Monday, August 3, 2026
Homeಸೂರ್ಯಗಗನI ಪೌರಕಾರ್ಮಿಕರ ಆರೋಗ್ಯ ರಕ್ಷಣೆಗಾಗಿ ಅನನ್ಯವಾದ ಆರೋಗ್ಯ ವಿಮಾ ಯೋಜನೆ ಜಾರಿ I ಮುರಳಿ ಅಶೋಕ...

I ಪೌರಕಾರ್ಮಿಕರ ಆರೋಗ್ಯ ರಕ್ಷಣೆಗಾಗಿ ಅನನ್ಯವಾದ ಆರೋಗ್ಯ ವಿಮಾ ಯೋಜನೆ ಜಾರಿ I ಮುರಳಿ ಅಶೋಕ ಸಾಲಪ್ಪ I

I ಪೌರಕಾರ್ಮಿಕರ ಆರೋಗ್ಯ ರಕ್ಷಣೆಗಾಗಿ ಅನನ್ಯವಾದ ಆರೋಗ್ಯ ವಿಮಾ ಯೋಜನೆ ಜಾರಿ I ಮುರಳಿ ಅಶೋಕ ಸಾಲಪ್ಪ I

ಶಿವಮೊಗ್ಗ  : ಧೂಳು, ಗಲೀಜಿನಲ್ಲೇ ಕೆಲಸ ಮಾಡುವ ಪೌರ ಕಾರ್ಮಿಕರು ಆರೋಗ್ಯಕ್ಕಾಗಿ ಹೆಚ್ಚು ಖರ್ಚು ಮಾಡಬೇಕಾದ ಸಂದರ್ಭ ಬರುವ ಕಾರಣ ಒಂದು ಅದ್ಭುತ ನಗದುರಹಿತ ಆರೋಗ್ಯ ವಿಮಾ ಯೋಜನೆಯನ್ನು ಜಾರಿಗೆ ತರಲಾಗಿದ್ದು ಎಲ್ಲ ಪೌರ ಕಾರ್ಮಿಕರು ಇದರ ಸದ್ಬಳಕೆ ಮಾಡಿಕೊಳ್ಳುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕೆಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮುರಳಿ ಅಶೋಕ ಸಾಲಪ್ಪ ತಿಳಿಸಿದರು.

ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ಹಾಗೂ ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ಬುಧವಾರ ಪಾಲಿಕೆ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ನೇರಪಾವತಿ ಪೌರಕಾರ್ಮಿಕರಿಗೆ ಆರೋಗ್ಯ ತಪಾಸಣೆ, ಅರಿವು ಮೂಡಿಸುವುದು ಹಾಗೂ ಆರೋಗ್ಯ ವಿಮಾ ಕಾರ್ಡ್ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಈ ಆರೋಗ್ಯ ಯೋಜನೆಯಡಿ ಪೌರಕಾರ್ಮಿಕರಿಗೆ ರೂ. 5 ಲಕ್ಷದವರೆಗೆ ಸುಮಾರು ಮೂರು ಸಾವಿರ ಖಾಯಿಲೆಗಳಿಗೆ ಯಾವುದೇ ಆಸ್ಪತ್ರೆಯಲ್ಲಿ ನಗದುರಹಿತ ಚಿಕಿತ್ಸೆ ಪಡೆಯಬಹುದಾಗಿದ್ದು ರಾಜ್ಯದಲ್ಲಿಯೇ ಮೊದಲಿಗೆ ಶಿವಮೊಗ್ಗದಲ್ಲಿ ಈ ಯೋಜನೆಗೆ ಚಾಲನೆ ನೀಡಲಾಗುತ್ತಿದೆ ಎಂದು ತಿಳಿಸಿದರು.

. ನಿವೃತ್ತಿ ಹೊಂದುವುದರೊಳಗೆ ಕಾರ್ಮಿಕರು ತಮ್ಮ ಆರೋಗ್ಯ ಸಮಸ್ಯೆಗಳನ್ನು ಸರಿಪಡಿಸಿಕೊಳ್ಳಬೇಕು. ಕಣ್ಣಿನ ಪೊರೆ ಸಮಸ್ಯೆ ಇದ್ದಲ್ಲಿ ಇಂದೇ ಶಸ್ತ್ರಚಿಕಿತ್ಸೆ ಪಡೆಯಿರಿ. ನಿವೃತ್ತಿ ನಂತರ ಈ ಸೌಲಭ್ಯ ಪಡೆಯಲು ಬರುವುದಿಲ್ಲವೆಂದು ತಿಳಿಸಿದರು.
ಪೌರಕಾರ್ಮಿಕರಿಗೆ ಆರೋಗ್ಯ ವಿಮೆಯನ್ನು ನೀಡಬೇಕೆಂದು ಮೊದಲು ಪ್ರೇರೇಪಣೆ ನೀಡಿದ್ದು ರಾಹುಲ್ ಗಾಂಧಿಯವರು ಎಂದು ಸ್ಮರಿಸಿದ ಅವರು 1990 ರ ದಶಕದಲ್ಲಿ ಪೌರಕಾರ್ಮಿಕರ ಗುತ್ತಿಗೆ ಪದ್ದತಿ ಬಂದಿತು. ಗುತ್ತಿಗೆ ಮಹಾಮಾರಿ ವಿರುದ್ದ ನಾನು ಪ್ರಶ್ನೆ ಮಾಡಿದ್ದೆ, ಅದಕ್ಕೆ ಸ್ಪಂದಿಸಿದ ಪರಮೇಶ್ವರ್ ಸರ್ ರವರು ಚುನಾವಣಾ ಪ್ರಣಾಳಿಕೆಯಲ್ಲಿ ನೇರ ಪಾವತಿ ಕಾರ್ಮಿಕರನ್ನಾಗಿ ಘೋಷಿಸುವ ವಿಷಯವನ್ನು ಸೇರಿಸಿದರು.
ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು 2017 ರಲ್ಲಿ ನೇರ ಪಾವತಿ ಪೌರಕಾರ್ಮಿಕರೆಂದು ಘೋಷಿಸಿದರು. ಹಾಗೂ ಕಳೆದ ವರ್ಷ ಮೇ ಮಾಹೆಯಲ್ಲಿ 20 ಸಾವಿರ ಪೌರ ಕಾರ್ಮಿಕರನ್ನು ಖಾಯಂಗೊಳಿಸಲಾಯಿತು.
ಪೌರ ಕಾರ್ಮಿಕರಿಗೆ ವಸತಿ ಯೋಜನೆ, ಆರೋಗ್ಯ ವಿಮೆ ಜಾರಿಯಾಗಿದ್ದು ಮುಂದಿನ ದಿನಗಳಲ್ಲಿ ಕಸ ಗುಡಿಸುವ ಮೆಕ್ಯಾನೈಸ್ಡ್ ವ್ಯವಸ್ಥೆ ತರಲಾಗುವುದು. ಇದರಿಂದ ಧೂಳು, ಗಲೀಜಿನಿಂದ ರಕ್ಷಣೆ ಒದಗಲಿದೆ.
ರಿಸ್ಕ್ ಭತ್ಯೆ ನೀಡಲು ಸಹ ಸರ್ಕಾರಕ್ಕೆ ಬೇಡಿಕೆ ಇಡಲಾಗಿದೆ. ಹಾಗು ಬೆಂಗಳೂರಿನಲ್ಲಿ ಐಪಿಡಿ ಸಾಲಪ್ಪ ಸ್ಮಾರಕ ಭವನ ನಿರ್ಮಿಸಲಾಗುವುದು. ಪೌರ ಕಾರ್ಮಿಕರು ಬೆಂಗಳೂರಿಗೆ ಬಂದಾಗ ಇಲ್ಲಿ ತಂಗುವ ವ್ಯವಸ್ಥೆ ಇರಲಿದೆ ಎಂದು ತಿಳಿಸಿದರು.
ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಹಿಂದೆ ಸಾಲಪ್ಪನವರು ಹೋರಾಡಿದ್ದರು. ವಿವಿಧ ಹೆಸರುಗಳಿಂದ ಕರೆಯಲಾಗುತ್ತಿದ್ದ ಕಾರ್ಮಿಕರಿಗೆ ಸಾಲಪ್ಪನವರ ಸಮಿತಿ ಮೂಲಕ ಡಿ.ದೇವರಾಜ ಅರಸುರವರು ಪೌರ ಕಾರ್ಮಿಕರೆಂದು ನಾಮಕರಣ ಮಾಡಿದರು ಎಂದು ಸ್ಮರಿಸಿದರು.

ಕೋಡಿಜಿಟ್ ವಿಮಾ ಕಂಪೆನಿಯ ಸಂಯೋಜಕರಾದ ಕೃಷ್ಣಮೂರ್ತಿ ಮಾತನಾಡಿ, ಪೌರ ಕಾರ್ಮಿಕರಿಗೆ, ಸಫಾಯಿ ಕರ್ಮಚಾರಿಗಳಿಗೆ ಒಂದು ಅದ್ಭುತವಾದ ಆರೋಗ್ಯ ವಿಮಾ ಪಾಲಿಸಿಯನ್ನು ವಿನ್ಯಾಸಗೊಳಿಸಲಾಗಿದ್ದು, ಭಾರತದಲ್ಲೇ ಈ ರೀತಿಯ ನಗದುರಹಿತ ಆರೋಗ್ಯ ವಿಮೆ ಇದೇ ಮೊದಲು ಎಂದು ಹೇಳಬಹುದು.
ಈ ಆರೋಗ್ಯ ಕಾರ್ಡ್ ಪಡೆದವರು ಯಾವುದೇ ಕಾಯಿಲೆ ಬಂದರೂ ರೂ. 5 ಲಕ್ಷದವರೆಗೆ ನಗದುರಹಿತ ಚಿಕಿತ್ಸೆ ಪಡೆಯಬಹುದು. ಶಿವಮೊಗ್ಗದ ಪ್ರತಿಯೊಂದು ಆಸ್ಪತ್ರೆಯಲ್ಲಿ ಈ ಸೌಲಭ್ಯ ಪಡೆಯಬಹುದಾಗಿದ್ದು 3000 ವಿವಿಧ ಖಾಯಿಲೆಗಳಿಗೆ ಈ ಯೋಜನೆಯಡಿ ನಗದುರಹಿತ ಚಿಕಿತ್ಸೆ ಲಭ್ಯವಿದೆ. ಈ ಆರೋಗ್ಯ ಕಾರ್ಡ್ ಇದ್ದರೆ, ನಿಮ್ಮ ಜೇಬಿನಲ್ಲಿ ರೂ. 5 ಲಕ್ಷ ಇದ್ದಂತೆ. ಕಾರ್ಮಿಕರು ಆರೋಗ್ಯದ ಕಡೆ ಹೆಚ್ಚಿನ ಗಮನ ನೀಡಿ, ಸಮಸ್ಯೆ ಚಿಕ್ಕದಿದ್ದಾಗಲೇ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಿರಿ ಎಂದರು.

ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ದಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಟಿ.ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ಸಾಫ್ಟ್ವೇರ್ ಕಂಪೆನಿಗಳಲ್ಲಿ ಜಾರಿಗೊಳಿಸಿದಂತಹ ವೈಯಕ್ತಿಕ ಆರೋಗ್ಯ ವಿಮಾ ಯೋಜನೆಯನ್ನು ಪೌರಕಾರ್ಮಿಕರಿಗೆ ರೂಪಿಸಬೇಕೆಂದು ಅಧ್ಯಕ್ಷರು ಆಸಕ್ತಿ ತೋರಿ, ಸಾಕಷ್ಟು ಶ್ರಮಿಸಿ, ಅತಿ ಉಪಯುಕ್ತವಾದ ಯೋಜನೆಯನ್ನು ಜಾರಿಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ವಿಮೆಯಡಿ ಆರೋಗ್ಯ ಮತ್ತು ಅಪಘಾತ ವಿಮೆ ಎರಡೂ ಕವರ್ ಆಗುತ್ತದೆ. ಕಾರ್ಡ್ ನ್ನು ಸ್ಕ್ಯಾನ್ ಮಾಡಿದರೆ ಸಾಕು, ಎಲ್ಲ ವಿವರ ಇದರಲ್ಲಿ ಲಭ್ಯವಾಗುತ್ತದೆ. ಅತೀ ಸರಳವಾಗಿ ಇದನ್ನು ಬಳಸಬಹುದಾಗಿದ್ದು, ಭಾರತದಲ್ಲೇ ಪ್ರಥಮ ಬಾರಿಗೆ ಇಂತಹ ಅನನ್ಯವಾದ ಯೋಜನೆ ಅನುಷ್ಠಾನಗೊಳಿಸಲಾಗಿದೆ ಎಂದು ಯೋಜನೆ ಕುರಿತು ಮಾಹಿತಿ ನೀಡಿದರು.

ಪೌರಕಾರ್ಮಿಕರ ಸಂಘದ ಜಿಲ್ಲಾ ಅಧ್ಯಕ್ಷರಾದ ಗೋವಿಂದಪ್ಪ ಮಾತನಾಡಿ, ತಳಮಟ್ಟದ ಕಾರ್ಮಿಕರಿಗೆ ಇಂತಹ ಉತ್ತಮ ಆರೋಗ್ಯ ವಿಮೆ ಯೋಜನೆ ತಲುಪಿಸಿದ ಅಧ್ಯಕ್ಷರು ಹಾಗೂ ಇದಕ್ಕಾಗಿ ಶ್ರಮಿಸಿದ ಎಲ್ಲರಿಗೂ ಅಭಿನಂದನೆ ತಿಳಿಸಿದ ಅವರು ಲೋಡರ್ಸ್, ಕ್ಲೀನರ್ಸ್, ಸ್ವೀಪರ್ಸ್ಗಳಿಗೆ ಸಹ ಈ ಯೋಜನೆಯನ್ನು ವಿಸ್ತರಿಸಬೇಕೆಂದು ಮನವಿ ಮಾಡಿದರು.
ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪನವರ ಸಂದೇಶ ಮತ್ತು ಅಭಿನಂದನೆಯನ್ನು ಅವರ ವಿಶೇಷ ಅಧಿಕಾರಿ ಶ್ರೀಪತಿ ಕಾರ್ಯಕ್ರಮದಲ್ಲಿ ತಿಳಿಸಿದರು.
ಇದೇ ವೇಳೆ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದಿಂದ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ ಮಾಡಲಾಯಿತು

ಕಾರ್ಯಕ್ರಮದಲ್ಲಿ ಪಾಲಿಕೆ ಆಯುಕ್ತರಾದ ಕೆ.ಮಾಯಣ್ಣ ಗೌಡ ಸ್ವಾಗತಿಸಿದರು. ಅಂಬೇಡ್ಕರ್ ಅಭಿವೃದ್ದಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ರಾಘವೇಂದ್ರ ಡಿ.ಎಂ, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಪ್ರಭಾಕರ, ಗೋಪಾಲ್, ಅಧಿಕಾರಿಗಳು, ಪೌರ ಕಾರ್ಮಿಕರು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I