I ರಸ್ತೆ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವ ಅಗತ್ಯತೆ ಇದೆ I ಸಿಪಿಐ ದೇವರಾಜ್ I
ಶಿವಮೊಗ್ಗ : ಜಿಲ್ಲಾ ಪೊಲೀಸ್ ವತಿಯಿಂದ ಆಚರಿಸಲಾಗುತ್ತಿರುವ ಆರಕ್ಷಕ ದಿನಾಚರಣೆಯ ಅಂಗವಾಗಿ, ಶಿವಮೊಗ್ಗ ನಗರದ ಬಾಪೂಜಿ ನಗರದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂಚಾರ ವೃತ್ತದ ಸಿಪಿಐ ದೇವರಾಜ್ ರವರು ವಿದ್ಯಾರ್ಥಿಗಳಿಗೆ ರಸ್ತೆ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವ ಅಗತ್ಯತೆ ಕುರಿತು ಹಾಗೂ ಮಾದಕ ವಸ್ತುಗಳ ಬಳಕೆಯಿಂದ ಉಂಟಾಗುವ ದುಷ್ಪರಿಣಾಮ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರುಗಳು, ಪೂರ್ವ ಸಂಚಾರ ಪೊಲೀಸ್ ಠಾಣೆಯ ಪಿಎಸ್ಐ ಶ್ರೀ ಅಕ್ಬರ್ ಮುಲ್ಲಾ ಹಾಗೂ ಪೊಲೀಸ್ ಸಿಬ್ಬಂದಿಯವರು ಉಪಸ್ಥಿತರಿದ್ದರು.


