Sunday, August 2, 2026
Homeಸೂರ್ಯಗಗನI ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ I ₹1 ಕೋಟಿ ವಿಮಾ ಪರಿಹಾರ ವಿತರಣೆ I

I ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ I ₹1 ಕೋಟಿ ವಿಮಾ ಪರಿಹಾರ ವಿತರಣೆ I

I ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ I ₹1 ಕೋಟಿ ವಿಮಾ ಪರಿಹಾರ ವಿತರಣೆ I

ಶಿವಮೊಗ್ಗ: ರಾಜ್ಯ ಮೀಸಲು ಪೊಲೀಸ್ (KSRP) 8ನೇ ಪಡೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಸಂದರ್ಭದಲ್ಲಿ ಅಕಾಲಿಕ ನಿಧನರಾದ ಪೇದೆ ಚಂದ್ರಶೇಖರ್ ಎಲ್. ಅವರ ಕುಟುಂಬಕ್ಕೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ (SBI) ವತಿಯಿಂದ ₹1 ಕೋಟಿ ಮೊತ್ತದ ಅಪಘಾತ ವಿಮಾ ಪರಿಹಾರದ ಚೆಕ್ ಅನ್ನು  ಶನಿವಾರ ಹಸ್ತಾಂತರಿಸಲಾಯಿತು.

ಘಟನೆಯ ಹಿನ್ನೆಲೆ: ಕೆ.ಎಸ್.ಆರ್.ಪಿ 8ನೇ ಪಡೆಯಲ್ಲಿ ಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದ ಚಂದ್ರಶೇಖರ್ ಅವರು ಭದ್ರಾ ನದಿಯಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದರು. ಮೃತರ ಬ್ಯಾಂಕ್ ಖಾತೆಯು ಭಾರತೀಯ ಸ್ಟೇಟ್ ಬ್ಯಾಂಕ್ ವೇತನ ಪ್ಯಾಕೇಜ್ ಅಡಿಯಲ್ಲಿ ಇದ್ದುದರಿಂದ, ಬ್ಯಾಂಕ್‌ ವಿಶೇಷ ವಿಮಾ ಯೋಜನೆಯಡಿ ಅವರ ಕುಟುಂಬಕ್ಕೆ ಈ ವಿಮಾ ಸೌಲಭ್ಯ ಲಭ್ಯವಾಗಿದೆ.

ಚೆಕ್ ಹಸ್ತಾಂತರ : ಮಂಗಳೂರಿನ ಭಾರತೀಯ ಸ್ಟೇಟ್ ಬ್ಯಾಂಕ್‌ ಮಂಗಳೂರು ಆಡಳಿತ ಕಚೇರಿಯ ಉಪ ಪ್ರಧಾನ ವ್ಯವಸ್ಥಾಪಕರಾದ ಕೃಷ್ಣ ಮೋಹನ ಮುಚ್ಚರ್ಲ ಮತ್ತು ಶಿವಮೊಗ್ಗದ ಪ್ರಾದೇಶಿಕ ವ್ಯವಸ್ಥಾಪಕರಾದ  ವಿಜಯ ಸಾಯಿ ಮಾಡುಗುಲ ಅವರು ಮೃತರ ಕುಟುಂಬದ ಸದಸ್ಯರಿಗೆ ₹1 ಕೋಟಿ ಮೊತ್ತದ ವಿಮಾ ಪರಿಹಾರದ ಚೆಕ್ ಅನ್ನು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್,  ಕೆ.ಎಸ್.ಆರ್.ಪಿ 8ನೇ ಪಡೆಯ ಕಮಾಂಡೆಂಟ್ ಎಸ್. ಯುವಕುಮಾರ್, ಎಸ್.ಬಿ.ಐ ಬ್ಯಾಂಕ್‌ ಹಿರಿಯ ಅಧಿಕಾರಿಗಳಾದ ಪುಷ್ಪಲತಾ ಕೆ, ಪ್ರಕಾಶ್ ಕುಮಾರ್, ಶಶಿಕುಮಾರ್, ಪ್ರದೀಪ್ ಕುಮಾರ್ ಹಾಗೂ ಕೆ.ಎಸ್.ಆರ್.ಪಿ 8ನೇ ಪಡೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I