I ಜ್ಞಾನಗಂಗಾ ಶಾಲೆಯ ಬಾಲಕಿಯರು I ಜಿಲ್ಲಾ ಮಟ್ಟಕ್ಕೆ ಆಯ್ಕೆ I
ಶಿವಮೊಗ್ಗ : ನೆಹರೂ ಕ್ರೀಡಾಂಗಣದಲ್ಲಿ ನಡೆದ ಶಿವಮೊಗ್ಗ ತಾಲ್ಲೂಕು ಮಟ್ಟದ 14 ವರ್ಷದೊಳಗಿನ ಬಾಲಕಿಯರ ಕಬ್ಬಡ್ಡಿ ಪಂದ್ಯಾವಳಿಯಲ್ಲಿ ಗಾಡಿಕೊಪ್ಪದ ಜ್ಞಾನಗಂಗಾ ಶಾಲೆಯ ಬಾಲಕಿಯರು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ, ಈ ವಿದ್ಯಾರ್ಥಿನಿಯರಿಗೆ ತರಬೇತುದಾರರಾಗಿ ಶ್ರೀ ಯೋಗೀಶ್ ರವರು ತರಬೇತಿ ನೀಡಿದ್ದರು. ವಿದ್ಯಾರ್ಥಿನಿಯರ ಈ ಸಾಧನೆಗೆ ಸಂಸ್ಥೆಯ ಸಂಸ್ಥಾಪಕರಾದ ಬಿ.ಶೇಖರಪ್ಪ, ಕಾರ್ಯದರ್ಶಿಗಳಾದ ಎಂ.ಎನ್.ದಿನೇಶ್, ಕಾರ್ಯಕಾರಿ ಮಂಡಳಿ ಹಾಗೂ ಸಂಸ್ಥೆಯ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

