Saturday, August 1, 2026
Homeಸೂರ್ಯಗಗನI ಡಾ.ಪಿ.ನಾರಾಯಣ್ ಅವರಿಗೆ I ರೋಟರಿ ಜೀವಮಾನ ಸಾಧನೆ ಪ್ರಶಸ್ತಿ I

I ಡಾ.ಪಿ.ನಾರಾಯಣ್ ಅವರಿಗೆ I ರೋಟರಿ ಜೀವಮಾನ ಸಾಧನೆ ಪ್ರಶಸ್ತಿ I

I ಡಾ.ಪಿ.ನಾರಾಯಣ್ ಅವರಿಗೆ I ರೋಟರಿ ಜೀವಮಾನ ಸಾಧನೆ ಪ್ರಶಸ್ತಿ I
ಶಿವಮೊಗ್ಗ: ರೋಟರಿ ಸಂಸ್ಥೆ ‌ನೀಡುವ ‘ರೋಟರಿ ಪೋಲಿಯೊ ಜೀವಮಾನ ಸಾಧನೆ ಪ್ರಶಸ್ತಿ’ ಪ್ರಕಟಿಸಿದ್ದು, ನಗರದ ಖ್ಯಾತ ವೈದ್ಯ, ಹಿರಿಯ ರೊಟೇರಿಯನ್ ಡಾ.ಪಿ.ನಾರಾಯಣ್ ಅವರಿಗೆ ಈ ಪ್ರಶಸ್ತಿ ಲಭಿಸಿದೆ. ಶನಿವಾರ ದೆಹಲಿಯಲ್ಲಿ ನಡೆದ ಭಾರತ, ಪಾಕಿಸ್ತಾನ, ಶ್ರೀಲಂಕ, ಬಾಂಗ್ಲಾದೇಶ, ನೇಪಾಳ, ಭೂತಾನದ ಅಂತರಾಷ್ಟ್ರೀಯ ರೋಟರಿ ಸಮಾವೇಶದಲ್ಲಿ ಈ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಭಾರತದಲ್ಲಿ ಪೋಲಿಯೊ ನಿರ್ಮೂಲನಾ ಮಿಷನ್ ಗಾಗಿ ಅತ್ಯಂತ ಮಹತ್ತರ ಕೊಡುಗೆಗಳನ್ನು ನೀಡಿರುವ ಕೀರ್ತಿ ಡಾ.ಪಿ.ನಾರಾಯಣ್ ಅವರಿಗೆ ಸಲ್ಲುತ್ತದೆ. 1998 ರಿಂದ 2014 ರವರೆಗೆ ಪೋಲಿಯೊ ವಿರುದ್ಧ ಹೋರಾಟದಲ್ಲಿ ಸಕ್ರಿಯರಾದ ಅವರು ಭಾರತದ ನೂರಾರು ಹಳ್ಳಿಗಳಿಗೆ ತಲುಪಿ, ಪೋಲಿಯೊ ವಿರುದ್ಧ ಜಾಗೃತಿ ಹಾಗೂ ಲಸಿಕೆಯನ್ನು ನೀಡುವಲ್ಲಿ ಯಶಸ್ವಿಯಾಗಿದ್ದಾರೆ.  ಪೋಲಿಯೊ ಪ್ಲಸ್ ರಾಷ್ಟ್ರೀಯ ಸಮಿತಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತ, ‘ಪೋಲಿಯೊ ನಾರಾಯಣ’ ಎಂದೇ ಖ್ಯಾತರಾಗಿದ್ದಾರೆ.
ಪೋಲಿಯೊ ವಿರುದ್ಧ ಕಾರ್ಯಕ್ರಮದ ಅನುಷ್ಟಾನಕ್ಕಾಗಿ, ಡಬ್ಲು.ಹೆಚ್.ಓ, ಯುನಿಸೆಫ್‌, ಸಿಡಿಸಿ, ಬಿಲ್ಗೇಟ್ಸ್‌ ಫೌಂಡೇಷನ್‌ ನಂತಹ ಸಂಸ್ಥೆಗಳನ್ನು ಒಂದೆಡೆ ಕ್ರೋಡಿಕರಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಟ್ರಬಲ್‌ ಶೂಟರ್‌ ನಂತೆ ಕಾರ್ಯನಿರ್ವಹಿಸಿದ್ದ ನಾರಾಯಣ್‌ ಅವರು ರೋಟರಿ ಸಮೂಹದ ಪ್ರೇರಣೆ, ಪಲ್ಸ್‌ ಪೋಲಿಯೊ ಬಗ್ಗೆ ಜನಜಾಗೃತಿ ಹಾಗೂ ಲಸಿಕೆ ಬಗ್ಗೆಯಿದ್ದ ಪ್ರತಿರೋಧಗಳನ್ನು ಸಾರ್ವಜನಿಕರಿಗೆ ಮನ ಒಲಿಸುವಂತಹದ್ದು ಇವರ ಕಾರ್ಯಸೂಚಿಯಾಗಿತ್ತು.
ಪೋಲಿಯೊ ಮುಕ್ತ ಭಾರತ ನಿರ್ಮಾಣ ಕಾರ್ಯದಲ್ಲಿ ಅವಿರತ ಶ್ರಮಿಸಿದ ನಾರಾಯಣ್ ಅವರ ಕೊಡುಗೆಗಳನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I