Sunday, August 2, 2026
Homeಸೂರ್ಯಗಗನI ಸಾಮಾಜಿಕ ಸಮಸ್ಯೆಗಳ I ಪರಿಹರಿಸುವಲ್ಲಿ ಯುವಶಕ್ತಿ ಪಾತ್ರ ಅಪಾರ I ಪ್ರೊ. ಎ.ಷಣ್ಮುಖ I

I ಸಾಮಾಜಿಕ ಸಮಸ್ಯೆಗಳ I ಪರಿಹರಿಸುವಲ್ಲಿ ಯುವಶಕ್ತಿ ಪಾತ್ರ ಅಪಾರ I ಪ್ರೊ. ಎ.ಷಣ್ಮುಖ I

I ಸಾಮಾಜಿಕ ಸಮಸ್ಯೆಗಳ I ಪರಿಹರಿಸುವಲ್ಲಿ ಯುವಶಕ್ತಿ ಪಾತ್ರ ಅಪಾರ I ಪ್ರೊ. ಎ.ಷಣ್ಮುಖ I

ಶಿವಮೊಗ್ಗ: ಸಾಮಾಜಿಕ ಪರಿವರ್ತನೆಯಲ್ಲಿ ಯುವಶಕ್ತಿ, ಸಮುದಾಯ ಹಾಗೂ ರಾಜಕೀಯ ಪಕ್ಷಗಳ ಪಾತ್ರ ಮಹತ್ವದ್ದಾಗಿದೆ ಎಂದು ಕುವೆಂಪು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಪ್ರಾಧ್ಯಾಪಕ, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಎ.ಷಣ್ಮುಖ ಹೇಳಿದರು.

ದೇಶೀಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಸ್ತುತ ರಾಜಕಾರಣ ಮತ್ತು ಸಾಮಾಜಿಕ ಚಳವಳಿ ಕುರಿತು ಮಾತನಾಡಿ, ಸಾಮಾಜಿಕ ಸಮಸ್ಯೆಗಳನ್ನು ನಿವಾರಿಸಲು ಪ್ರತಿಯೊಬ್ಬ ನಾಗರಿಕನೂ ಪ್ರಜ್ಞಾಪೂರ್ವಕ  ಭಾವನೆಯೊಂದಿಗೆ ಪಾಲ್ಗೊಳ್ಳಬೇಕು ಎಂದು ತಿಳಿಸಿದರು.

ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಪ್ರೊ. ಎಂ.ವೆಂಕಟೇಶ್ ಮಾತನಾಡಿ, ವಿದ್ಯಾರ್ಥಿಗಳು ಸಮಾಜದಲ್ಲಿನ ಆಗುಹೋಗುಗಳ ಬಗ್ಗೆ ಮಾಹಿತಿ ಹೊಂದಿರುವುದು ಅಗತ್ಯ. ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಯುವಜನರು ಹೆಚ್ಚಿನ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಹೇಳಿದರು.
ವಿದ್ಯಾರ್ಥಿಗಳಿಗೆ ಪಠ್ಯ ಶಿಕ್ಷಣದ ಜತೆಯಲ್ಲಿ ಪ್ರಮುಖ ಸಂಗತಿಗಳ ಬಗ್ಗೆ ಮಾಹಿತಿ ನೀಡುವ ದೃಷ್ಟಿಯಿಂದ ಇಂತಹ ವಿಶೇಷ ಉಪನ್ಯಾಸ ಕಾರ್ಯಕ್ರಮಗಳು ಅನುಕೂಲವಾಗುತ್ತವೆ. ವಿದ್ಯಾರ್ಥಿಗಳು ಆಸಕ್ತಿಯಿಂದ ಕಲಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.

ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಐಕ್ಯೂಎಸಿ ಸಂಚಾಲಕ ಎನ್.ಕುಮಾರಸ್ವಾಮಿ, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ದುರಗಪ್ಪ ಮುಂಡಗಿ, ಪ್ರಾಧ್ಯಾಪಕರಾದ ಡಾ. ಸುರೇಶ್ ಆರ್., ಅಭಿಷೇಕ್ ಜಿ.ಎಸ್., ಸಂತೋಷ್ ಕುಮಾರ್ ಕೆ.ಹೆಚ್. ಹಾಗೂ ಇತರ ಅಧ್ಯಾಪಕರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I