Saturday, August 1, 2026
Homeಸೂರ್ಯಗಗನI ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಯೋಗಾಭ್ಯಾಸ ಅಗತ್ಯ I ಕಲಗೋಡು ರತ್ನಾಕರ್ I

I ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಯೋಗಾಭ್ಯಾಸ ಅಗತ್ಯ I ಕಲಗೋಡು ರತ್ನಾಕರ್ I

I ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಯೋಗಾಭ್ಯಾಸ ಅಗತ್ಯ I ಕಲಗೋಡು ರತ್ನಾಕರ್ I

ಶಿವಮೊಗ್ಗ: ಯೋಗ, ಧ್ಯಾನ ಹಾಗೂ ಪ್ರಾಣಾಯಾಮದ ಅಭ್ಯಾಸದಿಂದ ಆತ್ಮವಿಶ್ವಾಸ ವೃದ್ಧಿಸುತ್ತದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ಹೇಳಿದರು.

ಕುವೆಂಪು ನಗರದ ಎನ್‌ಇಎಸ್ ಬಡಾವಣೆಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕ ಹಾಗೂ ಶ್ರೀ ಶಿವಗಂಗಾ ಯೋಗಕೇಂದ್ರದಲ್ಲಿ ಆಯೋಜಿಸಿದ್ದ ಉಚಿತ ಯೋಗ ಶಿಬಿರದ ಸಮಾರೋಪದಲ್ಲಿ ಮಾತನಾಡಿದರು. ವಯಸ್ಸು ಹೆಚ್ಚಿದಂತೆ ದೈಹಿಕ ಮತ್ತು ಆರೋಗ್ಯ ಸಮಸ್ಯೆಗಳು ಎದುರಾಗುತ್ತವೆ. ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಯೋಗಾಭ್ಯಾಸ ಮಾಡಬೇಕು. ಇದರಿಂದ ಕಾಯಿಲೆಗಳು ಬರದಂತೆ ಎಚ್ಚರ ವಹಿಸಬಹುದಾಗಿದೆ. ದೇಹ ಮತ್ತು ಮನಸ್ಸಿನ ಆರೋಗ್ಯಕ್ಕೆ ಯೋಗ ಉತ್ತಮ ಪರಿಹಾರ. ಸದಾ ಲವಲವಿಕೆಯಿಂದ ಇರಲು ನೆರವಾಗುತ್ತದೆ ಎಂದು ತಿಳಿಸಿದರು.

ಶ್ರೀ ಶಿವಗಂಗಾ ಯೋಗ ಕೇಂದ್ರ ನಗರದ 38 ಕೇಂದ್ರಗಳಲ್ಲಿ ಉಚಿತವಾಗಿ ಯೋಗ ಶಿಕ್ಷಣವನ್ನು ನೀಡುತ್ತಿರುವ ಸಂಸ್ಥೆಯಾಗಿದೆ. ಯೋಗಾಚಾರ್ಯ, ರಾಜ್ಯ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಸಿವಿ ರುದ್ರಾರಾಧ್ಯ ಅವರ ಸಾಧನೆ ಅವಿಸ್ಮರಣೀಯವಾಗಿದೆ ಎಂದು ಹೇಳಿದರು.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ರುದ್ರಮುನಿ ಸಜ್ಜನ್ ಮಾತನಾಡಿ, ಹಾನಗಲ್ ಕುಮಾರ ಸ್ವಾಮಿಗಳ ಆಶೀರ್ವಾದದಿಂದ ಹಾಗೂ ಎಲ್ಲ ಸಾರ್ವಜನಿಕರ ಸಹಕಾರದಿಂದ ಭವನ ನಿರ್ಮಾಣವಾಗಿದ್ದು, ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕು ಎಂದು ತಿಳಿಸಿದರು.

ಯೋಗಚಾರ್ಯ ಸಿ.ವಿ.ರುದ್ರಾರಾಧ್ಯ ಮಾತನಾಡಿ, ಮನೆಮನಗಳಿಗೆ ಯೋಗವನ್ನು ತಲುಪಿಸಬೇಕು. ಶಿವಮೊಗ್ಗವನ್ನು ಯೋಗ ನಗರವನ್ನಾಗಿ ಮಾರ್ಪಾಡು ಮಾಡಬೇಕೆಂಬ ಆಶಯವಿದೆ ಎಂದರು.

ಯೋಗ ಶಿಕ್ಷಕರಿಗೆ ಗೌರವಿಸಲಾಯಿತು. ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಘಟಕದ ಮಾಜಿ ಅಧ್ಯಕ್ಷ ಜಿ.ವಿಜಯ್ ಕುಮಾರ್, ಮಹಾಸಭಾ ಮಾಧ್ಯಮ ವಿಭಾಗದ ಜಿಲ್ಲಾಧ್ಯಕ್ಷ ಸೋಮನಾಥ್.ಕೆ.ಆರ್., ಖಜಾಂಚಿ ಮಲ್ಲಿಕಾರ್ಜುನ್ ಕಾನೂರ್, ಎಲ್.ಎಂ.ಮೋಹನ್, ಲವಕುಮಾರ್, ವಿಜಯ ಬಾಯರ್, ಕಾಟನ್ ಜಗದೀಶ್, ಎಚ್.ಎಸ್.ನಾಗರಾಜ್, ಶಿಲ್ಪಾ, ಸರೋಜಾ, ತಿಮ್ಮಪ್ಪ ಇತರರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I