜಿಸಲು I ಎಲ್ಲರೂ ಸಹಕರಿಸಿ I ದಿನೇಶ್ ಗುಂಡೂರಾವ್ I

I ಅಂಗದಾನ ಉತ್ತೇಜಿಸಲು I ಎಲ್ಲರೂ ಸಹಕರಿಸಿ I ದಿನೇಶ್ ಗುಂಡೂರಾವ್ I

ಬೆಂಗಳೂರು, : ಅಂಗದಾನದಿಂದ ಹಲವಾರು ಜೀವಗಳಿಗೆ ಜೀವದಾನ ಮಾಡಬಹುದಾಗಿದೆ. ರಾಜ್ಯದಲ್ಲಿ ಅಂಗದಾನವನ್ನು ಉತ್ತೇಜಿಸಲು ಸರ್ಕಾರ ಹಲವು ಕ್ರಮಗಳನ್ನು ಅಳವಡಿಸಿಕೊಂಡಿದೆ. ಇಂತಹ ಉತ್ತಮ ಕೆಲಸಕ್ಕೆ ಎಲ್ಲರೂ ಸಹಕರಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್ ತಿಳಿಸಿದರು.

ಬೆಂಗಳೂರಿನ ಎಪಿಐ ಭವನದಲ್ಲಿ ರೋಟರಿ ಕ್ಲಬ್ ಆಫ್ ಆರ್ಗನ್ ಡೊನೇಷನ್ ಸಂಸ್ಥೆಯ ಜೀವಸಾರ್ಥಕತೆ ಸಹಕಾರದೊಂದಿಗೆ, ಆಯೋಜಿಸಿದ್ದ ಮೃತ ವ್ಯಕ್ತಿಯ ಅಂಗದಾನ ಸಂಗ್ರಹಣೆಯನ್ನು ಬಲಪಡಿಸುವ ಉದ್ದೇಶದಿಂದ NTORC Launchpad  ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ವೈದ್ಯಕೀಯ ವಿದ್ಯಾರ್ಥಿಗಳು ಶಿಕ್ಷಣ ಪಡೆಯುವ ಅವಧಿಯಲ್ಲಿಯೇ ಅಂಗದಾನದ ಬಗ್ಗೆ ಅರಿವು ಮೂಡಿಸುವುದು ಅಗತ್ಯ. ಮೆದುಳು ನಿಷ್ಕ್ರಿಯ ವ್ಯಕ್ತಿಗಳ ಕುಟುಂಬಗಳಿಗೆ ಸೂಕ್ತವಾದ ಉನ್ನತ ಮಾನದಂಡದ ಆಪ್ತ ಸಲಹೆಗಾರರನ್ನು ಸರ್ಕಾರಿ ಹಾಗೂ ಜಿಲ್ಲಾಸ್ಪತ್ರೆಗಳಲ್ಲಿ ನಿಯೋಜಿಸಲು ಕ್ರಮ ವಹಿಸಲಾಗುವುದು. ಸಾರ್ವಜನಿಕ – ಖಾಸಗಿ ಸಹಕಾರವನ್ನು ಉತ್ತೇಜಿಸುವುದು, ಎನ್‍ಜಿಒಗಳೊಂದಿಗೆ ಸಮಾಜದಲ್ಲಿ ಜಾಗೃತಿ ಮೂಡಿಸಲು ಸಹಕಾರ ನೀಡಲಾಗುವುದು ಎಂದರು.

ವೈದ್ಯಕೀಯ, ಕಾನೂನು ಮತ್ತು ಮಾನಸಿಕ- ಸಾಮಾಜಿಕ ಅಂಶಗಳ ಕುರಿತು ತಜ್ಞರಿಂದ ಉಪನ್ಯಾಸ ಹಾಗೂ ಚರ್ಚೆ ನಡೆಯಿತು. ಕಾರ್ಯಕ್ರಮದಲ್ಲಿ ಜೀವಸಾರ್ಥಕತೆ ಸಂಚಾಲಕ ಡಾ. ರವಿಶಂಕರ ಶೆಟ್ಟಿ ಸೇರಿದಂತೆ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I