Sunday, August 2, 2026
Homeಸೂರ್ಯಗಗನI ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಷರತ್ತುಗಳನ್ನು I ಸರಳೀಕರಣ ಮಾಡಿ ಆದೇಶ : ಕೆಯುಡಬ್ಲ್ಯೂಜೆ...

I ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಷರತ್ತುಗಳನ್ನು I ಸರಳೀಕರಣ ಮಾಡಿ ಆದೇಶ : ಕೆಯುಡಬ್ಲ್ಯೂಜೆ ಸ್ವಾಗತ I

I ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಷರತ್ತುಗಳನ್ನು I ಸರಳೀಕರಣ ಮಾಡಿ ಆದೇಶ : ಕೆಯುಡಬ್ಲ್ಯೂಜೆ ಸ್ವಾಗತ I
ಬೆಂಗಳೂರು : ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಯೋಜನೆ ಜಾರಿಗೆ ಅಡ್ಡಿಯಾಗಿದ್ದ ಕಠಿಣ ಷರತ್ತುಗಳನ್ನು ತೆಗೆದು, ನಿಯಮಾವಳಿ ಸರಳೀಕರಣ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು, ಕೆಯುಡಬ್ಲ್ಯೂಜೆ ಸ್ವಾಗತಿಸಿದೆ.
ಬೀದರನಲ್ಲಿ ನಡೆದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಒತ್ತಾಯಕ್ಕೆ ಸ್ಪಂಧಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅದೇ ವೇದಿಕೆಯಲ್ಲಿ ಕಠಿಣ ಷರತ್ತುಗಳನ್ನು ಕೈಬಿಡುವುದಾಗಿ ಭರವಸೆ ನೀಡಿದ್ದರು.
ಸರ್ಕಾರಕ್ಕೆ ಮೂರು ವರ್ಷ ತುಂಬಿದಾಗ ಕೆಯುಡಬ್ಲ್ಯೂಜೆ ಏರ್ಪಡಿಸಿದ್ದ ಸಂವಾದದಲ್ಲಿ ಭಾಗವಹಿಸಿದ್ದ ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ಈ ಬಗ್ಗೆ ವಾರದೊಳಗೆ ಕ್ರಮ ವಹಿಸುವುದಾಗಿ ತಿಳಿಸಿದ್ದರು. ಸಿಎಂ ಸೂಚನೆ ಮೇರೆಗೆ ಹೊಸ ಆದೇಶ ಹೊರಬಿದ್ದಿದೆ.
ಪೂರ್ಣಾವಧಿಗೆ ಸೀಮಿತವಾಗಿದ್ದನ್ನು ಬದಲಿಸಿ, ಅರೆಕಾಲಿಕ ವರದಿಗಾರರಿಗೂ ಯೋಜನೆ ವಿಸ್ತರಿಸಲಾಗಿದೆ. ಸೌಲಭ್ಯ ಪಡೆಯಲು 11 ತಿಂಗಳ ಲೈನೇಜ್ ಪಡೆದಿರುವ ಬ್ಯಾಂಕ್ ಸ್ಟೇಟ್ ಮೆಂಟ್ ಕಡ್ಡಾಯವಾಗಿದ್ದನ್ನು ಷರತ್ತಿನಲ್ಲಿ ಕೈಬಿಡಲಾಗಿದೆ.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಸತತ ಹೋರಾಟಕ್ಕೆ ಸ್ಪಂಧಿಸಿ ಬೇಡಿಕೆ ಈಡೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ (ಭಾವಿ ಸಿಎಂ) ಡಿ.ಕೆ.ಶಿವಕುಮಾರ್ ಅವರು ಈ ನಿಟ್ಟಿನಲ್ಲಿ ಸತತವಾಗಿ ಸ್ಪಂಧಿಸಿದ ಸಿಎಂ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರಿಗೆ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಅಭಿನಂದನೆ ಸಲ್ಲಿಸಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I