Saturday, August 1, 2026
Homeಸೂರ್ಯಗಗನI ಇನ್ನರ್‌ವ್ಹೀಲ್ ಕ್ಲಬ್‌ಗಳಿಂದ ಜಾಗೃತಿ ವಾಕಥಾನ್ I

I ಇನ್ನರ್‌ವ್ಹೀಲ್ ಕ್ಲಬ್‌ಗಳಿಂದ ಜಾಗೃತಿ ವಾಕಥಾನ್ I

I ಇನ್ನರ್‌ವ್ಹೀಲ್ ಕ್ಲಬ್‌ಗಳಿಂದ ಜಾಗೃತಿ ವಾಕಥಾನ್ I

ಶಿವಮೊಗ್ಗ: ಮಹಿಳೆಯರ ಮೇಲಿನ ಹಿಂಸಾಚಾರದ ವಿರುದ್ಧ ಶಿವಮೊಗ್ಗ ನಗರದ ಐದು ಇನ್ನರ್‌ವ್ಹೀಲ್ ಕ್ಲಬ್‌ಗಳಿಂದ ಸ್ಟೆಪ್ ಅಪ್ ಮತ್ತು ಸ್ಪೀಕ್ ಔಟ್ ವಿಷಯದಡಿ “ಯುನೈಟ್ ಆಂಡ್ ಆರೇಂಜ್ ದಿ ವರ್ಲ್ಡ್” ಸಾರ್ವಜನಿಕ ಜಾಗೃತಿ ರ‍್ಯಾಲಿ ವಾಕಥಾನ್ ಆಯೋಜಿಸಲಾಗಿತ್ತು.

ಮಹಿಳೆಯರ ಮೇಲಿನ ಹಿಂಸಾಚಾರದ ವಿರುದ್ಧ ಧ್ವನಿ ಎತ್ತಲು, ಸಮಾಜದ ಕಲ್ಯಾಣ ಕಾಪಾಡಲು ಮತ್ತು ಮಹಿಳೆಯರು ಗೌರವಯುತ ಜೀವನ ನಡೆಸುವಂತೆ ರಕ್ಷಣೆಯನ್ನು ಖಚಿತಪಡಿಸಲು ಉಪ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ಮಹಿಳೆ ಒಂಟಿಯಾಗಿ ಓಡಾಡದ ಪರಿಸ್ಥಿತಿ ಇದೆ. ದರೋಡೆ, ಆತ್ಯಾಚಾರಗಳು ಹೆಚ್ಚಾಗುತ್ತಿವೆ. ಇದಕ್ಕೆ ಪರಿಹಾರವಾಗಿ ಶಾಂತಿ ಸುವ್ಯವಸ್ಥೆ ಕಾಪಾಡಲು ಮಹಿಳೆಯರಿಗೆ ಸೂಕ್ತ ರೀತಿ ಭದ್ರತೆ ನೀಡುವಂತೆ ಮನವಿ ಮೂಲಕ ಆಗ್ರಹಿಸಲಾಯಿತು.

ವಾಕಥಾನ್ ನಗರದ ಸಹ್ಯಾದ್ರಿ ಶಾಲೆಯಿಂದ ಆರಂಭಗೊಂಡು ಜಾಗೃತಿ ಸಂದೇಶದ ಘೋಷಣೆಗಳನ್ನು ಸಾರಲಾಯಿತು. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ವಾಕಥಾನ್ ಸಮಾರೋಪಗೊಂಡಿತು. ಮಹಿಳೆಯರ ಮೇಲಿನ ಹಿಂಸಾಚಾರ ತಡೆಗಟ್ಟುವ ಅಗತ್ಯ ಹೇಳುವ ಬೀದಿನಾಟಕವನ್ನು ಬಿಎಸ್‌ಎಸ್ ಸರ್ಜಿ ನರ್ಸಿಂಗ್ ವಿದ್ಯಾರ್ಥಿಗಳು ಪ್ರದರ್ಶಿಸಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಎಂ.ಎಸ್.ಸಂತೋಷ್, ಪಿಡಿಸಿ ವಾರಿಜಾ ಜಗದೀಶ್, ಭಾರತಿ ಚಂದ್ರಶೇಖರ್, ಇನ್ನರ್‌ವ್ಹೀಲ್ ಜಿಲ್ಲಾಧ್ಯಕ್ಷೆ ಶಬರಿ ಕಡಿದಾಳ್, ಐದು ಇನ್ನರ್‌ವ್ಹೀಲ್ ಕ್ಲಬ್ ಅಧ್ಯಕ್ಷರಾದ ವೀಣಾ ಸುರೇಶ್, ಅನ್ನಪೂರ್ಣ ರಂಗರಾಜನ್, ಶೀಲಾ ಸುರೇಶ್, ಲತಾ ರಮೇಶ್, ಶಾರದಾ ಬಸವರಾಜ್, ಮಹಿಳಾ ಕಲ್ಯಾಣ ಅಧಿಕಾರಿ ಶಶಿರೇಖಾ, ಕಲಾವಿದೆ ಎಂ.ವಿ.ಪ್ರತಿಭಾ, ಐದು ಕ್ಲಬ್‌ಗಳ ಸದಸ್ಯರು, ಕಾಲೇಜು ಉಪನ್ಯಾಸಕರು, ವಿದ್ಯಾರ್ಥಿಗಳು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I