I ಜೆಡಿಎಸ್ ಸಾಮಾಜಿಕ ಜಾಲತಾಣದ I ಪದಾಧಿಕಾರಿಗಳ ಸಭೆ I
ಬೆಂಗಳೂರು : ಪಕ್ಷದ ಕಚೇರಿ ಜೆ.ಪಿ. ಭವನದಲ್ಲಿ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯಾಧ್ಯಕ್ಷರಾದ ಚಂದನ್ ಹೆಚ್.ಎಸ್. ಅವರ ನೇತೃತ್ವದಲ್ಲಿ ಜೆಡಿಎಸ್ ಸಾಮಾಜಿಕ ಜಾಲತಾಣದ ಪದಾಧಿಕಾರಿಗಳ ಸಭೆ ನಡೆಸಲಾಯಿತು. ಇದೇ ವೇಳೆ ಕಾರ್ಯಕರ್ತರಿಗೆ ಪಕ್ಷದ ಸಾಮಾಜಿಕ ಜಾಲತಾಣದಲ್ಲಿ ಹೊಸ ಜವಾಬ್ದಾರಿಗಳನ್ನು ನೀಡಿ ಗೌರವಿಸಲಾಯಿತು. ಆಡಳಿತ ಪಕ್ಷದ ನ್ಯೂನ್ಯತೆಗಳು, ಹಗರಣಗಳನ್ನು ಜನರಿಗೆ ಮನದಟ್ಟು ಮಾಡುವುದು, ಸರ್ಕಾರದ ವೈಫಲ್ಯಗಳ ವಿರುದ್ಧ ಜಾಗೃತಿ ಮೂಡಿಸಲು ಸಾಮಾಜಿಕ ಜಾಲತಾಣವನ್ನು ಪರಿಣಾಮಕಾರಿ ವೇದಿಕೆಯಾಗಿ ಬಳಸಿಕೊಳ್ಳುವ ಬಗ್ಗೆ ಸಲಹೆ ಸೂಚನೆಗಳನ್ನು ನೀಡಲಾಯಿತು.

