Sunday, August 2, 2026
Homeಸೂರ್ಯಗಗನI ಕಾಂಗ್ರೆಸ್ ಪಕ್ಷದ ಕಚೇರಿಗಳ ನಿರ್ಮಾಣಕ್ಕೆ ರಿಯಾಯಿತಿ ದರದಲ್ಲಿ ಜಮೀನು ಮಂಜೂರಾತಿ I ಸಚಿವ ಬಿ.ಎಸ್...

I ಕಾಂಗ್ರೆಸ್ ಪಕ್ಷದ ಕಚೇರಿಗಳ ನಿರ್ಮಾಣಕ್ಕೆ ರಿಯಾಯಿತಿ ದರದಲ್ಲಿ ಜಮೀನು ಮಂಜೂರಾತಿ I ಸಚಿವ ಬಿ.ಎಸ್ ಸುರೇಶ್ ಅವರಿಂದ ಸ್ಪಷ್ಟನೆ I

I ಕಾಂಗ್ರೆಸ್ ಪಕ್ಷದ ಕಚೇರಿಗಳ ನಿರ್ಮಾಣಕ್ಕೆ ರಿಯಾಯಿತಿ ದರದಲ್ಲಿ ಜಮೀನು ಮಂಜೂರಾತಿ I ಸಚಿವ ಬಿ.ಎಸ್ ಸುರೇಶ್ ಅವರಿಂದ ಸ್ಪಷ್ಟನೆ I

ಬೆಂಗಳೂರು,  : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿಗಳ ನಿರ್ಮಾಣಕ್ಕಾಗಿ ಸರ್ಕಾರಿ ಜಮೀನನ್ನು ರಿಯಾಯಿತಿ ದರದಲ್ಲಿ ಮಂಜೂರು ಮಾಡಿರುವ ಕುರಿತು ಎದ್ದಿರುವ ಪ್ರಶ್ನೆಗಳಿಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬಿ.ಎಸ್. ಸುರೇಶ್ ಅವರು ಇಂದು ವಿಧಾನ ಪರಿಷತ್ತಿನಲ್ಲಿ ಮಾಹಿತಿ ನೀಡಿದರು.

ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯರಾದ ಡಿ.ಎಸ್. ಅರುಣ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿರುವ ಸಚಿವರು, ಜಮೀನು ಹಂಚಿಕೆಯ ಪ್ರಕ್ರಿಯೆ ಮತ್ತು ದರ ನಿಗದಿಯ ಬಗ್ಗೆ ಸ್ಪಷ್ಟವಾದ ಮಾಹಿತಿ ನೀಡಿದರು.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿಗಳ ನಿರ್ಮಾಣಕ್ಕಾಗಿ ನಾಗರಿಕ ಸೌಲಭ್ಯ (ಸಿಎ) ನಿವೇಶನಗಳನ್ನು ಮಂಜೂರು ಮಾಡಲು ಸಚಿವ ಸಂಪುಟವು ತೀರ್ಮಾನಿಸಿದೆ.

ತುಮಕೂರಿನಲ್ಲಿ ಬೃಹತ್ ಜಮೀನು ಹಂಚಿಕೆ ಮತ್ತು ದರ ವಿವರ:
ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಜಮೀನು ಮಂಜೂರು ಮಾಡಿರುವ ಕುರಿತು ತುಮಕೂರು ತಾಲ್ಲೂಕು, ಕಸಬ ಹೋಬಳಿ, ಮರುಳೂರು ಗ್ರಾಮದ ಸರ್ವೆ ನಂ. 87/2 ರಲ್ಲಿ ಒಟ್ಟು 02 ಎಕರೆ ಜಮೀನನ್ನು ಉಪನೋಂದಣಾಧಿಕಾರಿಗಳ 2023-24ನೇ ಸಾಲಿನ ಮಾರ್ಗಸೂಚಿ ದರದಂತೆ ಪ್ರತಿ ಎಕರೆಗೆ ರೂ. 1,70,00,000/- (ಒಂದು ಕೋಟಿ ಎಪ್ಪತ್ತು ಲಕ್ಷ ರೂ.) ನಿಗದಿಪಡಿಸಲಾಗಿದೆ. ಸಚಿವ ಸಂಪುಟದ ಪ್ರಕರಣ ಸಂಖ್ಯೆ: ಸಿ 396/2025, ದಿನಾಂಕ: 22.05.2025 ರ ನಿರ್ಣಯದಂತೆ, ಪ್ರಸ್ತುತ ಮಾರ್ಗಸೂಚಿ ಮೌಲ್ಯದ ಕೇವಲ ಶೇ. 05 ರಷ್ಟು (5%) ದರವನ್ನು ವಿಧಿಸಿ ಜಮೀನು ಮಂಜೂರು ಮಾಡಲಾಗಿದೆ.

ಇತರ ಜಿಲ್ಲೆಗಳ ಸ್ಥಿತಿಗತಿ:

ಚಾಮರಾಜನಗರ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ವ್ಯಾಪ್ತಿಯಲ್ಲಿ ಸದ್ಯಕ್ಕೆ ಯಾವುದೇ ನಾಗರಿಕ ಸೌಲಭ್ಯ (ಸಿಎ) ನಿವೇಶನಗಳನ್ನು ಹಂಚಿಕೆ ಮಾಡಲಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ಕಾನೂನುಬದ್ಧತೆ ಮತ್ತು ಆಕ್ಷೇಪಣೆಗಳಿಲ್ಲ:
ಜಮೀನು ಮಂಜೂರಾತಿ ಪ್ರಕ್ರಿಯೆಯಲ್ಲಿ ಯಾವುದೇ ನಿಯಮಗಳ ಉಲ್ಲಂಘನೆಯಾಗಿಲ್ಲ ಎಂದು ಸರ್ಕಾರ ಪ್ರತಿಪಾದಿಸಿದೆ.

ಕಂದಾಯ ಇಲಾಖೆ:

ಈ ಮಂಜೂರಾತಿಗೆ ಸಂಬಂಧಿಸಿದಂತೆ ಕಂದಾಯ ಇಲಾಖೆಯಿಂದ ಯಾವುದೇ ರೀತಿಯ ತಕರಾರುಗಳು ಅಥವಾ ಆಕ್ಷೇಪಣೆಗಳು ಸ್ವೀಕೃತವಾಗಿಲ್ಲ. ಈ ಪ್ರಕ್ರಿಯೆಯಲ್ಲಿ ಕಾನೂನು ಉಲ್ಲಂಘನೆಯಾಗಿದೆ ಎಂಬ ಬಗ್ಗೆ ಯಾವುದೇ ದೂರುಗಳು ಸರ್ಕಾರದ ಗಮನಕ್ಕೆ ಬಂದಿಲ್ಲ. ಯಾವುದೇ ದೂರುಗಳು ಅಥವಾ ಕಾನೂನು ಬಾಹಿರ ಚಟುವಟಿಕೆಗಳು ಕಂಡುಬಂದಿಲ್ಲದ ಕಾರಣ, ಈ ಮಂಜೂರಾತಿಯನ್ನು ರದ್ದುಪಡಿಸುವ ಯಾವುದೇ ಕ್ರಮವನ್ನು ಸರ್ಕಾರ ಕೈಗೊಂಡಿಲ್ಲ ಎಂದು ಸಚಿವರು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I