Saturday, August 1, 2026
Homeಸೂರ್ಯಗಗನI ಸರ್ಕಾರಿ ಶಾಲೆಗೆ ಕುಡಿಯುವ ನೀರಿನ ಯಂತ್ರ ಕೊಡುಗೆ I ಜೆಸಿಐ ಸಮೃದ್ಧಿ ಘಟಕದ ಅಧ್ಯಕ್ಷ...

I ಸರ್ಕಾರಿ ಶಾಲೆಗೆ ಕುಡಿಯುವ ನೀರಿನ ಯಂತ್ರ ಕೊಡುಗೆ I ಜೆಸಿಐ ಸಮೃದ್ಧಿ ಘಟಕದ ಅಧ್ಯಕ್ಷ ನರಸಿಂಹಮೂರ್ತಿ I

I ಸರ್ಕಾರಿ ಶಾಲೆಗೆ ಕುಡಿಯುವ ನೀರಿನ ಯಂತ್ರ ಕೊಡುಗೆ I ಜೆಸಿಐ ಸಮೃದ್ಧಿ ಘಟಕದ ಅಧ್ಯಕ್ಷ ನರಸಿಂಹಮೂರ್ತಿ I

ಶಿವಮೊಗ್ಗ: ಸಾಮಾಜಿಕ ಕ್ಷೇತ್ರದಲ್ಲಿ ಜೆಸಿಐ ಸಂಸ್ಥೆ ನಿರಂತರವಾಗಿ ತೊಡಗಿಸಿಕೊಂಡು ಉತ್ತಮ ಸೇವಾ ಚಟುವಟಿಕೆಗಳನ್ನು ನಡೆಸುತ್ತಿದೆ ಎಂದು ಜೆಸಿಐ ಸಮೃದ್ಧಿ ಘಟಕದ ಅಧ್ಯಕ್ಷ ನರಸಿಂಹಮೂರ್ತಿ ಹೇಳಿದರು.

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಇಸ್ಲಾಪುರ ಸರ್ಕಾರಿ ಪ್ರಾಥಮಿಕ ಶಾಲೆಗೆ ನೀರಿನ ಶುದ್ಧೀಕರಣ ಯಂತ್ರದ ಕೊಡುಗೆ ಕಾರ್ಯಕ್ರಮದಲ್ಲಿ ಮಾತನಾಡಿ, ಜೆಸಿ ಸಂಸ್ಥೆಯು ಮಾನವೀಯ ಸೇವೆಗಳ ಜೊತೆಗೆ ವಿದ್ಯಾರ್ಥಿಗಳ ಆರೋಗ್ಯ ದೃಷ್ಟಿಯಿಂದ ಶುದ್ಧ ಕುಡಿಯುವ ನೀರಿನ ಘಟಕವನ್ನು ನೀಡುತ್ತಿದೆ. ಶುದ್ಧ ನೀರಿನ ಸೇವನೆಯಿಂದ ಮಕ್ಕಳ ಆರೋಗ್ಯ ಉತ್ತಮವಾಗುತ್ತದೆ. ಕಾಯಿಲೆಗಳಿಂದ ದೂರ ಇರಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಜೆಸಿಐ ಸಂಸ್ಥೆಯು ಸರ್ಕಾರಿ ಶಾಲೆಗಳಿಗೆ ಅಗತ್ಯ ಮೂಲಸೌಕರ್ಯ ಒದಗಿಸುವ, ಶಾಲೆಗಳ ಅಭಿವೃದ್ಧಿ ಸಹಕಾರ ನೀಡುವ ಸೇವಾ ಚಟುವಟಿಕೆಗಳನ್ನು ನಡೆಸುತ್ತಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಸೇವಾ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಉದ್ದೇಶವಿದೆ ಎಂದರು.

ಮಾಜಿ ಅಧ್ಯಕ್ಷ ಯಲ್ಲಪ್ಪ ಗೌಡ ಮಾತನಾಡಿ, ಸರ್ಕಾರದ ಸೌಲಭ್ಯಗಳ ಜತೆ ಸಂಘ ಸಂಸ್ಥೆಗಳ ನೆರವು ಸಹ ಮುಖ್ಯ. ಸರ್ಕಾರಿ ಶಾಲೆಯ ಮಕ್ಕಳಿಗೆ ಅಗತ್ಯ ಸಾಮಗ್ರಿಗಳನ್ನು ಮತ್ತು ಲೇಖನ ಸಾಮಗ್ರಿಗಳನ್ನು, ಕುಡಿಯುವ ನೀರಿನ ಯಂತ್ರವನ್ನು ವಿತರಿಸುತ್ತಿದ್ದೇವೆ ಎಂದು ತಿಳಿಸಿದರು.

ಜೆಸಿಐ ಸಮೃದ್ಧಿ ಘಟಕದ ಕಾರ್ಯದರ್ಶಿ ಗಾಯತ್ರಿ ಯಲ್ಲಪ್ಪಗೌಡ, ಉಪಾಧ್ಯಕ್ಷೆ ಅನಿತಾ ಸೀರಿಲ್, ಶಾಲೆಯ ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I