Sunday, August 2, 2026
Homeಸೂರ್ಯಗಗನI ಇಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ I ರಾಜ್ಯ ಮುಖ್ಯ ಚುನಾವಣಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ...

I ಇಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ I ರಾಜ್ಯ ಮುಖ್ಯ ಚುನಾವಣಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ I ಎನ್. ರವಿಕಮಾರ್ I

I ಇಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ I ರಾಜ್ಯ ಮುಖ್ಯ ಚುನಾವಣಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ I ಎನ್. ರವಿಕಮಾರ್ I

ಶಿವಮೊಗ್ಗ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮುಖ್ಯ ಚುನಾವಣಾಧಿಕಾರಿಯಾಗಿ ಹಿರಿಯ ಪತ್ರಕರ್ತ ಶಿವಮೊಗ್ಗ ಟೆಲೆಕ್ಸ್ ಪತ್ರಿಕೆಯ ಸಂಪಾದಕ ಎನ್. ರವಿಕುಮಾರ್‌ರವರು ಇಂದು ಅಧಿಕಾರ ಸ್ವೀಕರಿಸಿದರು.


ಬೆಂಗಳೂರಿನ ಕಂದಾಯ ಭವನದಲ್ಲಿನ ಕೇಂದ್ರ ಕಛೇರಿಯಲ್ಲಿ ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲಿ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಸಂಘದ ಕಾನೂನು ಸಲಹೆಗಾರರಾದ ಗೋಪಾಲ ಗೌಡ, ಪ್ರಧಾನ ಕಾರ್ಯದರ್ಶಿ ಜೆ.ಸಿ. ಲೋಕೇಶ್, ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಹೆಚ್. ಯು. ವೈದ್ಯನಾಥ್ ಸೇರಿದಂತೆ ರಾಜ್ಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಹಾಜರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಶಿವಾನಂದ ತಗಡೂರುರವರು, ಪತ್ರಕರ್ತರ ಈ ಚುನಾವಣೆಯು ರಾಜ್ಯದ ಗಮನ ಸೆಳೆದಿದ್ದು, ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸುವ ಗುರುತರವಾದ ಜವಾಬ್ದಾರಿ ಅಧಿಕಾರಿಗಳ ಮೇಲಿದೆ. ಇದನ್ನು ಸಮರ್ಥವಾಗಿ ನಿಭಾಯಿಸುವ ವಿಶ್ವಾಸವಿದೆ ಎಂದರು. ನೂತನವಾಗಿ ಅಧಿಕಾರ ಸ್ವೀಕರಿಸಿದ ಎನ್. ರವಿಕುಮಾರ್‌ರವರು, ಚುನಾವಣೆಯ ವಿಧಾನಗಳನ್ನು ವಿವರಿಸಿ, ಎಲ್ಲರ ಸಹಕಾರ ಕೋರಿದರು.

ಇದೇ ಸಂದರ್ಭದಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್‌ರವರು, ಸಂಘದ ಕಛೇರಿಯಲ್ಲಿ ನಿರ್ಮಿಸಲಾದ ಅಪರೂಪದ ಪುಸ್ತಕ ಸಂಗ್ರಹ ನೂತನ ಗ್ರಂಥಾಲಯವನ್ನು ಉದ್ಘಾಟಿಸಿದರು. ಹಿರಿಯ ಪತ್ರಕರ್ತ ಕಂಕಮೂರ್ತಿ ಗ್ರಂಥಾಲಯ ಹಾಗೂ ಪುಸ್ತಕಗಳ ಮಹತ್ವವನ್ನು ವಿವರಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I