Sunday, August 2, 2026
Homeಸೂರ್ಯಗಗನI ಜಿಲ್ಲಾ ರಕ್ಷಣಾಧಿಕಾರಿಗಳಾದ ಜಿ.ಕೆ.ಮಿಥುನ್ ಕುಮಾರ್ ರವರಿಂದ I ನಿವೃತ್ತ ಪೊಲೀಸ್ ಅಧಿಕಾರಿಗಳ ಸಂಘದ ಕಚೇರಿ...

I ಜಿಲ್ಲಾ ರಕ್ಷಣಾಧಿಕಾರಿಗಳಾದ ಜಿ.ಕೆ.ಮಿಥುನ್ ಕುಮಾರ್ ರವರಿಂದ I ನಿವೃತ್ತ ಪೊಲೀಸ್ ಅಧಿಕಾರಿಗಳ ಸಂಘದ ಕಚೇರಿ ಕಟ್ಟಡದ ಗುದ್ದಲಿ ಪೂಜೆ I

I ಜಿಲ್ಲಾ ರಕ್ಷಣಾಧಿಕಾರಿಗಳಾದ ಜಿ.ಕೆ.ಮಿಥುನ್ ಕುಮಾರ್ ರವರಿಂದ I ನಿವೃತ್ತ ಪೊಲೀಸ್ ಅಧಿಕಾರಿಗಳ ಸಂಘದ ಕಚೇರಿ ಕಟ್ಟಡದ ಗುದ್ದಲಿ ಪೂಜೆ I

ಶಿವಮೊಗ್ಗ : ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ನೂತನ ಕಟ್ಟಡದ ಭೂಮಿಯ ಗುದ್ದಲಿ ಪೂಜಾ ಕಾರ್ಯಕ್ರಮ ಶಿಲಾನ್ಯಾಸವನ್ನು ಜಿಲ್ಲಾ ರಕ್ಷಣಾಧಿಕಾರಿಗಳಾದ ಜಿ.ಕೆ.ಮಿಥುನ್ ಕುಮಾರ್ ರವರು ನೆರವೇರಿಸಿದರು.

ಇಂದು ಬೆಳಿಗ್ಗೆ ಶಿವಮೊಗ್ಗ ನಗರದ ಡಿಎಆರ್ ಪೊಲೀಸ್ ಕ್ವಾಟ್ರಸ್ ಆವರಣದಲ್ಲಿರುವ ಶಿವಮೊಗ್ಗ ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಹೆಸರಿಗೆ ಮಂಜೂರು ಆಗಿರುವ ಜಾಗದಲ್ಲಿ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿತು.ಇದೇ ಸಂದರ್ಭದಲ್ಲಿ ಜಿಲ್ಲಾರಕ್ಷಣಾಧಿಕಾರಿಗಳಾದ ಜಿ.ಕೆ.ಮಿಥುನ್ ಕುಮಾರ್ ಇವರಿಗೆ ಸನ್ಮಾನಿಸಿ ಗೌರವಿಸಲಾಯಿತು.

ನಂತರ ಜಿಲ್ಲಾರಕ್ಷಣಾಧಿಕಾರಿಗಳಾದ ಜಿ.ಕೆ.ಮಿಥುನ್ ಕುಮಾರ್ ರವರು ಮಾತನಾಡಿ ಶಿವಮೊಗ್ಗ ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರ ಮತ್ತು ಪಧಾದಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರ ಹಾಗೂ ಸದಸ್ಯರು ಗಳ ಬಹುದಿನಗಳ ಕನಸು ಇದೀಗ ನನಸಾಗಿದೆ ಅವರ ಬೇಡಿಕೆ ಮನವಿ ಈಡೇರಿದೆ.ಈ ನೂತನ ಕಟ್ಟಡ ನಿರ್ಮಾಣಕ್ಕೆ ಬೇಕಾದ ಎಲ್ಲಾ ಸಹಕಾರ ಕೊಡುವುದಾಗಿ ತಿಳಿಸುತ್ತಾ ಅತ್ಯುತ್ತಮ ವಾದ ಬಹುಮಹಡಿ ಕಟ್ಟಡವನ್ನು ನಿರ್ಮಿಸಿ ಎಂದು ಶುಭಹಾರೈಸಿದರು. ನಿವೃತ್ತಿ ಆದ ನಂತರ ನಾವು ಸಹ ಒಂದು ದಿವಸ ಈ ಕಟ್ಟಡದಲ್ಲಿ ಬಂದು ಕೂತುಕೊಳ್ಳಬೇಕಾಗುತ್ತದೆ. ಪೊಲೀಸ್ ಇಲಾಖೆಯಿಂದ ಏನು ಸಹಕಾರ ಬೇಕು ಎಲ್ಲಾರೀತಿಯ ಆರ್ಥಿಕ ಸಹಾಯವನ್ನು ಕೂಡ ಮಾಡಲಾಗುತ್ತದೆ ಎಂದರು.

ಪ್ರಾಸ್ತಾವಿಕ ವಾಗಿ ಸಂಘದ ಅಧ್ಯಕ್ಷರಾದ ಹೆಚ್.ಈ.ಮಂಜಪ್ಪ ಇವರು ಮಾತನಾಡುತ್ತಾ ಸಂಘ ಅಸ್ತಿತ್ವಕ್ಕೆ ಬಂದು 28 ವರ್ಷವಾಗಿದೆ.ಇತ್ತೀಚಿಗೆ ಡಿ.ಜಿ.ಮತ್ತು IGP ಸಾಹೇಬ ರವರು ಶಿವಮೊಗ್ಗಕ್ಕೆ ಬಂದಾಗ ಸಂಘದ ಕಟ್ಟಡದ ಸಲುವಾಗಿ ಜಾಗ ಮಂಜೂರಾತಿ ಮಾಡುವಂತೇ ಮನವಿ ಸಲ್ಲಿಸಲಾಗಿತ್ತು, ಅದನ್ನು ಜಿಲ್ಲಾರಕ್ಷಣಾಧಿಕಾರಿಗಳು ಕೂಡಲೇ ಬಹುಬೇಗನೇ ನಮ್ಮ ಮನವಿಯ ಅರ್ಜಿಯನ್ನು ಶಿಫಾರಸ್ಸು ಮಾಡಿ ಕಳುಹಿಸಿದ ಮೇರೆಗೆ ಇದೀಗ 30×40 ಜಾಗ ಮಂಜೂರು ಆಯಿತು ಎಂದು ಅವರಿಬ್ಬರಿಗೂ ಸಂಘದ ಪರವಾಗಿ ಧನ್ಯವಾದಗಳನ್ನು ತಿಳಿಸಿದರು.ಡಿ.ಜಿ ಮತ್ತು ಐಜಿಪಿ ಡಾ. ಎಂ.ಎ.ಸಲೀಂ ಇವರನ್ನು ಸ್ಮರಿಸಿದರು.

ಆದಷ್ಟು ಬೇಗನೇ ಕಟ್ಟಡದ ಕಾಮಗಾರಿಯನ್ನು ಪ್ರಾರಂಬಿಸಲಾಗುಗುವುದು .ಸಂಘದ ಎಲ್ಲಾ ಸದಸ್ಯರುಗಳ ಸಹಕಾರ ಅತ್ಯಗತ್ಯ ಮತ್ತು ಆರ್ಥಿಕವಾಗಿ ಸಹಾಯ ಮಾಡಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಶಿವಮೊಗ್ಗ ಅಡಿಷನಲ್ ಎಸ್.ಪಿ,ಡಿವೈಎಸ್ಪಿ,ಡಿಎಅರ್,ಡಿವೈಎಸ್ಪಿ,ಆರ್.ಪಿ.ಐ ಮತ್ತು ಸಂಘದ ಎಲ್ಲಾ ಪಧಾದಿಕಾರಿಗಳು ಹಾಗೂ ನಿರ್ದೇಶಕರು ಮತ್ತು ಸದಸ್ಯರುಗಳು ಉಪಸ್ಥಿತರಿದ್ದರು

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I