Saturday, August 1, 2026
Homeಸೂರ್ಯಗಗನI ಬಂಜಾರ ಯುವಕರ ಮೇಲಿನ ಕೇಸು ಹಿಂಡೆಯಿರಿ I ಆಯನೂರು ಶಿವಾನಾಯ್ಕ್‌ I

I ಬಂಜಾರ ಯುವಕರ ಮೇಲಿನ ಕೇಸು ಹಿಂಡೆಯಿರಿ I ಆಯನೂರು ಶಿವಾನಾಯ್ಕ್‌ I

I ಬಂಜಾರ ಯುವಕರ ಮೇಲಿನ ಕೇಸು ಹಿಂಡೆಯಿರಿ I ಆಯನೂರು ಶಿವಾನಾಯ್ಕ್‌ I

ಶಿವಮೊಗ್ಗ: ಸಂತ ಸೇವಾಲಾಲರ ಭಕ್ತರಾದ ಮಾಲಾಧಾರಿಗಳ ಮೇಲೆ ಹಾಕಿರುವ ಪ್ರಕರಣಗಳನ್ನು ರಾಜ್ಯ ಸರ್ಕಾರ ಕೂಡಲೇ ಹಿಂದೆ ಪಡೆಯಬೇಕೆಂದು ಶಿವಮೊಗ್ಗ ಜಿಲ್ಲಾ ಬಂಜಾರ ಸಂಘದ ಪ್ರಮುಖರಾದ ಆಯನೂರು ಶಿವಾನಾಯ್ಕ್‌ ಆಗ್ರಹಿಸಿದ್ದಾರೆ.

ರಾಜ್ಯ ಸರಕಾರ ಒಳಮೀಸಲು ನಿಗದಿ ಮಾಡುವಾಗ ಬಂಜಾರ ಸಮುದಾಯಕ್ಕೆ ಘೋರ ಅನ್ಯಾಯ ಮಾಡಿದೆ.  ಶಿವರಾತ್ರಿಯಂದು ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಸರಕಾರದ ಪ್ರತಿನಿಧಿಯಾದ ಡಿ.ಕೆ.ಶಿವಕುಮಾರ್‌ ಗಮನ ಸೆಳೆಯಲು ಸಮಾಜದ ಯುವಕರು ಸರಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ. ಕಾಡುಮೇಡಲ್ಲಿ ವಾಸವಾಗಿರುವ ಸಾಮಾಜಿಕವಾಗಿ ಹಿಂದುಳಿದಿರುವ ಬಂಜಾರ ಸಮುದಾಯಕ್ಕೆ ಆದ ಅನ್ಯಾಯದಿಂದ ಯುವಜನರಲ್ಲಿ ಸಹಜವಾಗಿಯೇ ಆಕ್ರೋಶ ಇದೆ.

ಸರ್ಕಾರ ಗಮನಹರಿಸಿ ಮುಂದಿನ ದಿನಗಳಲ್ಲಿ ಅನ್ಯಾಯ ಸರಿ ಮಾಡಲಿ ಎಂಬ ಒತ್ತಾಸೆ ಅಂದಿನ ಪ್ರತಿಭಟನೆಯಲ್ಲಿತ್ತೇ ವಿನಾ ಯಾರನ್ನೂ ಅವಮಾನಿಸುವ ಉದ್ದೇಶವಿರಲಿಲ್ಲ. ಆದರೆ ನ್ಯಾಯ ಕೇಳುವುದೇ ತಪ್ಪು ಎಂಬ ಭಾವನೆ ಹೊಂದಿರುವ ರಾಜ್ಯ ಸರಕಾರ, ಬಂಜಾರ ಸಮುದಾಯದ ಯುವಕರ ವಿರುದ್ಧ ಕೇಸು ದಾಖಲಿಸಿರುವುದು ಸರಿಯಾದ ಕ್ರಮವಲ್ಲ. ಕೂಡಲೇ ಈ ಪ್ರಕರಣಗಳನ್ನು ಹಿಂದೆ ಪಡೆಯದಿದ್ದಲ್ಲಿ ಮುಂದಿನ ದಿನಗಳಲ್ಲಿ ಸರ್ಕಾರದ ವಿರುದ್ಧ ಬಂಜಾರ ಸಮುದಾಯ ರಾಜ್ಯ ವ್ಯಾಪಿ ಹೋರಾಟ ಮಾಡಲಿದೆ ಎಂದು ಜೆಡಿಎಸ್‌ ಮುಖಂಡರೂ ಆಗಿರುವ ಆಯನೂರು ಶಿವಾನಾಯ್ಕ್‌ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I