Saturday, August 1, 2026
Homeಸೂರ್ಯಗಗನI ಕಾನೂನಿನಲ್ಲಿ ಮಹಿಳೆಯರ ರಕ್ಷಣೆಗೆ ಆದ್ಯತೆ I ಎಂ.ಎಸ್.ಸಂತೋಷ್ I

I ಕಾನೂನಿನಲ್ಲಿ ಮಹಿಳೆಯರ ರಕ್ಷಣೆಗೆ ಆದ್ಯತೆ I ಎಂ.ಎಸ್.ಸಂತೋಷ್ I

I ಕಾನೂನಿನಲ್ಲಿ ಮಹಿಳೆಯರ ರಕ್ಷಣೆಗೆ ಆದ್ಯತೆ I ಎಂ.ಎಸ್.ಸಂತೋಷ್ I

ಶಿವಮೊಗ್ಗ: ಮಹಿಳೆಯರ ರಕ್ಷಣೆಗೆ ಕಾನೂನಿನಲ್ಲಿ ಹೆಚ್ಚಿನ ಕಾಯ್ದೆಗಳನ್ನು ರೂಪಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ಎಂ.ಎಸ್.ಸಂತೋಷ್ ಹೇಳಿದರು. ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಅಖಿಲ ಭಾರತ ಅಂಚೆ ಅಧಿಕಾರಿಗಳ ಸಂಘದ ಸಿ ಗ್ರೂಪ್ ನೌಕರರು ಮತ್ತು ವಿವಿಧ ಸಂಘಗಳ ವತಿಯಿಂದ ದೇಶೀಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಸಿಂಗಾರ ಸಭಾಂಗಣದಲ್ಲಿ ಆಯೋಜಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಮಾತನಾಡಿ, ಮಹಿಳೆಯರು ತಮಗೆ ಆದಂತಹ ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಕೊಳ್ಳಬಹುದಾಗಿದೆ. ಅತ್ಯಂತ ಸರಳವಾಗಿ ಇರುವ ಕಾನೂನು ವಿಚಾರಗಳನ್ನು ಜನಸಾಮಾನ್ಯರು ಅರಿತುಕೊಳ್ಳಬೇಕು ಎಂದು ತಿಳಿಸಿದರು.

ಮಹಿಳಾ ನೌಕರರು ಕಾರ್ಯನಿರ್ವಹಿಸುವ ಸ್ಥಳದಲ್ಲಿ ಏನಾದರೂ ಲೈಂಗಿಕ ಕಿರುಕುಳ ಕಂಡು ಬಂದರೆ ಹೇಗೆ ದೂರು ನೀಡಬೇಕು ಮತ್ತು ದೂರು ನೀಡುವಾಗ ಯಾವ ಸಂಗತಿಗಳನ್ನು ಪರಿಗಣಿಸಬೇಕು ಎಂಬುದರ ಬಗ್ಗೆ ಮಾಹಿತಿ ಹೊಂದಿರಬೇಕು. ಕರ್ತವ್ಯ ನಿರ್ವಹಿಸುವ ಸ್ಥಳಗಳಲ್ಲಿ ಅಲ್ಲಿನ ಮುಖ್ಯಸ್ಥರು ಅಥವಾ ಸಹೋದ್ಯೋಗಿಗಳು ಏನಾದರೂ ಲೈಂಗಿಕ ಕಿರುಕುಳ ನೀಡಿದರೆ ಕಿರುಕುಳಕ್ಕೆ ಒಳಪಟ್ಟ ಮಹಿಳೆಯು ಕಡ್ಡಾಯವಾಗಿ ಬರವಣಿಗೆಯಲ್ಲಿ ದೂರು ನೀಡಬೇಕಾಗುತ್ತದೆ ಎಂದು ಹೇಳಿದರು.

ಆಂತರಿಕ ದೂರು ಸಮಿತಿಗೆ ವಿಚಾರಣೆ ನಡೆಸುವ ಅಧಿಕಾರವಿದೆ. ಮುಂದಿನ ಕ್ರಮ ಕೈಗೊಳ್ಳಬಹುದಾಗಿರುತ್ತದೆ. ಸಿವಿಲ್ ನ್ಯಾಯಾಲಯದ ಎಲ್ಲಾ ಅಧಿಕಾರವು ಈ ಆಂತರಿಕ ದೂರು ಸಮಿತಿಗೆ ಇರುವುದರಿಂದ ಸಮಸ್ಯೆಗೆ ಪರಿಹಾರವನ್ನು ನೀಡಬಹುದಾಗಿದೆ ಎಂದು ತಿಳಿಸಿದರು.

ಕಾರ್ಯಗಾರದಲ್ಲಿ ಭಾರತ್ ನ್ಯಾಯ ಸಮಿತಿ ಮತ್ತು ಪೋಕ್ಸೋ ಕಾಯ್ದೆಯ ಸಂಪೂರ್ಣ ವಿವರಗಳನ್ನು ತಿಳಿಸಿದರು. ಕರ್ತವ್ಯದ ಸ್ಥಳದಲ್ಲಿ ಲೈಂಗಿಕ ಕಿರುಕುಳ ನಿಯಂತ್ರಣ ಕಾಯ್ದೆ ಬಗ್ಗೆ ಮಾಹಿತಿ ನೀಡಿದರು.
ದೇಶೀಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಂಶುಪಾಲ ಡಾ. ಎಂ.ವೆಂಕಟೇಶ್ ಮಾತನಾಡಿ, ಮಹಿಳೆಯರು ಸಮಾಜದ ಎಲ್ಲ ರಂಗಗಳಲ್ಲಿ ಸಾಧನೆಗಳನ್ನು ಮಾಡುತ್ತಿದ್ದಾರೆ. ಬಹಳ ಮುಖ್ಯವಾಗಿ ಅಂಚೆ ಇಲಾಖೆಯಲ್ಲಿ ಹೆಚ್ಚಿನ ಸಂಖ್ಯೆಯ ಮಹಿಳಾ ನೌಕರರಿದ್ದಾರೆ ಎಂದರು.
ಅಖಿಲ ಭಾರತ ಅಂಚೆ ಅಧಿಕಾರಿಗಳ ಸಂಘದ ರೂಪಾ, ಕ್ರಿಸ್ಟಿನಾ ಇತರರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I