I ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದಿಂದ I ಅರ್ಥಪೂರ್ಣ ಪತ್ರಿಕಾ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ I
ಶಿವಮೊಗ್ಗ : ನಗರದ ಮಧುರ ಪ್ಯಾರಡೈಸ್ನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ “ದ್ವಿತೀಯ ವರ್ಷದ ವಾರ್ಷಿಕೋತ್ಸವ, ಪತ್ರಿಕಾ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ” ಸಮಾರಂಭ ಜರುಗಿತು,
ಸಮಾಜದ ಕನ್ನಡಿಯಾಗಿ ಕೆಲಸ ಮಾಡುವ ಪತ್ರಕರ್ತರ ಸೇವೆ ಅನನ್ಯ. ಕಾರ್ಯಕ್ರಮದಲ್ಲಿ ಅಗಲಿದ ಪತ್ರಕರ್ತರಿಗೆ ಭಕ್ತಿಪೂರ್ವಕ ಶ್ರದ್ಧಾಂಜಲಿ ಸಲ್ಲಿಸಿ, ಅವರ ಸೇವೆಯನ್ನು ಸ್ಮರಿಸಲಾಯಿತು. ಇದೇ ಸಂದರ್ಭದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ಪತ್ರಕರ್ತರ ಮಕ್ಕಳಿಗೆ ‘ಪ್ರತಿಭಾ ಪುರಸ್ಕಾರ’ ನೀಡಿ ಗೌರವಿಸಿದರು,
ಶಿವಮೊಗ್ಗದ ಪತ್ರಕರ್ತರಿಗೆ ಸನ್ಮಾನಿಸಿದ್ದು, ಅತ್ಯಂತ ಅರ್ಥಪೂರ್ಣವಾಗಿತ್ತು. ನಾಳೆಯ ಸದೃಢ ಸಮಾಜದ ನಿರ್ಮಾಣಕ್ಕೆ ಈ ಪ್ರತಿಭೆಗಳು ಶಕ್ತಿಯಾಗಲಿ ಎಂದು ಈ ಸಂದರ್ಭದಲ್ಲಿ ಶಾಸಕರಾದ ಚೆನ್ನಬಸಪ್ಪನವರು, ಗಣ್ಯರು ಹಾರೈಸಿದರು,
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶಾಸಕ ಚೆನ್ನಬಸಪ್ಪ, ಘಟಕದ ರಾಜ್ಯಾಧ್ಯಕ್ಷರಾದ ಬಂಗ್ಲೆ ಮಲ್ಲಿಕಾರ್ಜುನ್, ಕಾಂಗ್ರೆಸ್ ಮುಖಂಡರಾದ ಆಯನೂರು ಮಂಜುನಾಥ್, ಎಂ.ಶ್ರೀಕಾಂತ್, ಹೆಚ್.ಸಿ ಯೋಗೇಶ್, ಸೇರಿದಂತೆ ಜಿಲ್ಲಾ ಘಟಕದ ಅಧ್ಯಕ್ಷರಾದ ಡಿ.ಜಿ. ನಾಗರಾಜ್, ಪ್ರಧಾನ ಕಾರ್ಯದರ್ಶಿ ಸತೀಶ್ ಗೌಡ, ಉಪಾಧ್ಯಕ್ಷರಾದ ಚಿತ್ರಪ್ಪ ಎಡವಾಲ, ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಪತ್ರಿಕಾ ರಂಗದ ಗಣ್ಯರು ಉಪಸ್ಥಿತರಿದ್ದರು.




