I ಜೂನ್ 21ರಂದು ಪದಗ್ರಹಣ ಹಾಗೂ ಸಂಕಲ್ಪ ಸಮಾವೇಶ I ಬೆಂಗಳೂರಿನ ಅರಮನೆ ಮೈದಾನದಲ್ಲಿ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ರವರಿಂದ ಅಧಿಕಾರ ಸ್ವೀಕಾರ I
ಶಿವಮೊಗ್ಗ : ಬಿ.ಕೆ. ಹರಿಪ್ರಸಾದ್ ಅವರನ್ನು ಪ್ರಸ್ತುತ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಹಿನ್ನೆಲೆಯಲ್ಲಿ, ತೆರವಾದ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬಿ.ಕೆ. ಹರಿಪ್ರಸಾದ್ ಅವರನ್ನು ಹೈಕಮಾಂಡ್ ಆಯ್ಕೆ ಮಾಡಲಾಗಿದೆ
ಇವರ ಅಧಿಕಾರ ಸ್ವೀಕಾರ ಸಮಾರಂಭದ
ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಹಾಗೂ’ಸಂಕಲ್ಪ ಸಮಾವೇಶ’ ಕಾರ್ಯಕ್ರಮವು ಜೂನ್ 21 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ನಡೆಯಲಿದ್ದು
ಸಮಾರಂಭಕ್ಕೆ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಭಾಗವಹಿಸಲು ಈಗಾಗಲೇ ರಾಜ್ಯದ ಎಲ್ಲಾ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಪತ್ರ ರವಾನಿಸಲಾಗಿದೆ, ಈ ಹಿನ್ನಲೆಯಲ್ಲಿ ಶಿವಮೊಗ್ಗದಲ್ಲಿ ಬಿ.ಕೆ ಹರಿಪ್ರಸಾದ್ ಅವರ ಪದಗ್ರಹಣ ಕಾರ್ಯಕ್ರಮಕ್ಕೆ ಭಾಗವಹಿಸಲು ಜಿಲ್ಲಾಧ್ಯಕ್ಷರು ಪೂರ್ವಭಾವಿ ಸಭೆ ಕರೆದು ಪಕ್ಷದ ಮುಖಂಡರಿಗೆ, ಕಾರ್ಯಕರ್ತರಿಗೆ ತಿಳಿದಿದ್ದಾರೆ