Sunday, 20 September 2026 Suryagagana — Edition

Suryagagana

My WordPress Blog

ಸೂರ್ಯಗಗನ I ಸರ್ವ ಸದಸ್ಯರ ವಾರ್ಷಿಕ ಮಹಾಸಭೆ I ಪ್ರತಿಭಾ ಪುರಸ್ಕಾರ I ಸಮಾರಂಭ I ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ಸರ್ವ ಸದಸ್ಯರ ವಾರ್ಷಿಕ ಮಹಾಸಭೆ I ಪ್ರತಿಭಾ ಪುರಸ್ಕಾರ I ಸಮಾರಂಭ I ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I
ಸೂರ್ಯಗಗನ

I ಜಯನಗರ ಪೊಲೀಸ್ ಠಾಣೆಗೆ ನೂತನ ಜೀಪು ಹಸ್ತಾಂತರ‌ I ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಡಿ ನೆರವು I

I ಜಯನಗರ ಪೊಲೀಸ್ ಠಾಣೆಗೆ ನೂತನ ಜೀಪು ಹಸ್ತಾಂತರ‌ I ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಡಿ ನೆರವು I ಶಿವಮೊಗ್ಗ, : ಸಾರ್ವಜನಿಕರ ರಕ್ಷಣೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಗಲಿರುಳು ಶ್ರಮಿಸುವ ಪೊಲೀಸ್ ಇಲಾಖೆಯ ಮೂಲಭೂತ ಸೌಕರ್ಯಗಳನ್ನು ಬಲಪಡಿಸುವ ಉದ್ದೇಶದಿಂದ,…

I ಜಯನಗರ ಪೊಲೀಸ್ ಠಾಣೆಗೆ ನೂತನ ಜೀಪು ಹಸ್ತಾಂತರ‌ I ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಡಿ ನೆರವು I

ಶಿವಮೊಗ್ಗ, : ಸಾರ್ವಜನಿಕರ ರಕ್ಷಣೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಗಲಿರುಳು ಶ್ರಮಿಸುವ ಪೊಲೀಸ್ ಇಲಾಖೆಯ ಮೂಲಭೂತ ಸೌಕರ್ಯಗಳನ್ನು ಬಲಪಡಿಸುವ ಉದ್ದೇಶದಿಂದ, 2025-26ನೇ ಸಾಲಿನ ವಿಧಾನ ಪರಿಷತ್ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನದಡಿ, ಶಿವಮೊಗ್ಗ ನಗರದ ಜಯನಗರ ಪೊಲೀಸ್ ಠಾಣೆಗೆ ಮಂಜೂರಾಗಿದ್ದ ನೂತನ ‘ಪೊಲೀಸ್ ಜೀಪನ್ನು’ ಗುರುವಾರ (ಇಂದು) ಅಧಿಕೃತವಾಗಿ ಪೊಲೀಸ್ ಇಲಾಖೆಗೆ ಹಸ್ತಾಂತರಿಸಲಾಯಿತು.

ನಗರದ ಮೆಗ್ಗಾನ್ ಆಸ್ಪತ್ರೆ ಮುಂಭಾಗದಲ್ಲಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ (ಎಸ್.ಪಿ ಆಫೀಸ್) ಆವರಣದಲ್ಲಿ ಇಂದು ಬೆಳಿಗ್ಗೆ ನಡೆದ ಕಾರ್ಯಕ್ರಮದಲ್ಲಿ, ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ನಿಖಿಲ್ ಅವರು ಮತ್ತು ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್ ಚನ್ನಬಸಪ್ಪ ಅವರ ಸಮ್ಮುಖದಲ್ಲಿ ವಿಧಾನ ಪರಿಷತ್ ಶಾಸಕರಾದ ಡಾ. ಧನಂಜಯ ಸರ್ಜಿ ಅವರು ನೂತನ ವಾಹನಕ್ಕೆ ಹಸಿರು ನಿಶಾನೆ ತೋರಿಸುವುದರ ಮೂಲಕ ಪೊಲೀಸ್ ಇಲಾಖೆಗೆ ಹಸ್ತಾಂತರಿಸಿದರು.

ನೂತನ ವಾಹನ ಹಸ್ತಾಂತರಿಸಿದ ಡಾ. ಧನಂಜಯ ಸರ್ಜಿ

ನೂತನ ವಾಹನ ಹಸ್ತಾಂತರಿಸಿ ಮಾತನಾಡಿದ ಡಾ. ಧನಂಜಯ ಸರ್ಜಿ ಅವರು, “ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಇಲಾಖೆಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ದಿನೇ ದಿನೇ ಬೆಳೆಯುತ್ತಿರುವ ಶಿವಮೊಗ್ಗ ನಗರದಲ್ಲಿ ಅಪರಾಧಗಳ ನಿಯಂತ್ರಣ ಹಾಗೂ ಸಾರ್ವಜನಿಕರ ತುರ್ತು ಕರೆಗಳಿಗೆ ತ್ವರಿತವಾಗಿ ಸ್ಪಂದಿಸಲು ಪೊಲೀಸರಿಗೆ ಸುಸಜ್ಜಿತ ವಾಹನಗಳ ಅಗತ್ಯವಿದೆ. ಈ ನಿಟ್ಟಿನಲ್ಲಿ ನನ್ನ 2025-26ನೇ ಸಾಲಿನ ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ಜಮ್ ಪೋರ್ಟಲ್ ಮೂಲಕ 7.2 ಲಕ್ಷದಲ್ಲಿ ಜಯನಗರ ಪೊಲೀಸ್ ಠಾಣೆಗೆ ನೂತನ ಜೀಪನ್ನು ಒದಗಿಸಿದ್ದೇವೆ, ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಶೇ 22% ರಿಂದ 25% ವಾಹನದ ಕೊರತೆ ಇದೆ, ಜಯನಗರ ಪೊಲೀಸ್ ಠಾಣೆ ಇರುವ ಜಾಗಕ್ಕೆ ಒಂದು ಇತಿಹಾಸ ಇದೆ, ಠಾಣೆ ಇರುವ ಜಾಗದಲ್ಲಿ ಜಿಲ್ಲೆಯ ಮೊದಲ ನ್ಯಾಯಾಲಯ ಇತ್ತು. ನಮ್ಮ ಸರ್ಜಿ ಆಸ್ಪತ್ರೆಯ ವತಿಯಿಂದ ನಾವು ಜಿಲ್ಲಾ ಪೊಲೀಸರಿಗೆ ವಾರ್ಷಿಕ ಹೆಲ್ತ್ ಚೆಕ್ ಅಪ್ ಅನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದ್ದೇವೆ. ಪೊಲೀಸರ ಒತ್ತಡದ ಕೆಲಸ ನಡುವೆ ತಮ್ಮ ಆರೋಗ್ಯದ ಬಗ್ಗೆಯೂ ಗಮನ ಹರಿಸಬೇಕು. ಮುಂದಿನ ದಿನಗಳಲ್ಲೂ ಇಲಾಖೆಗೆ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರವನ್ನು ನೀಡಲಾಗುವುದು,” ಎಂದು ಭರವಸೆ ನೀಡಿದರು.

ನೂತನ ವಾಹನವನ್ನು ಸ್ವೀಕರಿಸಿ ಕೃತಜ್ಞತೆ ಸಲ್ಲಿಸಿದ ಶಿವಮೊಗ್ಗ ಎಸ್.ಪಿ. ನಿಖಿಲ್ :

ನೂತನ ವಾಹನವನ್ನು ಸ್ವೀಕರಿಸಿ ಕೃತಜ್ಞತೆ ಸಲ್ಲಿಸಿದ ಶಿವಮೊಗ್ಗ ಎಸ್.ಪಿ. ನಿಖಿಲ್ ಅವರು, “ಪೊಲೀಸ್ ಇಲಾಖೆಯ ಕಾರ್ಯಕ್ಷಮತೆ ಹೆಚ್ಚಿಸಲು ಇಂತಹ ಮೂಲಭೂತ ಸೌಕರ್ಯಗಳ ಸೇರ್ಪಡೆ ಅತ್ಯಗತ್ಯ. ಸಾರ್ವಜನಿಕರ ರಕ್ಷಣೆಗೆ ನಮ್ಮ ಸಿಬ್ಬಂದಿ ಸದಾ ಸಿದ್ಧರಿದ್ದು, ಈ ಹೊಸ ವಾಹನದಿಂದ ಜಯನಗರ ಠಾಣಾ ವ್ಯಾಪ್ತಿಯಲ್ಲಿ ಬೀಟ್ ವ್ಯವಸ್ಥೆಯನ್ನು (Beat System) ಮತ್ತಷ್ಟು ಚುರುಕುಗೊಳಿಸಲಾಗುವುದು. ಜಯನಗರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಡಿ.ಸಿ ಆಫೀಸ್, ನ್ಯಾಯಾಲಯ, ಸರ್ಕಾರಿ ಕಚೇರಿಗಳು ಇರುವುದರಿಂದ ಠಾಣೆಗೆ ವಾಹನ ಅವಶ್ಯಕತೆ ಇತ್ತು. ಇಲಾಖೆಯ ಬೇಡಿಕೆಗೆ ತಕ್ಷಣ ಸ್ಪಂದಿಸಿ ತಮ್ಮ ಅನುದಾನದಲ್ಲಿ ವಾಹನ ಒದಗಿಸಿದ ಡಾ. ಧನಂಜಯ ಸರ್ಜಿ ಅವರಿಗೆ ಪೊಲೀಸ್ ಇಲಾಖೆ ಹಾಗೂ ಶಿವಮೊಗ್ಗ ಜನತೆಯ ಪರವಾಗಿ ವಿಶೇಷ ಧನ್ಯವಾದಗಳು,” ಎಂದು ತಿಳಿಸಿದರು.

ಈ ವೇಳೆ ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್ ಚನ್ನಬಸಪ್ಪ, ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಕಾರಿಯಪ್ಪ, ಡಿ.ವೈ.ಎಸ್.ಪಿ ಸಂಜೀವ್ ಕುಮಾರ್, ಜಯನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ರವಿ ಪಾಟೀಲ್, ಶಿವಮೊಗ್ಗ ಗ್ರಾಮಾಂತರ ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾದ ಅನಿಲ್ , ಪ್ರಮುಖರಾದ ಬೇಡರ ಹೊಸಹಳ್ಳಿ ಸಂದೀಪ್ , ಗಿರೀಶ್ ಮಲ್ಲಾಪುರ, ಶುಭಕರ್, ಸಂತೆಕಡೂರು ಹರೀಶ್, ರೇಣುಕಾರಾಧ್ಯ , ಸರ್ಜಿ ಆಸ್ಪತ್ರೆಯ ಆಡಳಿತಾಧಿಕಾರಿಗಳಾದ ಮುರುಳೀಧರ್ ರಾವ್ ಕುಲಕರ್ಣಿ, ವೈದ್ಯರಾದ ಡಾ. ವಿಜಯ ಕುಮಾರ ಮಾಯೆರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು

Gara Srinivas

Gara Srinivas

Leave a comment

error: Content is protected !!