Sunday, August 2, 2026
HomeಸಿನಿಮಾI ಚಲನಚಿತ್ರ ಪೋಷಕ ಕಲಾವಿದರ I ಸಂಘದ ಚುನಾವಣೆಗೆ ನ್ಯಾಯಾಲಯದ ತಡೆ I

I ಚಲನಚಿತ್ರ ಪೋಷಕ ಕಲಾವಿದರ I ಸಂಘದ ಚುನಾವಣೆಗೆ ನ್ಯಾಯಾಲಯದ ತಡೆ I

I ಚಲನಚಿತ್ರ ಪೋಷಕ ಕಲಾವಿದರ I ಸಂಘದ ಚುನಾವಣೆಗೆ ನ್ಯಾಯಾಲಯದ ತಡೆ I

ಬೆಂಗಳೂರು, : ಕರ್ನಾಟಕ ಚಲನಚಿತ್ರ ಪೋಷಕ ಕಲಾವಿದರ ಸಂಘದಲ್ಲಿ ಕಳೆದ ಮೂರು ವರ್ಷಗಳಿಂದ ಮುಂದುವರಿದಿರುವ ವಿವಾದಕ್ಕೆ ಸಂಬಂಧಿಸಿದಂತೆ, ಸಂಘದ ಚುನಾವಣೆಗೆ ನ್ಯಾಯಾಲಯ ತಾತ್ಕಾಲಿಕ ತಡೆ ನೀಡಿದೆ. ಸಂಘದ ಅಧ್ಯಕ್ಷರಾಗಿ ಕಾನೂನುಬದ್ಧವಾಗಿ ಆಯ್ಕೆಯಾಗಿದ್ದ ಪದ್ಮಿನಿ ನಂದ ಅವರ ಸಂಘಕ್ಕೆ ಕರ್ನಾಟಕ ಚಲನಚಿತ್ರ ಕಾರ್ಮಿಕರ ಒಕ್ಕೂಟ ಮಾನ್ಯತೆ ನೀಡಿತ್ತು. ಆದರೆ, ಹಿಂದಿನ ಚುನಾವಣೆಯಲ್ಲಿ ಸೋತ ಮಾಜಿ ಅಧ್ಯಕ್ಷ ಡಿಂಗ್ರಿ ನಾಗರಾಜ್ ಹಾಗೂ ಕಾರ್ಯದರ್ಶಿ ನವನೀತಂ ಅವರ ಬಳಗವು, ಡಿಂಗ್ರಿ ನಾಗರಾಜ್ ಅವರನ್ನು ಅವಿರೋಧವಾಗಿ ಅಧ್ಯಕ್ಷರಾಗಿ ಘೋಷಿಸಿ, ಉಳಿದ ಹುದ್ದೆಗಳಿಗಾಗಿ ಮಾರ್ಚ್ ೨೧, ೨೦೨೬ರಂದು ಚುನಾವಣೆ ನಡೆಸಲು ಪ್ರಕಟಿಸಿತ್ತು.

ಈ ಕ್ರಮವನ್ನು ಪ್ರಶ್ನಿಸಿ, ಚುನಾವಣೆಯು ಕಾನೂನುಬಾಹಿರವಾಗಿದೆ ಎಂದು ವಾದಿಸಿ, ಹಾಗೂ ಹಿಂದಿನ ಅವಧಿಯಲ್ಲಿ ನಡೆದಿದ್ದಂತೆ ಆರೋಪಿಸಲಾದ ಹಣಕಾಸಿನ ಅವ್ಯವಹಾರಗಳ ಕುರಿತು ಗಮನ ಸೆಳೆದು, ಪದ್ಮಿನಿ ನಂದ ಅವರ ಬಳಗ ನ್ಯಾಯಾಲಯದ ಮೊರೆ ಹೋಗಿತ್ತು.ಈ ಅರ್ಜಿಯನ್ನು ವಿಚಾರಿಸಿದ ಸಿಟಿ ಸಿವಿಲ್ ಕೋರ್ಟ್ (ಹಾಲ್ ನಂ. ೬೦) ನ್ಯಾಯಾಲಯವು, ಪ್ರತಿವಾದಿ ಸಂಖ್ಯೆ ೨ ಅವರಿಗೆ ಮಾರ್ಚ್ ೨೧, ೨೦೨೬ ಅಥವಾ ಯಾವುದೇ ಇತರ ದಿನಾಂಕದಲ್ಲಿ ಚುನಾವಣೆ ನಡೆಸದಂತೆ ತಾತ್ಕಾಲಿಕ ತಡೆ ಆದೇಶ ನೀಡಿದೆ.

ಇದಲ್ಲದೆ, ಸಾಮಾನ್ಯ ಸಭೆಯ ನೆಪದಲ್ಲಿ ಯಾರಾದರೂ ಚುನಾವಣೆ ನಡೆಸಲು ಮುಂದಾದರೆ, ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನ್ಯಾಯಾಲಯ ಎಚ್ಚರಿಕೆ ನೀಡಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I