Sunday, August 2, 2026
Homeಸೂರ್ಯಗಗನI ಹಣದಾಸೆಗೆ ನಕಲಿ ದಾಖಲೆ ಸೃಷ್ಟಿಸುತ್ತಿದ್ದವರ ವಿರುದ್ದ ಕಾನೂನು ಕ್ರಮ I ಸಾರ್ವಜನಿಕರು ಎಚ್ಚರಿಕೆಯಿಂದಿರಲು‌ ಮನವಿ...

I ಹಣದಾಸೆಗೆ ನಕಲಿ ದಾಖಲೆ ಸೃಷ್ಟಿಸುತ್ತಿದ್ದವರ ವಿರುದ್ದ ಕಾನೂನು ಕ್ರಮ I ಸಾರ್ವಜನಿಕರು ಎಚ್ಚರಿಕೆಯಿಂದಿರಲು‌ ಮನವಿ I ಡಿಸಿ I

I ಹಣದಾಸೆಗೆ ನಕಲಿ ದಾಖಲೆ ಸೃಷ್ಟಿಸುತ್ತಿದ್ದವರ ವಿರುದ್ದ ಕಾನೂನು ಕ್ರಮ I ಸಾರ್ವಜನಿಕರು ಎಚ್ಚರಿಕೆಯಿಂದಿರಲು‌ ಮನವಿ I ಡಿಸಿ I

ಶಿವಮೊಗ್ಗ,  : ಹಣದಾಸೆಗಾಗಿ ಸರ್ಕಾರಿ ದಾಖಲೆಗಳನ್ನು ನಕಲಿ ಮಾಡಿ, ಖಾಸಗಿ‌ ವ್ಯಕ್ತಿಗಳಿಗೆ ಜಮೀನು ಮಂಜೂರು ಮಾಡಲು ಪ್ರಯತ್ನಿಸುತ್ತಿದ್ದ ಸಾಗರ ತಹಶೀಲ್ದಾರ್ ಕಚೇರಿ ಸಿಬ್ಬಂದಿಗಳ ವಿರುದ್ದ ಈಗಾಗಲೇ ಎಫ್ ಐ ಆರ್ ದಾಖಲಿಸಿ, ವಿಚಾರಣೆ ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಇಂತಹ ವಿಚಾರಗಳಿಂದ ಎಚ್ಚರಿಕೆಯಿಂದ ಇರಬೇಕೆಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ.

ಸಾಗರ ತಹಶೀಲ್ದಾರ್ ಕಚೇರಿಯ ಸಿಬ್ಬಂದಿಗಳು ಜಮೀನು ಮಂಜೂರು ಮಾಡಿಸುವುದಾಗಿ ಖಾಸಗಿ‌ ವ್ಯಕ್ತಿಗಳಿಂದ ಹಣ ಪಡೆದು ಸರ್ಕಾರಿ ದಾಖಲೆಗಳನ್ನು ನಕಲಿ ಮಾಡುತ್ತಿದ್ದ ಜಾಲವೊಂದನ್ನು ಸಾಗರ ತಹಶೀಲ್ದಾರ್ ರಶ್ಮಿ ಹಾಲೇಶ್ ಅವರು ಬಯಲಿಗೆಳೆದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದ ಆರು ಜನ ಆರೋಪಿಗಳ ವಿರುದ್ದ ಸಾಗರ ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿ, ವಿಚಾರಣೆ ಆರಂಭಿಸಲಾಗಿದೆ.
ಮಾರ್ಚ್ 18ರ ಬುಧವಾರ ಮಧ್ಯಾಹ್ನ ತಹಶೀಲ್ದಾರ್ ಕಚೇರಿಯ ದಾಖಲೆ ಕೊಠಡಿಯ ಮೇಲ್ವಿಚಾರಕರು ಹಳೆಯ ಮಂಜೂರಾತಿ ಪತ್ರಗಳನ್ನು ತಿದ್ದುಪಡಿ ಮಾಡುತ್ತಿರುವುದನ್ನು ತಹಶೀಲ್ದಾರ್ ಅವರು ಖುದ್ದಾಗಿ ಗಮನಿಸಿದ್ದಾರೆ. ಸರ್ಕಾರಿ ಜಮೀನನ್ನು ಖಾಸಗಿ ವ್ಯಕ್ತಿಗಳಿಗೆ ಮಂಜೂರು ಮಾಡಲು ನಕಲಿ ದಾಖಲೆ ಸೃಷ್ಟಿಸುವ ಕೆಲಸ ಇಲ್ಲಿ ನಡೆಯುತ್ತಿತ್ತು.

ಸಾಗರ ತಹಶಿಲ್ದಾರ್ ಕಚೇರಿಯಲ್ಲಿ ಈ ಕಾರ್ಯವೆಸಗುತ್ತಿದ್ದವರ ವಿರುದ್ದ ಸೂಕ್ತ ಕಾನೂನು ಕ್ರಮ‌ ಕೈಗೊಳ್ಳಲಾಗುತ್ತಿದ್ದು , ಹೀಗೆ ಯಾವುದೇ ಸರ್ಕಾರಿ ದಾಖಲೆಗಳನ್ನು ನಕಲು ಮಾಡಿ, ಜಮೀನು ಮಂಜೂರು ಮಾಡಲು ಬರುವುದಿಲ್ಲ. ಆದ್ದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಅವರು ಮನವಿ‌ ಮಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I