Sunday, August 2, 2026
Homeಸೂರ್ಯಗಗನI ಗೋಪಾಲಗೌಡ ಬಡಾವಣೆಯ I ಮೂಲಭೂತ ಸೌಕರ್ಯಕ್ಕಾಗಿ ಮನವಿ I

I ಗೋಪಾಲಗೌಡ ಬಡಾವಣೆಯ I ಮೂಲಭೂತ ಸೌಕರ್ಯಕ್ಕಾಗಿ ಮನವಿ I

I ಗೋಪಾಲಗೌಡ ಬಡಾವಣೆಯ I ಮೂಲಭೂತ ಸೌಕರ್ಯಕ್ಕಾಗಿ ಮನವಿ I

ಶಿವಮೊಗ್ಗ : ಗೋಪಾಲಗೌಡ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಹಾಗೂ ವಿವಿಧ ಸಂಘಟನೆಗಳ ಪ್ರಮುಖರು ಇಂದು ಮಹಾನಗರ ಪಾಲಿಕೆಯ ಪೌರಾಯುಕ್ತ  ಮಾಯಣ್ಣ ಗೌಡ ಅವರನ್ನು ಭೇಟಿ ಮಾಡಿ ಬಡಾವಣೆಯಲ್ಲಿ ಕೈಗೊಳ್ಳಬೇಕಾದ ಕಾಮಗಾರಿಗಳ ಬಗ್ಗೆ ಹಾಗೂ ಇನ್ನಿತರ ಸಮಸ್ಯೆಗಳ ಬಗ್ಗೆ ತುರ್ತಾಗಿ ಗಮನಹರಿಸುವಂತೆ ಮನವಿ ಸಲ್ಲಿಸಿದರು,

ಎಸ್ ಬಂಗಾರಪ್ಪ ಇಂಡೋರ್ ಶಟಲ್ ಕೋರ್ಟ್ ನ ಕಾಮಗಾರಿ ತುರ್ತಾಗಿ ಕೈಗೊಳ್ಳಲು ಕ್ರಮ ಕೈಗೊಳ್ಳುವುದು, ಬಡಾವಣೆಗೆ ಹೋಗುವ ಪ್ರಮುಖ ರಸ್ತೆ ಆಯನೂರು ಗೇಟ್ ನಿಂದ ಶಾರದಾದೇವಿ ಅಂಧ ವಿಕಾಸ ಶಾಲೆಯವರೆಗೆ ಗುಂಡಿ ಬಿದ್ದಿದ್ದು ತಕ್ಷಣ ವೆಟ್ ಮಿಕ್ಸಿ ಇಂದ ಗುಂಡಿ ಮುಚ್ಚುವಂತೆ, ಹೈ ವೋಲ್ಟೇಜ್ ವಿದ್ಯುತ್ ಲೈನ್ ನ ಕೆಳಗೆ ಗಿಡಗಂಟೆಗಳು ಬೆಳೆದಿದ್ದು ಇದನ್ನು ತಕ್ಷಣ ತೆರವುಗೊಳಿಸಬೇಕೆಂದು,

ಚಂದನ ಆರೋಗ್ಯ ಪಾರ್ಕ್ ನ ತಡೆಗೋಡೆ ಕಾಮಗಾರಿ ತ್ವರಿತವಾಗಿ ಮುಗಿಸುವುದು, ಬೀದಿ ನಾಯಿಗಳ ಸಂಖ್ಯೆ ವಿಪರೀತ ಹೆಚ್ಚಳವಾಗಿದ್ದು ತಕ್ಷಣ ಸಂತಾನ ಹರಣ ಚಿಕಿತ್ಸೆ ಕೈಗೊಳ್ಳುವುದು ಹಾಗೂ ಹಂದಿಗಳ ಹೆಚ್ಚಳಕ್ಕೆ ಕಡಿವಾಣ ಹಾಕುವುದು, ಗೋಪಾಲಗೌಡ ಬಡಾವಣೆ ವಾರ್ಡ್ ಹದಿನೇಳರ ವಿಸ್ತರಣೆ ದೊಡ್ಡದಿದ್ದು ಇದಕ್ಕೆ ಹೊಂದಿಕೊಂಡಂತೆ ಸ್ವಾಮಿ ವಿವೇಕಾನಂದ ಬಡಾವಣೆಯ ಕಸ ವಿಲೇವಾರಿಯ ಜವಾಬ್ದಾರಿಯು ಇರುವುದರಿಂದ ಪೌರಕಾರ್ಮಿಕರ ಸಂಖ್ಯೆ ಕಡಿಮೆ ಇರುವುದನ್ನು ಪರಿಗಣಿಸಿ ಹೆಚ್ಚುವರಿ ಕಾರ್ಮಿಕರನ್ನು ನಿಯೋಜಿಸುವುದು, ವಾರ್ಡಿನಲ್ಲಿ ಅತಿ ಹೆಚ್ಚು ಪಾರ್ಕ್ ಗಳಿದ್ದು ನಿರ್ವಹಣೆ ಇಲ್ಲವಾಗಿದೆ ಪಾರ್ಕ್ ಗಳ ನಿರ್ವಹಣೆಗೆ ಹೆಚ್ಚುವರಿ ಸಿಬ್ಬಂದಿಗಳನ್ನು ನೇಮಿಸುವುದು, ವಾರ್ಡಿನ ಒಳಬಾಗದ ರಸ್ತೆಗಳು ಸಂಪೂರ್ಣ ಹಾಳಾಗಿದ್ದು ಆದ್ಯತೆ ಮೇರೆಗೆ ಕಾಮಗಾರಿ ಕೈಗೊಳ್ಳುವುದು

ರಾಜ ಕಾಲುವೆಯ ಕಾಮಗಾರಿ ಅವೈಜ್ಞಾನಿಕವಾಗಿದ್ದು ಮಳೆಗಾಲದಲ್ಲಿ ಬಡಾವಣೆಗೆ ನೀರು ನುಗ್ಗುತ್ತಿದ್ದು ವೈಜ್ಞಾನಿಕವಾಗಿ ಕಾಮಗಾರಿಯನ್ನು ಕೈಗೊಳ್ಳುವುದು, ಬೀದಿ ದೀಪಗಳ ನಿರ್ವಹಣೆ ಅಸಮರ್ಪಕವಾಗಿದ್ದು ಸೂಕ್ತ ಕ್ರಮ ಕೈಗೊಳ್ಳುವುದು, 24/7 ಕುಡಿಯುವ ನೀರಿನ ಯೋಜನೆ ಅವೈಜ್ಞಾನಿಕವಾಗಿದ್ದು ನೀರಿನ ಅಭಾವ ಹೆಚ್ಚಾಗಿದ್ದು ಸಮಸ್ಯೆ ನಿರ್ವಹಣೆಗೆ ತುರ್ತು ಕ್ರಮ ಕೈಗೊಳ್ಳುವುದು.

ಈ ಸಂದರ್ಭದಲ್ಲಿ ಸಂಘಟನೆಯ ಪ್ರಮುಖರಾದ ಜಿ.ಡಿ. ಮಂಜುನಾಥ್ ಟಿ.ಡಿ ಗೀತೇಂದ್ರಗೌಡ, ಜಿ.ಎಸ್. ಶಿವಕುಮಾರ್,ಚಂದನ ಪಾರ್ಕ್ ನ ಪ್ರಧಾನ ಕಾರ್ಯದರ್ಶಿ ಗುರುರಾಜ್, ಅಶೋಕ್, ರವಿ, ಬೋರೇಗೌಡ, ನಾಗೇಶ್ ರಂಗೆಗೌಡ್ರು,ಆನಂದ್ ಮತ್ತು17ನೇ ವಾರ್ಡಿನ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ  ಆರ್. ರಾಜಶೇಖರ್ ಹಾಗೂ ಇನ್ನು ಇತರರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I