Sunday, August 2, 2026
Homeಸೂರ್ಯಗಗನI ನಂಜಪ್ಪ ಲೈಫ್‌ ಕೇರ್‌ನಲ್ಲಿ I ಹೃದಯದ ಮಾತು I

I ನಂಜಪ್ಪ ಲೈಫ್‌ ಕೇರ್‌ನಲ್ಲಿ I ಹೃದಯದ ಮಾತು I

I ನಂಜಪ್ಪ ಲೈಫ್‌ ಕೇರ್‌ನಲ್ಲಿ I ಹೃದಯದ ಮಾತು I

ಶಿವಮೊಗ್ಗ: ನಂಜಪ್ಪ ಲೈಫ್‌ ಕೇರ್‌ ಆಸ್ಪತ್ರೆಯಲ್ಲಿ ಶನಿವಾರ ವಿಶ್ವ ಹೃದಯ ದಿನದ ಅಂಗವಾಗಿ ಶಾಲಾ ಮಕ್ಕಳಿಗೆ ಆರೋಗ್ಯ ಅರಿವು ಮೂಡಿಸುವ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ನಂಜಪ್ಪ ಲೈಫ್‌ ಕೇರ್‌ ಆಸ್ಪತ್ರೆಯ ಸಿಇಒ ಡಾ.ಅವಿನಾಶ್‌, ಆಡಳಿತ ನಿರ್ದೇಶಕ ಡಾ.ಬೆನಕಪ್ಪ, ಹಾಗೂ ಡಾ.ನರೇಂದ್ರ ನಿಶಾನಿ ಮಠ ಅವರು ಉದ್ಘಾಟಿಸಿದರು.

ತಜ್ಞ ವೈದ್ಯರು ಹೃದಯದ ರಚನೆ ಮತ್ತು ಕಾರ್ಯ ವೈಖರಿ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಿದರು. ನಗರದ ೨೫ ಕ್ಕೂ ಹೆಚ್ಚು ಶಾಲೆಯ ಸುಮಾರು ೨೦೦ ಮಕ್ಕಳು ಆರ್ಟ್‌ ಫಾರ್‌ ಹಾರ್ಟ್‌ ಶೀರ್ಷಿಕೆಯಡಿ ಹೃದಯದ ಚಿತ್ರ ಬಿಡಿಸುವ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ನಂತರ ಹೃದಯದ ಆರೋಗ್ಯ ಕಾಪಾಡಿಕೊಳ್ಳುವ ಕುರಿತು ಮಕ್ಕಳಿಗೆ ಮಾಹಿತಿ ನೀಡಲಾಯಿತು. ಡಾ.ಹರೀಶ್‌, ಡಾ.ಪ್ರವೀಣ್‌ ಹಾಗೂ ಡಾ.ಅರ್ಜುನ್‌ ಅವರುಗಳು ಪ್ಯಾತ್ಯಕ್ಷಿಕೆ ಮೂಲಕ ಮಕ್ಕಳಿಗೆ ಉಪಯುಕ್ತ ಮಾಹಿತಿ ನೀಡಿದರು.

ಡಾ.ನರೇಂದ್ರ ಮತ್ತು ನರ್ಸಿಂಗ್‌ ಕಾಲೇಜಿನ ಪ್ರಾಚಾರ್ಯರಾದ ಉಮಾ ಅವರು ಬಹುಮಾನ ವಿತರಣೆ ನೆರವೇರಿಸಿದರು. ಶಾಲಾ ಮಕ್ಕಳಿಗೆ ಹೃದಯದ ಬಗ್ಗೆ ಮಾಹಿತಿ ಮತ್ತು ಡ್ರಾಯಿಂಗ್‌ ಸ್ಪರ್ಧೆ ಕಾರ್ಯಕ್ರಮ ಆಯೋಜಿಸಿರುವುದನ್ನು ಅತಿಥಿಗಳು ಪ್ರಶಂಸಿಸಿದರು

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I