Sunday, August 2, 2026
Homeಸೂರ್ಯಗಗನI ನಗರದಲ್ಲಿ ಮಾನವ ಬಂಧುತ್ವ ವೇದಿಕೆಯಿಂದ I ಅಂಬೇಡ್ಕರ್ ಪರಿನಿರ್ವಾಣ ದಿನ ಆಚರಣೆ I

I ನಗರದಲ್ಲಿ ಮಾನವ ಬಂಧುತ್ವ ವೇದಿಕೆಯಿಂದ I ಅಂಬೇಡ್ಕರ್ ಪರಿನಿರ್ವಾಣ ದಿನ ಆಚರಣೆ I

I ನಗರದಲ್ಲಿ ಮಾನವ ಬಂಧುತ್ವ ವೇದಿಕೆಯಿಂದ I ಅಂಬೇಡ್ಕರ್ ಪರಿನಿರ್ವಾಣ ದಿನ ಆಚರಣೆ I

ಶಿವಮೊಗ್ಗ: ನಗರದಲ್ಲಿ ಮಾನವ ಬಂಧುತ್ವ ವೇದಿಕೆ ಹಾಗೂ ಸರ್ವೋದಯ ವ್ಯಸನ ಮುಕ್ತ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಪರಿನಿರ್ವಾಣ ದಿನವನ್ನು ಶ್ರದ್ಧಾ ಪೂರ್ವಕವಾಗಿ ಆಚರಿಸಲಾಯಿತು.

ಸರ್ವೋದಯ ವ್ಯಸನ ಮುಕ್ತ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾನವ ಬಂಧುತ್ವ ವೇದಿಕೆಯ ಸಂಚಾಲಕರಾದ ನವೀನ್ ತಲಾರಿ ಅಧ್ಯಕ್ಷತೆ ವಹಿಸಿದರು. ಕೇಂದ್ರದ ಮುಖ್ಯಸ್ಥ ಪ್ರಶಾಂತ್ ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಆರಂಭಗೊಂಡು ಸುಮಾರು 50ಕ್ಕೂ ಹೆಚ್ಚು ಮಂದಿ ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ನವೀನ್ ತಲಾರಿಯವರು, “ಅಂಬೇಡ್ಕರ್ ಅವರು ಕಡಿದ ಹಾದಿ, ಅವರು ಕಟ್ಟಿಕೊಟ್ಟ ಸಂವಿಧಾನ ಹಾಗೂ ಸಮಾನತೆಯ ತತ್ವಗಳು ಇಂದಿಗೂ ಸಮಾಜಕ್ಕೆ ದಾರಿ ದೀಪವಾಗಿವೆ,” ಎಂದು ತಿಳಿಸಿದರು. ಅವರು ಅಂಬೇಡ್ಕರ್ ಬೋಧನೆಗಳ ಅಗತ್ಯತೆಯನ್ನು ಯುವ ಪೀಳಿಗೆಗೆ ತಿಳಿಸುವುದು ಕಾಲದ ಅವಶ್ಯಕತೆ ಎಂದೂ ಹೇಳಿದರು.

ಮುಖ್ಯ ಅತಿಥಿಯಾಗಿ ಮಾತನಾಡಿದ ಪ್ರಶಾಂತ್ ಅವರು, “ಅಂಬೇಡ್ಕರ್ ಅವರ ಜೀವನ ಚರಿತ್ರೆ, ಅವರ ತ್ಯಾಗ, ಜ್ಞಾನಪಿಪಾಸೆ ಮತ್ತು ಸಮಾಜ ಪರಿವರ್ತನೆಯ ದೃಷ್ಟಿಕೋನ ಪ್ರತಿಯೊಬ್ಬರಿಗೂ ಪ್ರೇರಣಾದಾಯಕ,” ಎಂದರು.

ಈ ಸಂದರ್ಭದಲ್ಲಿ ಸರ್ವೋದಯ ವ್ಯಸನ ಮುಕ್ತ ಕೇಂದ್ರದ ಸಿಬ್ಬಂದಿ, ಮಾನವ ಬಂಧುತ್ವ ವೇದಿಕೆಯ ಪದಾಧಿಕಾರಿಗಳು ಹಾಗೂ ಕೇಂದ್ರದ ಅಭ್ಯರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಅಂಬೇಡ್ಕರ್ ಚಿಂತನೆಗಳ ಕುರಿತು ಸಂವಾದ ನಡೆಸಿದರು.

ಕಾರ್ಯಕ್ರಮ ಕೊನೆಯಲ್ಲಿ ಅಂಬೇಡ್ಕರ್ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ, ಸಾಮಾಜಿಕ ಬಾಂಧವ್ಯ ಹಾಗೂ ಮಾನವೀಯ ಮೌಲ್ಯಗಳನ್ನು ಉತ್ತೇಜಿಸುವ ಸಂಕಲ್ಪ ಕೈಗೊಳ್ಳಲಾಯಿತು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I