I ಕ್ರೀಡಾ ಚಟುವಟಿಕೆಗಳಿಂದ ಸದೃಢ ಸಮಾಜ ನಿರ್ಮಾಣ I ಶಾಸಕ ಎಸ್.ಎನ್ ಚೆನ್ನಬಸಪ್ಪ I
ಶಿವಮೊಗ್ಗ : ಬಸವಸಂಗಮ ಶಿವಮೊಗ್ಗ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕ್ರಿಕೆಟ್ ಟೂರ್ನಮೆಂಟ್ನ ಉದ್ಘಾಟನಾ ಸಮಾರಂಭದಲ್ಲಿ ಶಾಸಕ ಎಸ್.ಎನ್ ಚೆನ್ನಬಸಪ್ಪನವರು ಚಾಲನೆ ನೀಡಿದರು
ಕ್ರೀಡೆಗಳು ಕೇವಲ ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸುವುದು ಮಾತ್ರವಲ್ಲದೆ, ಯುವಜನತೆಯಲ್ಲಿ ಶಿಸ್ತು, ಸಂಘಟನಾ ಚಾತುರ್ಯ ಮತ್ತು ಸೌಹಾರ್ದತೆಯನ್ನು ಬೆಳೆಸುತ್ತವೆ. ಇಂತಹ ಉತ್ತಮ ಕ್ರೀಡಾಕೂಟವನ್ನು ಆಯೋಜಿಸಿರುವ ಬಸವಸಂಗಮ ತಂಡದ ಪ್ರಯತ್ನ ಶ್ಲಾಘನೀಯ ಎಂದು ಅಭಿಪ್ರಾಯಿಸಿದರು ಈ ಸಂದರ್ಭದಲ್ಲಿ ವೀರಶೈವ ಸಮುದಾಯದ ಮುಖಂಡರು ಹಾಗೂ ಬಿಜೆಪಿಯ ಪ್ರಮುಖರು ಉಪಸ್ಥಿತರಿದ್ದರು.


