Saturday, August 1, 2026
Homeಸೂರ್ಯಗಗನI ರಾಜ್ಯಾದ್ಯಂತ ಅದ್ದೂರಿ ಕನ್ನಡ ರಾಜ್ಯೋತ್ಸವ I ಶಕುಂತಲಾ ಚಂದ್ರಶೇಖರ್ I

I ರಾಜ್ಯಾದ್ಯಂತ ಅದ್ದೂರಿ ಕನ್ನಡ ರಾಜ್ಯೋತ್ಸವ I ಶಕುಂತಲಾ ಚಂದ್ರಶೇಖರ್ I

I ರಾಜ್ಯಾದ್ಯಂತ ಅದ್ದೂರಿ ಕನ್ನಡ ರಾಜ್ಯೋತ್ಸವ I ಶಕುಂತಲಾ ಚಂದ್ರಶೇಖರ್ I

ಶಿವಮೊಗ್ಗ: ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸುತ್ತಿದ್ದು, ಕರ್ನಾಟಕ ಏಕೀಕರಣಕ್ಕೆ ಅನೇಕ ಮಹನೀಯರು ಶ್ರಮಿಸಿದ್ದಾರೆ ಎಂದು ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಮುಖ್ಯ ಆಯುಕ್ತೆ ಶಕುಂತಲಾ ಚಂದ್ರಶೇಖರ್ ಹೇಳಿದರು.

ನಗರದ ಬಾಲಕಿಯರ ಪದವಿಪೂರ್ವ ಕಾಲೇಜು ಮತ್ತು ಸ್ಕೌಟ್ಸ್ ಮತ್ತು ಗೈಡ್ಸ್ ಸಹಯೋಗದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಕನ್ನಡ ಭಾಷೆಗಾಗಿ ನಾವೆಲ್ಲರೂ ಪಣತೊಡಬೇಕಾಗಿದೆ. ಲೇಖಕರು, ಕವಿಗಳು ಸೇರಿದಂತೆ ಹಲವು ಮಹನೀಯರು ಕರ್ನಾಟಕ ಏಕೀಕರಣಕ್ಕೆ ಕಾರಣರಾದರು ಎಂದು ತಿಳಿಸಿದರು.

ಕನ್ನಡಿಗರ ಭಾಷೆ ಚೆಂದ, ಕನ್ನಡಿಗರ ಮನವು ಅಂದ, ಕನ್ನಡಿಗರ ನಾಡು ಚಂದವೋ ಚಂದ. ಕರ್ನಾಟಕ ನಮ್ಮ ಹೆಮ್ಮೆಯ ರಾಜ್ಯ. ಕನ್ನಡ ನಮ್ಮ ಮಾತೃಭಾಷೆ. ಕನ್ನಡಾಂಬೆ ಮಕ್ಕಳಾದ ನಾವು ಕನ್ನಡ ರಾಜ್ಯೋತ್ಸವ ಆಚರಿಸುವ ಮೂಲಕ ಕನ್ನಡಾಂಬೆಗೆ ಗೌರವ ಸಲ್ಲಿಸುವುದು ಸೇರಿ ಕನ್ನಡ ಭಾಷಾಭಿಮಾನ ಮೆರೆಯಬೇಕು ಎಂದರು.

ಕಾಲೇಜಿನಲ್ಲಿ ಕನ್ನಡ ಬಾವುಟದ ಧ್ವಜಾರೋಹಣ ಜೊತೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿ ಮಂಜುಳಾ ಪ್ರಮಾಣ ವಚನ ಬೋಧಿಸಿದರು.

ಪ್ರಾಚಾರ್ಯ ಟಿ.ಎಸ್.ಮಹೇಶ್ವರಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಾರ್ಯದರ್ಶಿ ಕೆ.ವಿ.ಚಂದ್ರಶೇಖರಯ್ಯ, ಕೇಂದ್ರ ಸ್ಥಾನಿಕ ಆಯುಕ್ತ ಜಿ.ವಿಜಯಕುಮಾರ್, ಜಿಲ್ಲಾ ತರಬೇತಿ ಆಯುಕ್ತ ಎಚ್.ಶಿವಶಂಕರಪ್ಪ, ಸಹ ಜಿಲ್ಲಾ ಆಯುಕ್ತ ಮಲ್ಲಿಕಾರ್ಜುನ ಕಾನೂರು, ಗೈಡ್ ಆಯುಕ್ತೆ ಲಕ್ಷ್ಮೀ, ರೋವರ್ ಆಯುಕ್ತ ಕೆ ರವಿ., ಸ್ಥಳೀಯ ಸಂಸ್ಥೆ ತಾಲೂಕು ಕಾರ್ಯದರ್ಶಿ ರಾಜೇಶ್ ಅವಲಕ್ಕಿ, ರೇಂಜರ್ ಲೀಡರ್ ಗೀತಾ, ಭಾರತಿ, ಸುಧಾ ಹಾಗೂ ಕಾಲೇಜಿನ ಎಲ್ಲಾ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I