Saturday, August 1, 2026
Homeಸೂರ್ಯಗಗನI ರೂ. 43 ಕೋಟಿ ವೆಚ್ಚದಲ್ಲಿ 15 ಕೆರೆಗಳ ಹೈಟೆಕ್ ಅಭಿವೃದ್ದಿ I ಹೆಚ್ ಎಸ್...

I ರೂ. 43 ಕೋಟಿ ವೆಚ್ಚದಲ್ಲಿ 15 ಕೆರೆಗಳ ಹೈಟೆಕ್ ಅಭಿವೃದ್ದಿ I ಹೆಚ್ ಎಸ್ ಸುಂದರೇಶ್ I

I ರೂ. 43 ಕೋಟಿ ವೆಚ್ಚದಲ್ಲಿ 15 ಕೆರೆಗಳ ಹೈಟೆಕ್ ಅಭಿವೃದ್ದಿ I ಹೆಚ್ ಎಸ್ ಸುಂದರೇಶ್ I

ಶಿವಮೊಗ್ಗ, : ಪರಿಸರ ಸಂರಕ್ಷಣೆ ಮತ್ತು ನಗರವನ್ನು ಸುಂದರ ಹಾಗೂ ಹಸಿರಾಗಿಸುವ ಉದ್ದೇಶದಿಂದ ರೂ.43 ಕೋಟಿ ವೆಚ್ಚದಲ್ಲಿ 15 ಕೆರೆಗಳನ್ನು ಸೂಡಾ ವ್ಯಾಪ್ತಿಯಲ್ಲಿ ಅಭಿವೃದ್ದಿಪಡಿಸಲಾಗುತ್ತಿದೆ ಎಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ತಿಳಿಸಿದರು.

ಬುಧವಾರ ನಗರದ ಪ್ರಿಯದರ್ಶಿನಿ ಬಡಾವಣೆಯಲ್ಲಿ ಬರುವ ಆಲ್ಕೊಳ ಗ್ರಾಮದ ಸರ್ವೇ ನಂ 110 ರ ಕೆರೆ ಪ್ರದೇಶದಲ್ಲಿ ಕೆರೆ ಅಭಿವೃದ್ದಿ ಕಾಮಗಾರಿಗಳ ಮಾಹಿತಿಯನ್ನು ಹಂಚಿಕೊAಡು ಅವರು ಮಾತನಾಡಿದರು.

ಕೆರೆಯಲ್ಲಿ ಹೂಳು ತೆಗೆಸಿ, ಸುತ್ತಲೂ ಬೇಲಿ ಹಾಕಿಸಿ, ಬಂಡಿAಗ್ ಮಾಡುವುದು, ಜೊತೆಗೆ ಕೆರೆ ಸುತ್ತಲೂ ಗಿಡಗಳನ್ನು ನೆಡಲಾಗುವುದು. ಮಕ್ಕಳಿಗೆ ಆಟಿಕೆಗಳನ್ನು ಅಳವಡಿಸಲಾಗುವುದು. ಚರಂಡಿ ನೀರು ಕೆರೆಗಳಿಗೆ ಬರುವುದನ್ನು ತಪ್ಪಿಸಲು ಕ್ರಮ ವಹಿಸಲಾಗುವುದು. ಕೆಲವು ಕೆರೆಗಳನ್ನು ಐಲ್ಯಾಂಡ್ ಮಾದರಿಯಲ್ಲಿ ಅಭಿವೃದ್ದಿಪಡಿಸಲಾಗುವುದು. ಈ ಕೆರೆಗಳ ಅಭಿವೃದ್ದಿಯಿಂದ ಪರಿಸರ ಸಂರಕ್ಷಣೆಯೊAದಿಗೆ ಅಂತರ್ಜಲ ಮಟ್ಟವೂ ಹೆಚ್ಚಲಿದೆ. ವಾತಾವರಣವೂ ಉತ್ತಮವಾಗಿರಲಿದೆ ಎಂದು ತಿಳಿಸಿದರು.

ಕೆರೆ ಅಭಿವೃದ್ದಿ ಟೆಂಡರ್ ಆದ ಕಾಮಗಾರಿಗಳ ವಿವರ : ರೂ.3.12 ಕೋಟಿ ವೆಚ್ಚದಲ್ಲಿ ಆಲ್ಕೊಳದ ಸ. ನಂ 73 ರಲ್ಲಿ 1 ಕೆರೆ, ನವುಲೆಯ ಸ.ನಂ 110 ಮತ್ತು 88 ರಲ್ಲಿ 2 ಕೆರೆಗಳು, ಮಲ್ಲಿಗೇನಹಳ್ಳಿಯ ಸ.ನಂ 30 ರಲ್ಲಿ 1 ಕೆರೆ, ರೂ.2.24 ಕೋಟಿ ವೆಚ್ಚದಲ್ಲಿ ಬೊಮ್ಮನಕಟ್ಟೆ ಗ್ರಾಮದ ಸ.ನಂ.102 ರಲ್ಲಿ 2 ಎಕರೆ 11 ಗುಂಟೆ ವಿಸ್ತೀರ್ಣದ ಕೆರೆ, ಆಲ್ಕೊಳ ಗ್ರಾಮದ ಸ.ನಂ 5 14 ಎಕರೆ 9 ಗು. ವಿಸ್ತೀರ್ಣದ 1 ಕೆರೆ, ಕಾಶಿಪುರ ಸ.ನಂ 62ರಲ್ಲಿ 7 ಎ 32 ಗು. ವಿಸ್ತೀರ್ಣದ 01 ಕೆರೆ, ಮಲ್ಲಿಗೇನಹಳ್ಳಿ ಗ್ರಾಮದ ಸ.ನಂ.25 ರಲ್ಲಿ 4 ಎಕರೆ 24 ಗುಂಟೆ, ಮತ್ತೂರು ಗ್ರಾಮದ ಸ.ನಂ.793 ರಲ್ಲಿ 1 ಕೆರೆ, ಭದ್ರಾವತಿ ತಾಲ್ಲೂಕಿನ ಜನ್ನಾಪುರ ಗ್ರಾಮದ ಸ.ನಂ 70 ರಲ್ಲಿ 45 ಎಕರೆ 20 ಗುಂಟ 1 ಕೆರೆ, ಭದ್ರಾವತಿ ತಾಲ್ಲೂಕಿನ ಉಜ್ಜಯನಿಪುರ ಸ.ನಂ.13 ರಲ್ಲಿ 6 ಎಕರೆ 18 ಗುಂಟೆ ಯಲ್ಲಿ 1 ಕೆರೆ ಸೇರಿ ಒಟ್ಟು 10 ಕೆರೆಗಳ ಅಭಿವೃದ್ದಿಗೆ ಈಗಾಗಲೇ ಟೆಂಡರ್ ಆಹ್ವಾನಿಸಲಾಗಿದೆ.

ತಾಂತ್ರಿಕ ಮಂಜೂರಾತಿಗೆ ಸಲ್ಲಿಸಿದ ವಿವರ : ದೇವಕಾತಿಕೊಪ್ಪ ಗ್ರಾಮದ ಸ.ನಂ 47 ರಲ್ಲಿ 22 ಎ 30 ಗು. 01 ಕೆರೆ, ಚನ್ನಮುಂಬಾಪುರ ಗ್ರಾಮ ಸ.ನಂ.11 ರಲ್ಲಿ 10 ಎ 23 ಗು, ಬೊಮ್ಮನಕಟ್ಟೆ ಸ.ನಂ.114 ರಲ್ಲಿ 24 ಎ 14 ಗುಂಟೆಯಲ್ಲಿ 01, ಆಲ್ಕೊಳ ಗ್ರಾಮದ ಸ.ನಂ 10 ರಲ್ಲಿ 1 ಎ 2 ಗುಂಟೆಯಲ್ಲಿ 01, ಭದ್ರಾವತಿ ತಾಲ್ಲೂಕಿನ ಹೊಸೂರು-ಸಿದ್ದಾಪುರ ಗ್ರಾಮದ ಸ.ನಂ 110 ರಲ್ಲಿ 24 ಎ 19 ಗುಂಟೆಯಲ್ಲಿ 01 ಕೆರೆ ಒಟ್ಟು 5 ಕೆರೆಗಳ ಅಭಿವೃದ್ದಿ ಕಾಮಗಾರಿಗಳು ತಾಂತ್ರಿಕ ಮಂಜೂರಾತಿಗೆ ಸಲ್ಲಿಕೆಯಾಗಿವೆ ಎಂದು ತಿಳಿಸಿದರು.

ಹಾಗೂ ಸೂಡಾ ವತಿಯಿಂದ ಕೈಗೊಳ್ಳಲು ಉದ್ದೇಶಿಸಿರುವ ಪ್ರಾಧಿಕಾರದ ಮಾಲೀಕತ್ವದ ನಿದಿಗೆ ಗ್ರಾಮದ ಸ.ನಂ25 ರ 3 ಎಕರೆ ಪ್ರದೇಶದಲ್ಲಿ ವಸತಿ ಬಡಾವಣೆಯ ಅಭಿವೃದ್ದಿ ಕಾಮಗಾರಿಯ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ ಪಡೆಯಲು ಆಯುಕ್ತಾಲಯಕ್ಕೆ ಸಲ್ಲಿಸಲಾಗಿದೆ.

ಗೋಪಿಶೆಟ್ಟಿ ಗ್ರಾಮದ ವಿವಿಧ ಸರ್ವೇ ನಂ.ಗಳಲ್ಲಿ ಒಟ್ಟು 3 ಎಕರೆ ಪ್ರದೇಶದಲ್ಲಿ ವಸತಿ ಬಡಾವಣೆ ನಿರ್ಮಿಸಲು ವಿನ್ಯಾಸ ನಕ್ಷೆಗೆ ತಾಂತ್ರಿಕ ಅನುಮೋದನೆ ಪಡೆಯಲು ಇಲಾಖೆಗೆ ಸಲ್ಲಿಸಲಾಗಿರುತ್ತದೆ. ನಿದಿಗೆ ಹೋಬಳಿ ಊರಗಡೂರು ಗ್ರಾಮದ ಉದ್ದೇಶಿತ ವಸತಿ ಬಡಾವಣೆಯಲ್ಲಿ ಸುಮಾರು 4 ಎಕರೆ ವಿಸ್ತೀರ್ಣದಲ್ಲಿ ವಸತಿ ಸಮುಚ್ಚಯ ನಿರ್ಮಾಣ ಸಂಬAಧ ಪೂರ್ವಾನುಮತಿಗೆ ಆಯುಕ್ತಾಲಯಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಭದ್ರಾವತಿ ತಾಲ್ಲೂಕಿನ ಕಸಬಾ ಗ್ರಾಮದಲ್ಲಿ ಒಟ್ಟು 32 ಎಕರೆ 21 ಗುಂಟೆ ಪ್ರದೇಶದಲ್ಲಿ ವಸತಿ ಬಡಾವಣೆ ನಿರ್ಮಿಸಲು ವಿನ್ಯಾಸ ನಕ್ಷೆಗೆ ತಾಂತ್ರಿಕ ಅನುಮೋದನೆ ಪಡೆಯಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದರು.

ಇತ್ತೀಚೆಗೆ ನಗರದಲ್ಲಿ ಉಷ್ಣಾಂಶ ಹೆಚ್ಚುತ್ತಿದ್ದು, ನಗರವನ್ನು ಹಸಿರಾಗಿ ಇಟ್ಟುಕೊಳ್ಳುವುದು ಅತಿ ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಪಾರ್ಕ್ಗಳನ್ನು ಅಭಿವೃದ್ದಿಪಡಿಸಲಾಗುತ್ತಿದೆ. ಈ ಹಿಂದೆ 40 ಪಾರ್ಕ್ಗಳನ್ನು ಅಭಿವೃದ್ದಿಪಡಿಸಲಾಗಿತ್ತು. ಇದೀಗ 50 ಪಾರ್ಕ್ಗಳ ಅಭಿವೃದ್ದಿಯನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು.
ಈ ವೇಳೆ ಸ್ಥಳೀಯ ಜನ ಪ್ರತಿನಿಧಿಗಳು, ಬಡಾವಣೆಗಳ ನಿವಾಸಿಗಳು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I