Saturday, August 1, 2026
Homeಸೂರ್ಯಗಗನI ಒಳ ಮೀಸಲಾತಿಗಾಗಿ I ಶಿವಮೊಗ್ಗದಲ್ಲಿ ಬುಗಿಲೆದ್ದ I ದಲಿತ ಸಂಘಟನೆಗಳ ಬೃಹತ್ ಪ್ರತಿಭಟನೆ I

I ಒಳ ಮೀಸಲಾತಿಗಾಗಿ I ಶಿವಮೊಗ್ಗದಲ್ಲಿ ಬುಗಿಲೆದ್ದ I ದಲಿತ ಸಂಘಟನೆಗಳ ಬೃಹತ್ ಪ್ರತಿಭಟನೆ I

I ಒಳ ಮೀಸಲಾತಿಗಾಗಿ I ಶಿವಮೊಗ್ಗದಲ್ಲಿ ಬುಗಿಲೆದ್ದ I ದಲಿತ ಸಂಘಟನೆಗಳ ಬೃಹತ್ ಪ್ರತಿಭಟನೆ I

ಶಿವಮೊಗ್ಗ : ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಮಹಾಸಭಾ ಜಿಲ್ಲಾ ಸಮಿತಿ ಹಾಗೂ ಶಿವಮೊಗ್ಗ ಜಿಲ್ಲೆಯ ವಿವಿಧ ದಲಿತಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಎಚ್ಚರಿಕೆ ನೀಡಲಾಯಿತು. ಒಳ ಮೀಸಲಾತಿ ಜಾರಿಗೊಳಿಸದೇ ಸರ್ಕಾರ ಮುಂದುವರಿದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆಗಳ ಮುಖಂಡರು, ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿಯನ್ನು ಜಾರಿಗೆ ತರುವುದು ಸರ್ಕಾರದ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಪ್ರಮುಖ ಭರವಸೆಯಾಗಿತ್ತು. ಆದರೆ ಸರ್ಕಾರ ಇನ್ನೂ ಸ್ಪಷ್ಟ ನಿರ್ಧಾರ ಕೈಗೊಳ್ಳದೆ ಕಾಲಹರಣ ಮಾಡುತ್ತಿರುವುದು ದುರದೃಷ್ಟಕರ ಸಂಗತಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶತಮಾನಗಳಿಂದ ಶೋಷಣೆ ನಿಂತಿಲ್ಲ :

ಮಾದಿಗ ಸಮುದಾಯವು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ಉದ್ಯೋಗ ಕ್ಷೇತ್ರಗಳಲ್ಲಿ ತಲತಲಾಂತರಗಳಿಂದ ಅನ್ಯಾಯ ಮತ್ತು ಶೋಷಣೆಗೆ ಒಳಗಾಗಿದ್ದು, ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ ಒಳ ಮೀಸಲಾತಿ ಕಲ್ಪಿಸಬೇಕು ಎಂಬ ಬೇಡಿಕೆಯನ್ನು ಕಳೆದ ೩೫ ವರ್ಷಗಳಿಂದ ಹೋರಾಟದ ಮೂಲಕ ಮುಂದಿಟ್ಟುಕೊಂಡು ಬಂದಿದೆ. ಈ ಹೋರಾಟಕ್ಕೆ ಸುಪ್ರೀಂ ಕೋರ್ಟ್ ಕೂಡ ಮಾನ್ಯತೆ ನೀಡಿದ್ದು, ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಕಲ್ಪಿಸುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಇದೆ ಎಂಬ ಐತಿಹಾಸಿಕ ತೀರ್ಪನ್ನು ೨೦೨೪ರ ಆಗಸ್ಟ್ ೧ರಂದು ನೀಡಿದೆ ಎಂದು ಅವರು ವಿವರಿಸಿದರು,

ಆದರೆ ಸುಪ್ರೀಂ ಕೋರ್ಟ್ ತೀರ್ಪು ಬಂದ ನಂತರವೂ ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿಗೊಳಿಸುವ ವಿಷಯದಲ್ಲಿ ಸ್ಪಷ್ಟ ನಿರ್ಧಾರಕ್ಕೆ ಬರದೆ ಮೀನಾಮೇಷ ಎಣಿಸುತ್ತಿರುವುದು ಸಾಮಾಜಿಕ ನ್ಯಾಯದ ಪರವಾಗಿ ಹೋರಾಡುತ್ತಿರುವ ಸಮುದಾಯಗಳಿಗೆ ದೊಡ್ಡ ನಿರಾಶೆಯನ್ನುಂಟು ಮಾಡಿದೆ ಎಂದು ಮುಖಂಡರು ದೂರಿದರು.

ಜಸ್ಟೀಸ್ ನಾಗಮೋಹನ್ ದಾಸ್ ಶಿಫಾರಸ್ಸು ಹಾಗೂ ಕಾನೂನು ಜಾರಿ :

ಜಸ್ಟೀಸ್ ನಾಗಮೋಹನ್ ದಾಸ್ ಅವರ ವರದಿಯಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಕುರಿತು ಸ್ಪಷ್ಟ ಶಿಫಾರಸುಗಳು ನೀಡಲಾಗಿದೆ. ಶೇ.೧೭ರಷ್ಟು ಮೀಸಲಾತಿ ಸಂಬಂಧಿಸಿದ ರಾಜ್ಯ ಸರ್ಕಾರದ ತೀರ್ಮಾನಕ್ಕೆ ಹೈಕೋರ್ಟ್‌ನಲ್ಲಿ ತಡೆಯಾಜ್ಞೆ ಇರುವುದನ್ನು ಅವರು ಉಲ್ಲೇಖಿಸಿದರೂ, ಈಗಿರುವ ಶೇ.೧೫ರಷ್ಟು ಮೀಸಲಾತಿಯಲ್ಲಿಯೇ ಒಳ ಮೀಸಲಾತಿ ಜಾರಿಗೆ ಯಾವುದೇ ಕಾನೂನು ಅಡ್ಡಿಯಿಲ್ಲ ಎಂದು ರಾಜ್ಯದ ಅಡ್ವಕೇಟ್ ಜನರಲ್ ಕೂಡ ಸ್ಪಷ್ಟಪಡಿಸಿದ್ದಾರೆ ಎಂದು ಪ್ರತಿಭಟನಾಕಾರರು ತಿಳಿಸಿದರು.

ಅಸ್ಪೃಶ್ಯ ಸಮುದಾಯಗಳ ಪಾಲಿಗೆ ಮರಣಶಾಸನವಾದ ಸರ್ಕಾರದ ನೀತಿ :

ಇಂತಹ ಪರಿಸ್ಥಿತಿಯಲ್ಲಿಯೇ ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿಗೊಳಿಸದೇ ಸುಮಾರು ೫೬,೩೪೨ ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಲು ಮುಂದಾಗಿರುವುದು ಪರಿಶಿಷ್ಟ ಜಾತಿಗಳಲ್ಲಿನ ಅಸ್ಪೃಶ್ಯ ಸಮುದಾಯಗಳ ಪಾಲಿಗೆ ಮರಣಶಾಸನದಂತಾಗಿದೆ ಎಂದು ಅವರು ಆರೋಪಿಸಿದರು. ಒಳ ಮೀಸಲಾತಿ ಇಲ್ಲದ ಮೀಸಲಾತಿ ವ್ಯರ್ಥವಾಗುತ್ತದೆ ಮತ್ತು ಅದು ಘೋರ ಸಾಮಾಜಿಕ ಅನ್ಯಾಯವಾಗುತ್ತದೆ ಎಂದು ಪ್ರತಿಭಟನಾಕಾರರು ಹೇಳಿದರು.

ಈ ಹಿನ್ನೆಲೆಯಲ್ಲಿ ಮಾರ್ಚ್ ೨೭ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಜಾರಿಗೆ ಸ್ಪಷ್ಟ ನಿರ್ಧಾರ ಕೈಗೊಳ್ಳಬೇಕು. ಯಾವುದೇ ಉಪಸಮಿತಿ ಅಥವಾ ಹೊಸ ಸಮಿತಿ ರಚಿಸುವ ಅವಶ್ಯಕತೆ ಇಲ್ಲ, ಏಕೆಂದರೆ ಜಸ್ಟೀಸ್ ನಾಗಮೋಹನ್ ದಾಸ್ ವರದಿಯಲ್ಲಿ ಎಲ್ಲ ವಿಷಯಗಳು ಸ್ಪಷ್ಟವಾಗಿ ಉಲ್ಲೇಖಗೊಂಡಿವೆ ಎಂದು ಮುಖಂಡರು ಒತ್ತಾಯಿಸಿದರು.

ರಾಜ್ಯಾದ್ಯಂತ ಹೋರಾಟ ಅನಿವಾರ್ಯ :

ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಜಾರಿಗೆ ತೀರ್ಮಾನ ಕೈಗೊಂಡು, ಒಳ ಮೀಸಲಾತಿಯ ಅನ್ವಯವೇ ೫೬,೩೪೨ ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕು. ಇಲ್ಲವಾದರೆ ಮಾದಿಗ ಮಹಾಸಭಾ ಹಾಗೂ ದಲಿತಪರ ಸಂಘಟನೆಗಳ ಒಕ್ಕೂಟಗಳು ರಾಜ್ಯಾದ್ಯಂತ ತೀವ್ರ ಉಗ್ರ ಹೋರಾಟ ನಡೆಸಲು ತಯಾರಾಗಿವೆ ಎಂದು ಅವರು ಎಚ್ಚರಿಸಿದರು.

ಪ್ರತಿಭಟನೆ ಸಂದರ್ಭದಲ್ಲಿ ಕೆಲ ಹೋರಾಟಗಾರರು ಜಿಲ್ಲಾಧಿಕಾರಿ ಕಚೇರಿಯ ಒಳಗೆ ನುಗ್ಗಲು ಪ್ರಯತ್ನಿಸಿದರು. ಆದರೆ ಪೊಲೀಸರು ತಕ್ಷಣವೇ ಅವರನ್ನು ತಡೆದು ಪರಿಸ್ಥಿತಿಯನ್ನು ನಿಯಂತ್ರಿಸಿದರು. ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾದರೂ ನಂತರ ಪರಿಸ್ಥಿತಿ ಶಾಂತಗೊಂಡಿತು.

ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ಹೆಚ್. ಶಿವಾಜಿ, ಜಿಲ್ಲಾ ಉಪಾಧ್ಯಕ್ಷ ರಮೇಶ್ ಇ, ಪ್ರಧಾನ ಕಾರ್ಯದರ್ಶಿ ತೇಜಸ್ ಆರ್, ಜಿಲ್ಲಾ ಖಜಾಂಚಿ ಎಂ. ಶಿವಲಿಂಗಪ್ಪ, ಜಿಲ್ಲಾ ಮುಖಂಡ ತಿಮ್ಲಾಪುರ ಲೋಕೇಶಪ್ಪ, ಮಾಜಿ ನಗರಸಭಾ ಸದಸ್ಯ ಆರ್. ಶಿವಣ್ಣ, ಡಿಎಸ್ ಸಂಚಾಲಕ ಚಿನ್ನಯ್ಯ, ಸಮಾಜದ ಪ್ರಮುಖರಾದ ಮಂಜುನಾಥ ಎಸ್, ಸೂಲಯ್ಯ, ಅಣ್ಣಪ್ಪ ಪಿ, ಟಿ.ಹೆಚ್. ಹಾಲೇಶಪ್ಪ, ಅಣ್ಣಪ್ಪ ಎ.ಕೆ, ಹೆಚ್.ಎನ್. ಪ್ರಭು, ಮಂಜಪ್ಪ ಬೀರನಕೆರೆ, ನಗರಾಧ್ಯಕ್ಷ ಅಣ್ಣಪ್ಪ ಕೆ, ಶಿಕಾರಿಪುರ ಅಧ್ಯಕ್ಷ ಮುಗಳಗೆರೆ ಬಸವರಾಜ್, ಗ್ರಾಮಾಂತರ ಅಧ್ಯಕ್ಷರಾದ ನೀಲಪ್ಪ, ರಘು, ತೀರ್ಥಹಳ್ಳಿ ತಾಲೂಕು ಅಧ್ಯಕ್ಷ ನಾಗರಾಜ್, ಭದ್ರಾವತಿ ತಾಲೂಕು ಅಧ್ಯಕ್ಷ ಮೈಲಾರಪ್ಪ, ಸೊರಬ ತಾಲೂಕು ಅಧ್ಯಕ್ಷ ಗಿಡ್ಡಪ್ಪ, ಯುವ ಘಟಕ ಜಿಲ್ಲಾಧ್ಯಕ್ಷ ನಿಖಿಲ್ ಮೂರ್ತಿ, ಮಹಿಳಾ ಘಟಕ ಜಿಲ್ಲಾಧ್ಯಕ್ಷೆ ಕೆಂಪಮ್ಮ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I