Monday, August 3, 2026
Homeಸೂರ್ಯಗಗನI ವಾಣಿಜ್ಯ ತೆರಿಗೆ ಇಲಾಖೆಯಿಂದ ದಿಢೀರ್ ದಾಳಿ I ತೆರಿಗೆ ವಂಚನೆ ಪತ್ತೆ I

I ವಾಣಿಜ್ಯ ತೆರಿಗೆ ಇಲಾಖೆಯಿಂದ ದಿಢೀರ್ ದಾಳಿ I ತೆರಿಗೆ ವಂಚನೆ ಪತ್ತೆ I

I ವಾಣಿಜ್ಯ ತೆರಿಗೆ ಇಲಾಖೆಯಿಂದ ದಿಢೀರ್ ದಾಳಿ I ತೆರಿಗೆ ವಂಚನೆ ಪತ್ತೆ I

ಬೆಂಗಳೂರು, : ವಾಣಿಜ್ಯ ತೆರಿಗೆ ಇಲಾಖೆಯ ಜಾರಿ (ದಕ್ಷಿಣ ವಲಯ), ಬೆಂಗಳೂರು ವ್ಯಾಪ್ತಿಯ 35 ಅಧಿಕಾರಿಗಳ ತಂಡವು ಸರಕು ಮತ್ತು ಸೇವಾ ತೆರಿಗೆಗಳ (ಜಿ.ಎಸ್.ಟಿ) ವಿಭಾಗ-5 ರ ಸಹಯೋಗದೊಂದಿಗೆ ಖಚಿತ ಮಾಹಿತಿಯನ್ನಾಧರಿಸಿ ಯಲಹಂಕ, ಕಲ್ಯಾಣನಗರ, ಹೆಬ್ಬಾಳ, ಬಾಣಸವಾಡಿ, ಇಂದಿರಾನಗರ ಹಾಗೂ ದೇವನಹಳ್ಳಿ ಸೇರಿದಂತೆ ವಿವಿಧ ಆಯಕಟ್ಟಿನ ಸ್ಥಳಗಳಲ್ಲಿ ದಾಳಿ ನಡೆಸಿ, ಪರಿಶೀಲನೆ ನಡೆಸಲಾಯಿತು.

ಪರಿಶೀಲನೆಯ ವೇಳೆ  ತೆರಿಗೆ ಬಾಧ್ಯತೆಯನ್ನು ತಪ್ಪಿಸಲು ‘ಖೊಟ್ಟಿ ಹೂಡುವಳಿ ತೆರಿಗೆ’ಯನ್ನು (Fake Input Tax Credit) ಬಳಸುತ್ತಿದ್ದ ಸರಕು ಸಾಗಣೆ ಏಜೆನ್ಸಿಗಳು, ನಿರ್ಮಾಣ ಸಾಮಗ್ರಿಗಳ ಸರಬರಾಜುದಾರರು, ಎಲೆಕ್ಟ್ರಾನಿಕ್ಸ್ ವರ್ತಕರು, ವಾಹನ ಬಿಡಿಭಾಗಗಳ ಮಾರಾಟಗಾರರು ಹಾಗೂ ಹೋಟೆಲ್ ಮತ್ತು ರೆಸ್ಟೋರೆಂಟ್‍ಗಳ ಮೇಲೆ ದಾಳಿ ನಡೆಸಿ ಲೆಕ್ಕ ಪತ್ರಗಳನ್ನು ಪರಿಶೀಲಿಸಲಾಗಿದೆ.

ಅನೇಕ ವರ್ತಕರು ನಗದು ರೂಪದಲ್ಲಿ ತೆರಿಗೆ ಪಾವತಿಸುವುದನ್ನು ತಪ್ಪಿಸಲು ನಕಲಿ ಇನ್‍ವಾಯ್ಸ್‍ಗಳ ಮೂಲಕ ತೆರಿಗೆ ವಿನಾಯಿತಿ ಪಡೆಯುತ್ತಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಅಲ್ಲದೆ, ಇಲಾಖೆಗೆ ಸಲ್ಲಿಸಿದ ಸ್ವಯಂ ಘೋಷಿತ ತೆರಿಗೆ ವಿವರಗಳಿಗೂ ಮತ್ತು ವಾಸ್ತವಿಕ ವಹಿವಾಟಿಗೂ ಗಣನೀಯ ವ್ಯತ್ಯಾಸವಿರುವುದು ಪತ್ತೆಯಾಗಿದೆ.
ಈವರೆಗಿನ ತನಿಖೆಯಲ್ಲಿ ಸುಮಾರು 25 ಕೋಟಿ ರೂಪಾಯಿಗಳಿಗೂ ಅಧಿಕ ಮೊತ್ತದ ತೆರಿಗೆ ವಂಚನೆ ವಹಿವಾಟನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ.

ಪ್ರಸ್ತುತ ನಿಖರವಾದ ತೆರಿಗೆ ಸೋರಿಕೆಯ ಲೆಕ್ಕಾಚಾರ ಮುಂದುವರಿದಿದ್ದು, ಇನ್ನೂ ಹೆಚ್ಚಿನ ತೆರಿಗೆ ವಂಚನೆಯ ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ಬೆಂಗಳೂರಿನ  ವಾಣಿಜ್ಯ ತೆರಿಗೆಗಳ ಸಹಾಯಕ ಆಯುಕ್ತರು (ಸಾರ್ವಜನಿಕ ಸಂಪರ್ಕ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I