Saturday, 19 September 2026 Suryagagana — Edition

Suryagagana

My WordPress Blog

ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I
ಸೂರ್ಯಗಗನ

I ಎಲ್ಲ ಕ್ಷೇತ್ರಗಳಲ್ಲಿ ಯಶಸ್ವಿಯಾಗುತ್ತಿರುವ ಮಹಿಳೆಯರು I ಕೆ.ಎಸ್.ಈಶ್ವರಪ್ಪ I

I ಎಲ್ಲ ಕ್ಷೇತ್ರಗಳಲ್ಲಿ ಯಶಸ್ವಿಯಾಗುತ್ತಿರುವ ಮಹಿಳೆಯರು I ಕೆ.ಎಸ್.ಈಶ್ವರಪ್ಪ I ಶಿವಮೊಗ್ಗ: ಪ್ರತಿ ಕ್ಷೇತ್ರದಲ್ಲೂ ಮಹಿಳೆಯರು ಯಶಸ್ವಿಯಾಗಿ ಮುನ್ನಡೆಯುತ್ತ ಇತಿಹಾಸ ನಿರ್ಮಿಸುತ್ತಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು. ನವುಲೆಯ ರೋಟರಿ ರಿವರ್ ಸೈಡ್ ಸಭಾಂಗಣದಲ್ಲಿ ಮಲೆನಾಡು ಮಲ್ಲಿಗೆ ವೇದಿಕೆ ಶಿವಮೊಗ್ಗ,…

I ಎಲ್ಲ ಕ್ಷೇತ್ರಗಳಲ್ಲಿ ಯಶಸ್ವಿಯಾಗುತ್ತಿರುವ ಮಹಿಳೆಯರು I ಕೆ.ಎಸ್.ಈಶ್ವರಪ್ಪ I

ಶಿವಮೊಗ್ಗ: ಪ್ರತಿ ಕ್ಷೇತ್ರದಲ್ಲೂ ಮಹಿಳೆಯರು ಯಶಸ್ವಿಯಾಗಿ ಮುನ್ನಡೆಯುತ್ತ ಇತಿಹಾಸ ನಿರ್ಮಿಸುತ್ತಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು. ನವುಲೆಯ ರೋಟರಿ ರಿವರ್ ಸೈಡ್ ಸಭಾಂಗಣದಲ್ಲಿ ಮಲೆನಾಡು ಮಲ್ಲಿಗೆ ವೇದಿಕೆ ಶಿವಮೊಗ್ಗ, ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ, ನೌಕರರ ಸಂಘ ತಾಲೂಕು ಘಟಕ ಶಿಕಾರಿಪುರ ಮತ್ತು ಜಿಲ್ಲಾ ಘಟಕ ಶಿವಮೊಗ್ಗ, ರೋಟರಿ ಕ್ಲಬ್ ನವಲೆ ಸಹಯೋಗದೊಂದಿಗೆ ಏರ್ಪಡಿಸಿದ್ದ ವಿಶ್ವ ಮಹಿಳಾ ದಿನಾಚರಣೆ ಹಾಗೂ ಸಾಹಿತ್ಯ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿ, ಮಹಿಳೆಯರ ಸಮರ್ಪಣೆ ಮತ್ತು ಕಠಿಣ ಪರಿಶ್ರಮ ಬಲಿಷ್ಠ ಮತ್ತು ಅದ್ಭುತ ಎಂದು ತಿಳಿಸಿದರು.

ಮಲೆನಾಡು ಮಲ್ಲಿಗೆ ವೇದಿಕೆ ಶಿವಮೊಗ್ಗ ಮುಖ್ಯಸ್ಥೆ ಆಶಾ ರಾಣಿ ಮಾತನಾಡಿ, ನಿಮ್ಮ ಶಕ್ತಿ, ಧೈರ್ಯ ಮತ್ತು ಬುದ್ಧಿವಂತಿಕೆಯು ನಿಮ್ಮ ಸುತ್ತಲಿನ ಎಲ್ಲರಿಗೂ ಸ್ಫೂರ್ತಿ ನೀಡುತ್ತಲೇ ಇರಬೇಕು. ಮಹಿಳೆಯ ದೃಢಸಂಕಲ್ಪವು ಯಾವುದೇ ಸವಾಲನ್ನು ಜಯಿಸಬಹುದು. ಪ್ರತಿಯೊಬ್ಬ ಯಶಸ್ವಿ ಮಹಿಳೆಯ ಹಿಂದೆ ಆಕೆಯ ಸ್ವಂತ ದೃಢಸಂಕಲ್ಪವಿದೆ ಎಂದರು. ಇಸಿಒ ಶಶಿರೇಖಾ ಮಾತನಾಡಿ, ಬೇರೆ ಯಾರೂ ನಂಬದಿದ್ದಾಗ ನೀವು ನಿಮ್ಮ ಮೇಲೆ ನಂಬಿಕೆ ಇಡಬೇಕು. ಎಂದು ತಿಳಿಸಿದರು.

ಅಹಮದೀಯ ಮುಸ್ಲಿಂ ಮಹಿಳಾ ಸಂಘಟನೆ ರಿಜ್ವಾನ್ ಸಿದ್ದಿಕ್ಕಿ ಮಾತನಾಡಿ, ಮನೆಯಲ್ಲಿ ಶಾಂತಿ ಸಮೃದ್ಧಿಯನ್ನು ಸ್ಥಾಪಿಸುವುದು ಮಹಿಳೆಯರಿಂದ ಮಾತ್ರ ಸಾಧ್ಯ. ಭವಿಷ್ಯವು ಮಹಿಳೆಯದ್ದಾಗಿದೆ. ದೊಡ್ಡ ಕನಸು ಕಾಣಿರಿ ಎಂದರು. ಲೆಕ್ಕ ಪರಿಶೋಧಕ ಆರ್.ಮನೋಹರ ಮಾತನಾಡಿ, ವಿವಿಧ ಕ್ಷೇತ್ರಗಳಲ್ಲಿ ಯಶಸ್ಸು ಸಾಧಿಸಿದ ಮಹಿಳೆಯರು ಇತರ ಮಹಿಳೆಯರಿಗೂ ಮಾರ್ಗದರ್ಶನ ನೀಡಿ ಪ್ರೋತ್ಸಾಹಿಸಬೇಕು ಎಂದು ಹೇಳಿದರು.

ಸಮಾಜ ಸೇವಕ ಕೆ.ಇ.ಕಾಂತೇಶ್ ಅವರು ಅಹಮದೀಯ ಮುಸ್ಲಿಂ ಮಹಿಳಾ ಸಂಘಟನೆ ಅವರು ಕೊಡುಗೆಯಾಗಿ ನೀಡಿದ ಪೋಡಿಯಂಅನ್ನು ಅಬ್ಬಲಗೆರೆ ಸರ್ಕಾರಿ ಶಾಲೆಗೇ ಹಸ್ತಾಂತರಿಸಿದರು. ಜಯಮ್ಮ, ಶಿವಮೂರ್ತಿ, ಶಿವಶಂಕರ,  ಗುಡ್ಡದಯ್ಯ, ಮಲೆನಾಡು ಮಲ್ಲಿಗೆ ವೇದಿಕೆಯ ತ್ರಿವೇಣಿ, ಪೂರ್ಣಿಮಾ, ನಾಗರತ್ನ, ಶೋಭಾ, ಹರೀಶ್ ಇತರರಿದ್ದರು.

Gara Srinivas

Gara Srinivas

Leave a comment

error: Content is protected !!