Saturday, August 1, 2026
Homeಸೂರ್ಯಗಗನI ಕನಕದಾಸರ ಕೀರ್ತನೆಗಳಲ್ಲಿನ ಸಂದೇಶ ಅರಿತುಕೊಳ್ಳಿ I ಡಾ. ಎಂ.ವೆಂಕಟೇಶ್ I

I ಕನಕದಾಸರ ಕೀರ್ತನೆಗಳಲ್ಲಿನ ಸಂದೇಶ ಅರಿತುಕೊಳ್ಳಿ I ಡಾ. ಎಂ.ವೆಂಕಟೇಶ್ I

I ಕನಕದಾಸರ ಕೀರ್ತನೆಗಳಲ್ಲಿನ ಸಂದೇಶ ಅರಿತುಕೊಳ್ಳಿ I ಡಾ. ಎಂ.ವೆಂಕಟೇಶ್ I

ಶಿವಮೊಗ್ಗ: ಸಂತ ಶ್ರೇಷ್ಠ ಕನಕದಾಸರು ಕೀರ್ತನೆಗಳಲ್ಲಿ ನೀಡಿರುವ ಸಂದೇಶಗಳನ್ನು ಪ್ರತಿಯೊಬ್ಬರೂ ಅರಿತುಕೊಂಡು ಸನ್ಮಾರ್ಗದಲ್ಲಿ ಜೀವನ ಮುನ್ನಡೆಸಬೇಕು ಎಂದು ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ. ಎಂ.ವೆಂಕಟೇಶ್ ಹೇಳಿದರು.

ದೇಶೀಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಆಯೋಜಿಸಿದ್ದ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ಕನಕ ನಮಗೆ ಜಾತಿಯಿಂದ ಮುಖ್ಯವಾಗಬಾರದು. ಅವರ ನಡೆ, ನುಡಿ, ಅವರ ಕೀರ್ತನೆಗಳನ್ನು ಸೂಕ್ಷ್ಮವಾಗಿ ಅರ್ಥೈಸಿಕೊಳ್ಳಬೇಕು. ಸಮಾನತೆಯ ಸಮಾಜದ ಕನಸು ಕಂಡು ಜಾಗೃತಿ ಮೂಡಿಸಿದರು ಎಂದು ತಿಳಿಸಿದರು.

ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಮೋಹನ್‌ಕುಮಾರ್ ಮಾತನಾಡಿ, ಕನಕದಾಸರು ಒಬ್ಬ ಸಂತ ಕವಿಯಾಗಿದ್ದು, ಸಮಾಜದ ಅಂಕು ಡೊಂಕುಗಳನ್ನು ತಿದ್ದಿದ ಮಹಾತ್ಮರು ಎಂದು ತಿಳಿಸಿದರು.

ಅಲ್ ಮೊಹಮ್ಮದ್ ಬಿಎಡ್ ಕಾಲೇಜಿನ ಪ್ರಾಚಾರ್ಯ ಡಾ. ಮೋಹನ್ ಎಸ್ ಮಾತನಾಡಿ, ನಮ್ಮ ಅರಿವಿನ ವಿಸ್ತಾರ ಮಾಡಿದವರಲ್ಲಿ ದಾಸಶ್ರೇಷ್ಠರು ಕನಕರು. ಇವರ ಸಾಹಿತ್ಯವು ಭಿನ್ನವಾಗಿದ್ದು ನಮ್ಮ ತಿಳುವಳಿಕೆ ನವಿಕರಿಸುತ್ತದೆ ಎಂದು ಹೇಳಿದರು. ಪತ್ರಕರ್ತ ಗಣೇಶ್ ಬಿಳಗಿ ಮಾತನಾಡಿ, ಕನಕದಾಸರ ಸಾಮಾಜಿಕ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು.

ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಐಕ್ಯೂಎಸಿ ಸಂಯೋಜಕ ಎನ್.ಕುಮಾರಸ್ವಾಮಿ, ಸಾಂಸ್ಕೃತಿಕ ಸಮಿತಿ ಸಂಚಾಲಕಿ ಕೇತನಾ ಆರ್ತಿ, ರಾಜೀವ್, ಕನ್ನಡ ವಿಭಾಗದ ಡಾ. ಡಿ.ಬಿ.ಶಿವರುದ್ರಪ್ಪ, ಡಾ. ಎಸ್.ಕೆ.ಮಂಜುನಾಥ್ ಉಪಸ್ಥಿತರಿದ್ದರು. ಕನಕದಾಸರ ಕೀರ್ತನೆಗಳನ್ನು ವಿದ್ಯಾರ್ಥಿಗಳು ಮತ್ತು ಬೋಧಕೇತರ ವರ್ಗದವರು ಹಾಡಿದರು. ಸಹಾಯಕ ಪ್ರಾಧ್ಯಾಪಕರಾದ ಅಭಿನಯ ಮತ್ತು ಲಾವಣ್ಯ ಕಾರ್ಯಕ್ರಮ ನಿರೂಪಿಸಿದರು. ಹರ್ಷಿತಾ ಸ್ವಾಗತಿಸಿದರು. ರಮ್ಯಾ ವಂದನಾರ್ಪಣೆ ನಡೆಸಿಕೊಟ್ಟರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I