Saturday, August 1, 2026
Homeಸೂರ್ಯಗಗನI ಪಟೇಲ್ ಸಾಮಿಲ್ ಹಿಂಭಾಗದ ಶರಾವತಿ ನಗರದಲ್ಲಿ ಟ್ರಾಫಿಕ್ ಸಮಸ್ಯೆ I ವೃತ್ತ ನಿರೀಕ್ಷಕ ದೇವರಾಜ್...

I ಪಟೇಲ್ ಸಾಮಿಲ್ ಹಿಂಭಾಗದ ಶರಾವತಿ ನಗರದಲ್ಲಿ ಟ್ರಾಫಿಕ್ ಸಮಸ್ಯೆ I ವೃತ್ತ ನಿರೀಕ್ಷಕ ದೇವರಾಜ್ ಬೇಟಿ, ಬ್ಯಾರಿಕೇಡ್ ಅಳವಡಿಕೆ I

I ಪಟೇಲ್ ಸಾಮಿಲ್ ಹಿಂಭಾಗದ ಶರಾವತಿ ನಗರದಲ್ಲಿ ಟ್ರಾಫಿಕ್ ಸಮಸ್ಯೆ I ವೃತ್ತ ನಿರೀಕ್ಷಕ ದೇವರಾಜ್ ಬೇಟಿ, ಬ್ಯಾರಿಕೇಡ್ ಅಳವಡಿಕೆ I

ಶಿವಮೊಗ್ಗ:  ನಗರದ ಸಾಗರ ರಸ್ತೆಯ ಆಯನೂರು ಗೇಟ್‌ನಿಂದ ಆಟೋ ಕಾಂಪ್ಲೆಕ್ಸ್‌ಗೆ ಹೋಗುವ ಭಾರಿ ಮತ್ತು ಇತರೆ ನಾಲ್ಕು ಚಕ್ರ ವಾಹನಗಳು ಆಟೋ ಕಾಂಪ್ಲೆಕ್ಸ್‌ನ ಮುಖ್ಯ ರಸ್ತೆಯಲ್ಲಿ ಹೋಗಬೇಕಾಗಿದ್ದು, ಪಟೇಲ್ ಸಾಮಿಲ್ ಹಿಂಭಾಗದ ಕಿರಿದಾದ ರಸ್ತೆಯಲ್ಲಿ ಚಲಿಸುತ್ತಿದ್ದು, ಇದರಿಂದ ಅಲ್ಲಿಯ ನಿವಾಸಿಗಳಿಗೆ ತುಂಬಾ ತೊಂದರೆ ಮತ್ತು ಕಿರಿಕಿರಿ ಉಂಟಾಗುತ್ತಿದ್ದು, ಪದೇ ಪದೇ ವಾಹನಗಳು ಜಾಮ್ ಆಗಿ ಓಡಾಡಲು ಕೂಡ ತುಂಬಾ ತೊಂದರೆಯಾಗಿದ್ದು, ಅನೇಕ ಸಾರಿ ವಾಹನಗಳ ಮಧ್ಯೆ ಅಪಘಾತ ಉಂಟಾಗಿರುತ್ತದೆ.

ಅಲ್ಲದೆ, ಆ ಪ್ರದೇಶದಲ್ಲಿ ಸಣ್ಣ ಪುಟ್ಟ ಮಕ್ಕಳು ಹಾಗೂ ಶಾಲಾ ಮಕ್ಕಳು ಓಡಾಡುವುದು ದುಸ್ತರವಾಗಿದ್ದು, ಈ ಬಗ್ಗೆ ವಾಹನದ ಮಾಲೀಕರಿಗೆ ಅನೇಕ ಬಾರಿ ಮನವಿ ಮಾಡಿದರೂ ಅವರ ಮಾರ್ಗವನ್ನು ಬದಲಿಸಿರುವುದಿಲ್ಲ. ಈ ಬಗ್ಗೆ ಅಲ್ಲಿಯ ನಿವಾಸಿಗಳು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ರವರಿಗೆ ಮನವಿ ಸಲ್ಲಿಸಿದ್ದು, ಅವರು ಅಲ್ಲಿನ ಟ್ರಾಫೀಕ್ ವೃತ್ತ ನಿರೀಕ್ಷಕರಾದ ದೇವರಾಜ್ ಇವರಿಗೆ ಸಮಸ್ಯೆಯನ್ನು ಬಗೆಹರಿಸುವಂತೆ ನಿರ್ದೇಶನ ನೀಡಿದ್ದು, ಬುಧವಾರ ವೃತ್ತ ನಿರೀಕ್ಷಕರಾದ ದೇವರಾಜ್ ಇವರು ಮನವಿಗೆ ಕೂಡಲೇ ಸ್ಪಂದಿಸಿ ಅವರ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ಆಗಮಿಸಿ ಪಟೇಲ್ ಸಾಮಿಲ್ ಹಿಂಭಾಗದ ಕಿರು ರಸ್ತೆಯ ಎರಡೂ ಕಡೆಗಳಲ್ಲಿ ಬ್ಯಾರಿಕೇಡ್‌ ನ್ನು ಹಾಕಿ ನಾಲ್ಕು ಚಕ್ರ ವಾಹನಗಳ ಓಡಾಟವನ್ನು ನಿರ್ಬಂಧಿಸಿರುತ್ತಾರೆ.

ಆದ್ದರಿಂದ ಪಟೇಲ್ ಸಾಮಿಲ್ ಹಿಂಭಾಗದ ಶರಾವತಿ ನಗರ ನಿವಾಸಿಗಳು ತಮ್ಮ ಮನವಿಗೆ ಕೂಡಲೇ ಸ್ಪಂದಿಸಿದ ಪೊಲೀಸ್ ವರಿಷ್ಠಾಧಿಕಾರಿಗಳಾದ ಮಿಥುನ್ ಕುಮಾರ್ ಇವರಿಗೆ ಹಾಗೂ ಟ್ರಾಫಿಕ್ ವೃತ್ತ ನಿರೀಕ್ಷಕರಾದ  ದೇವರಾಜ್ ಮತ್ತು ಅವರ ಸಿಬ್ಬಂದಿಗಳಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ ಎಂದು ನಿವಾಸಿಗಳ ಪರವಾಗಿ ಟಿ.ರಮೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I