I ಪತ್ರಕರ್ತರು ಸತ್ಯವನ್ನು ಬರೆದರೆ ಸಾಕು I ಎನ್ ಚೆಲುವರಾಯಸ್ವಾಮಿ I
ಪತ್ರಕರ್ತರಾದವರು ನಿಷ್ಪಕ್ಷಪಾತವಾಗಿ ಸತ್ಯವನ್ನು ಬರೆದರೆ ಸಾಕು ಸಮಾಜಕ್ಕೆ ಅದು ಸಹಕಾರಿಯಾಗುತ್ತದೆ ಎಂದು ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚೆಲುವರಾಯಸ್ವಾಮಿ ಅವರು ಹೇಳಿದರು.
ಅವರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕೆ.ಆರ್.ಎಸ್ ನಲ್ಲಿ ಆಯೋಜಿಸಲಾಗಿದ್ದ ಪತ್ರಿಕಾ ದಿನಾಚರಣೆಯ ಮತ್ತು ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ನಿವೃತ್ತ ಪತ್ರಕರ್ತರಿಗೆ ಜೀವನ ನಡೆಸಲು ಹದಿನೈದು ಸಾವಿರ ಮಾಶಾಸನ ನೀಡಲಾಗುತ್ತಿದೆ. ಇಂದು ಇಂಜಿನಿಯರಿಂಗ್ ಪದವಿ ಪಡೆದವರು ಸಹ ಹತ್ತು ಹದಿನೈದು ಸಾವಿರ ಕೆಲಸ ಮಾಡುತ್ತಿದ್ದಾರೆ, ಹದಿನೈದು ಸಾವಿರ ಕಡಿಮೆ ಮೊತ್ತವಲ್ಲ ಎಂದು ಹೇಳಿದರು.
ರಾಜ್ಯದಲ್ಲಿ ಎಲ್ಲ ಸಾರ್ವಜನಿಕರಿಗೂ ಪಂಚ ಗ್ಯಾರಂಟಿ ಯೋಜನೆಯನ್ನು ನೀಡಲಾಗುತ್ತಿದೆ. ಜೊತೆಗೆ ಗ್ರಾಮೀಣ ಭಾಗದ ಪತ್ರಕರ್ತರಿಗೆ 35 ವರ್ಷಗಳ ಸೇವೆಯ ನಂತರ ಬಸ್ ಪಾಸ್ ಉಚಿತವಾಗಿ ನೀಡಲಾಗುತ್ತಿದೆ. ಸಮಾಜದಲ್ಲಿ ಉತ್ತಮ ಜೀವನ ನಡೆಸಲು ಇಷ್ಟು ಸಾಕು. ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಪ್ರಭಾಕರ್ ಮತ್ತು ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ರವರು ಪತ್ರಕರ್ತರ ಹಿತರಕ್ಷಣೆ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಪತ್ರಕರ್ತರು ತಮ್ಮ ಅಸ್ತಿತ್ವವನ್ನು ಹಾಗೂ ಪತ್ರಿಕಾ ಧರ್ಮವನ್ನು ಉಳಿಸಿಕೊಂಡು ಹೊಗುವ ಜವಾಬ್ದಾರಿ ನಿಮ್ಮ ಮೇಲಿದೆ. ಸಮಾಜ, ರಾಜಕೀಯವನ್ನು ಒಳ್ಳೆಯ ದಾರಿಗೆ ತೆಗೆದುಕೊಂಡು ಹೊಗುವ ಹಾಗೂ ತಪ್ಪು ಗಳನ್ನು ತಿದ್ದಿ ಸರಿದಾರಿಗೆ ತರುವ ಹೊಣೆಗಾರಿಕೆ ನಿಮ್ಮ ಮೇಲಿದೆ. ಅದನ್ನು ನಿಷ್ಪಕ್ಷಪಾತವಾಗಿ ವರದಿ ಮಾಡಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಸಲಹೆಗಾರ ಕೆವಿ ಪ್ರಭಾಕರ್,ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು,ಶಾಸಕರಾದ ರವಿಕುಮಾರ್ ಗಣಿಗ,ಚಿತ್ರನಟ ಸಾದುಕೋಕಿಲ,ಜೆಡಿಎಸ್,ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಜಫ್ರುಲ್ಲಾಖಾನ್,IFWJ ಅಪರ ಪ್ರಧಾನ ಕಾರ್ಯದರ್ಶಿ ಹೆಜ್ ಬಿ ಮದನ್ ಗೌಡ,ಜಿಲ್ಲಾಧಿಕಾರಿ ಡಾ.ಕುಮಾರ್,ಸಿಇಒ ಕೆ ಆರ್ ನಂದಿನಿ, ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ರಾಜ್ಯ ಕಾರ್ಯದರ್ಶಿಗಳಾದ ಮತ್ತೀಕೆರೆ ಜಯರಾಮ್,ಸೋಮಶೇಖರ್ ಕೆರಗೋಡು,ಜಿಲ್ಲಾಧ್ಯಕ್ಷ ನವೀನ್ ಕುಮಾರ್ ಸೇರಿದಂತೆ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು


