Saturday, 19 September 2026 Suryagagana — Edition

Suryagagana

My WordPress Blog

ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I
ಸೂರ್ಯಗಗನ

ಸಿಬಿಆರ್ ಕಾಲೇಜು: ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ I ಸಮಾಜಕ್ಕೆ ಸೌಹಾರ್ದತೆಯ ಸೇತುವೆ ಕಟ್ಟಬೇಕಿದೆ I ಹೈಕೋರ್ಟ್ ನ್ಯಾಯಮೂರ್ತಿ ವಿ.ಶ್ರೀಶಾನಂದ I

ಸಿಬಿಆರ್ ಕಾಲೇಜು: ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ I ಸಮಾಜಕ್ಕೆ ಸೌಹಾರ್ದತೆಯ ಸೇತುವೆ ಕಟ್ಟಬೇಕಿದೆ I ಹೈಕೋರ್ಟ್ ನ್ಯಾಯಮೂರ್ತಿ ವಿ.ಶ್ರೀಶಾನಂದ I ಶಿವಮೊಗ್ಗ: ಸಮಾಜದಲ್ಲಿ ಗೋಡೆಗಳನ್ನು ಕಟ್ಟುವ ಬದಲಿಗೆ, ವಿಭಜನೆಗಳಾಚೆಗೆ ಸೌಹಾರ್ದತೆಯ ಸೇತುವೆ ಕಟ್ಟಬೇಕಿದೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ವಿ.ಶ್ರೀಶಾನಂದ ಕರೆ…
ಸಿಬಿಆರ್ ಕಾಲೇಜು: ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ
I ಸಮಾಜಕ್ಕೆ ಸೌಹಾರ್ದತೆಯ ಸೇತುವೆ ಕಟ್ಟಬೇಕಿದೆ I ಹೈಕೋರ್ಟ್ ನ್ಯಾಯಮೂರ್ತಿ ವಿ.ಶ್ರೀಶಾನಂದ I
ಶಿವಮೊಗ್ಗ: ಸಮಾಜದಲ್ಲಿ ಗೋಡೆಗಳನ್ನು ಕಟ್ಟುವ ಬದಲಿಗೆ, ವಿಭಜನೆಗಳಾಚೆಗೆ ಸೌಹಾರ್ದತೆಯ ಸೇತುವೆ ಕಟ್ಟಬೇಕಿದೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ವಿ.ಶ್ರೀಶಾನಂದ ಕರೆ ನೀಡಿದರುನಗರದ ಸಿ.ಭೀಮಸೇನರಾವ್ ಕಾನೂನು ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಪದವಿ ಅಧ್ಯಯನ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಶನಿವಾರ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಿದ್ದ ಪದವಿ ಪ್ರಮಾಣಪತ್ರ ಪ್ರದಾನ ಕಾರ್ಯಕ್ರಮ ‘ನ್ಯಾಯದೀಕ್ಷಾ’ ಉದ್ಘಾಟಿಸಿ ಮಾತನಾಡಿದರು.
ಇಂದು ಭೌತಿಕ ಗೋಡೆಗಳಿಗಿಂತ, ಕಣ್ಣಿಗೆ ಕಾಣದ ಮಾನಸಿಕ ಮತ್ತು ಸಾಮಾಜಿಕ ಗೋಡೆಗಳು ಮನುಷ್ಯರನ್ನು ಹೆಚ್ಚು ದೂರ ಮಾಡುತ್ತಿವೆ. ಧರ್ಮ ಎಂಬ ಪದವನ್ನು ಯಾವುದೇ ಸೀಮಿತ ಅರ್ಥದಲ್ಲಿ ನೋಡಬಾರದು. ಧರ್ಮ ಎಂದರೆ ವಿಭಜನೆ ಅಲ್ಲ, ಎಲ್ಲರನ್ನೂ ಒಳಗೊಂಡ ಸಮಾಜ ನಿರ್ಮಾಣದ ಮೌಲ್ಯವಾಗಿ ಅರ್ಥೈಸಬೇಕು ಎಂದು ಹೇಳಿದರು. ವಕೀಲರಾಗಿ ಹೊರಹೊಮ್ಮುತ್ತಿರುವ ಯುವ ಸಮೂಹ ನಿಮ್ಮ ತಂದೆ ತಾಯಿಗಳ ಕನಸುಗಳನ್ನು ಸಾಕಾರ ಮಾಡುತ್ತಿದ್ದಿರ ಎನ್ನುವ ಜವಾಬ್ದಾರಿ ಇರಲಿ. ಬಡತನದಿಂದ ಉದರ ಪೋಷಣೆಯೊಂದೆ ಅನಿವಾರ್ಯವಿದ್ದ ಕಾಲದಲ್ಲಿ, ತಮಗೆ ಸಿಗದ ಅವಕಾಶವನ್ನು, ತಮ್ಮ ಮಕ್ಕಳ ಮೂಲಕ ಯಶಸ್ವಿಗೊಳಿಸುವ ಪೋಷಕರ ಆಶಯಕ್ಕೆ ಸದಾ ಬೆಂಬಲವಾಗಿರಿ. ಅವರನ್ನು ಗೌರವಿಸುವಂತಹ ಮೊದಲ ದೀಕ್ಷೆ ಪಡೆಯಿರಿ.
ಕಾನೂನಿನ ಪದವಿಯ ಜೊತೆಗೆ, ಸಮಾಜಮುಖಿಯಾಗಿ ಕಲಿತ ಜ್ಞಾನವನ್ನು ತಲುಪಿಸುವುದು ಕೂಡ ಒಂದು ದೊಡ್ಡ ಹೊಣೆಗಾರಿಕೆ. ಏನಾದರಾಗು, ಮೊದಲು ಮಾನವನಾಗು ಎಂಬುದು ಕಾನೂನು ದೀಕ್ಷೆಯ ಮೊದಲ ಪಾಠವಾಗಬೇಕು.  ಮಣ್ಣಿನಲ್ಲಿರುವ ಚಿನ್ನದ ನಿಕ್ಷೇಪ ಆಭರಣದ ರೂಪ ಪಡೆಯಲು ಸಾಕಷ್ಟು ಸಂಸ್ಕರಣಾ ಪಕ್ರಿಯೆಬೇಕು. ವಿದ್ಯಾರ್ಥಿಗಳು ಕೂಡ ಮಣ್ಣಿನಲ್ಲಿರುವ ಚಿನ್ನವಿದ್ದಂತೆ. ಅವರನ್ನು ಸಂಸ್ಕರಿಸಿ, ಪುಟವಿಟ್ಟ ಚಿನ್ನದಂತೆ ಪದವಿಧರರಾಗಿ ರೂಪಿಸಿದ ಶ್ರೇಯಸ್ಸು ವಿದ್ಯಾಸಂಸ್ಥೆಯದಾಗಿದೆ. ಇದೀಗ ಯಾವ ಆಭರಣಕಾರನ ಕೈಯಲ್ಲಿ ಸಿಕ್ಕಿ, ಜೀವನಾನುಭವದ ಹೆಚ್ಚು ಪೆಟ್ಟು ತಿನ್ನುತ್ತಿರ, ಆಗ ಹೆಚ್ಚು ಹೊಳೆಯಲು ಪ್ರಾರಂಭಿಸುತ್ತಿರಿ ಎಂಬ ವಾಸ್ತವತೆಯ ಪ್ರಜ್ಞೆ ಬೆಳೆಸಿಕೊಳ್ಳಿ. ಅದುವೆ ದೀಕ್ಷೆಯ ಮತ್ತೊಂದು ಹಂತ ಎಂದು ಹೇಳಿದರು.
ವಿವಿಧ ಪವಿತ್ರ ಗ್ರಂಥಗಳು ನಮ್ಮ ಮನೆಯ ದೇವರ ಮನೆಯಲ್ಲಿರಲಿ, ಅದರೇ ಮನೆಯ ಹೊಸಲು ದಾಟಿದ ಕೂಡಲೆ ಎಲ್ಲರನ್ನೂ ಒಟ್ಟುಗೂಡಿಸುವ ಪವಿತ್ರ ಗ್ರಂಥವಾಗುವುದು ಭಾರತದ ಸಂವಿಧಾನ ಮಾತ್ರ. ಸಮಾಜದ ಪ್ರತಿಯೊಬ್ಬ ಪ್ರಜೆಯು ಭಾರತದ ಸಂವಿಧಾನವನ್ನು ಒಪ್ಪಿಕೊಂಡಿದ್ದೇವೆ. ಅದು ನಮ್ಮೆಲ್ಲರನ್ನು ಭದ್ರಪಡಿಸಿದೆ‌. ಎಲ್ಲರೂ ಸಂವಿಧಾನವನ್ನು ಎತ್ತಿ ಹಿಡಿಯುವ, ಅದರ ಅಡಿಯಲ್ಲಿ ರೂಪಿತವಾದ ಕಾನೂನಿನ ಮೂಲಕ ಜವಾಬ್ದಾರಿಯುತವಾಗಿ ಸಾಗುವ ಪ್ರಜ್ಞೆ ಬೇಕು.
ರಾಜ ವಿಕ್ರಮಾದಿತ್ಯನ ಆಳ್ವಿಕೆಯಲ್ಲಿ ಪ್ರಜೆಗಳಿಗೆ ತ್ವರಿತ ಮತ್ತು ನಿಷ್ಪಕ್ಷಪಾತ ನ್ಯಾಯವನ್ನು ಒದಗಿಸಲು ನ್ಯಾಯದ ಗಂಟೆಯ ವ್ಯವಸ್ಥೆ ಇತ್ತು. ಕಾಲ ಬದಲಾದಂತೆ ಹಣಕಾಸು, ಆಧುನಿಕತೆ ಹಾಗೂ ವಿವಿಧ ಸಾಮಾಜಿಕ ಬದಲಾವಣೆಗಳ ಪರಿಣಾಮವಾಗಿ, ಮೌಲ್ಯಾಧಾರಿತ ನ್ಯಾಯ ವ್ಯವಸ್ಥೆಯ ಬಗ್ಗೆ ಜನರ ದೃಷ್ಟಿಕೋನ ಬದಲಾಗುತ್ತಿರುವುದು ಕಳವಳಕಾರಿಯಾಗಿದೆ.
ಸಮಾಜದಲ್ಲಿ ಈಗಾಗಲೇ ಅನೇಕರು ತಿಪ್ಪೆ ಹಾಕಿದ್ದಾರೆ. ಸಾಧ್ಯವಾದರೆ ತಿಪ್ಪೆಯನ್ನು ಶುದ್ದಿಕರಿಸಲು ಪ್ರಯತ್ನಿಸಿ, ಮತ್ತಷ್ಟು ನಿಮ್ಮ ಮನೆಯ ಕಸವನ್ನು ಹಾಕಬೇಡಿ. ಹಾಗಾಗಿಯೇ ಎಲ್.ಎಲ್.ಬಿ ಎಂಬ ಪದವಿ ಹಿಡಿದು, ಸಮಾಜದ ಶಿಕ್ಷಕರಾಗುವ ಮೂಲಕ, ಬಡವರಿಗೆ, ದೀನ ದಲಿತರಿಗೆ ಮೇಲೆತ್ತುವ ಸೇನಾನಿಗಳು ನೀವಾಗಿ. ಕಲಿತ ಪ್ರತಿ ಅಕ್ಷರವನ್ನು ದೀಕ್ಷಾ ಪೂರ್ವಕವಾಗಿ ಮುನ್ನಡೆಸುವ ದೂರದೃಷ್ಟಿ ಪಡೆಯಿರಿ ಎಂದು ಕಿವಿಮಾತು ಹೇಳಿದರು.
ಪಂಚೆ ಉಡುವ ನ್ಯಾಕ್ ಕಲಿಯಿರಿ
ಪುರುಷರು ಪಂಚೆ ಉಡುವ ನ್ಯಾಕ್ ಕಲಿತುಕೊಳ್ಳಿ. ನಾನು ಎಷ್ಟು ಹೊತ್ತಾದರು ಪಂಚೆಯಲ್ಲಿ ಇರಬಲ್ಲೆ, ಫುಟ್ ಬಾಲ್ ಕೂಡ ಆಡಬಲ್ಲೆ ಎಂದು ನ್ಯಾಯಮೂರ್ತಿಗಳು ನಗೆ ಚಟಾಕಿ ಹಾರಿಸಿದರು.
ಗೌನ್ ಬದಲು ಶಲ್ಯ: ಸಂಸ್ಕೃತಿಯ ನ್ಯಾಯಧೀಕ್ಷೆ
ಸಾಮಾನ್ಯವಾಗಿ ಪದವಿ ಪ್ರಮಾಣಪತ್ರ ಪ್ರದಾನ ಸಮಾರಂಭದಲ್ಲಿದ್ದ ಗೌನ್ ಸಂಸ್ಕೃತಿಗೆ ತೆರೆ ಎಳೆದ ವಿದ್ಯಾರ್ಥಿಗಳು, ಶಲ್ಯದೊಂದಿಗೆ ನ್ಯಾಯದೀಕ್ಷೆ ಪಡೆದು ಸಂಭ್ರಮಿಸಿದರು. ಅತಿಥಿಗಳಾಗಿ ಭಾಗವಹಿಸಿದ್ದ ನ್ಯಾಯಮೂರ್ತಿಗಳು ಸೇರಿದಂತೆ ಎನ್ಇಎಸ್ ಆಡಳಿತ ಮಂಡಳಿ ಸದಸ್ಯರು ಶರ್ಟು, ಪಂಚೆ, ಮೈಸೂರು ಪೇಟ ಹಾಗೂ ವಿಶೇಷ ಶಲ್ಯದಲ್ಲಿ ಮಿಂಚಿದರು. ಜೊತೆಯಲ್ಲಿ ಶಾಸ್ತ್ರೀಯ ಸಂಗೀತದ ಹಿನ್ನೆಲೆ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ನೀಡಿತ್ತು.
ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್ ಮಾತನಾಡಿ, ನಮ್ಮ ವಿದ್ಯಾಸಂಸ್ಥೆಯ ಅನೇಕರು ನ್ಯಾಯಾಧೀಶರಾಗಿ ಕಾನೂನು ಕ್ಷೇತ್ರದ ಅನೇಕ ಉನ್ನತ ಹುದ್ದೆಗಳಲ್ಲಿ ಅಲಂಕರಿಸಿದ್ದಾರೆ. ವಕೀಲರಾಗುವ ನೀವು ವೃತ್ತಿ ಜೀವನದಲ್ಲಿ ಕುಟುಂಬ ವ್ಯವಸ್ಥೆಗೆ ಹೆಚ್ಚು ಆದ್ಯತೆ ನೀಡಿ. ವಿದ್ಯೆ ಮನುಷ್ಯನಿಗೆ ಆಕಾರ ನೀಡಬೇಕು ವಿನಃ ಅಹಂಕಾರ ನೀಡಬಾರದು. ಸುಶಿಕ್ಷಿತರಾಗುವ ಜೊತೆಗೆ ಸುಸಂಸ್ಕೃತರಾಗಿ ಎಂದು ಹೇಳಿದರು.
ಎನ್ಇಎಸ್ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿದರು. ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ.ಎ.ಅನಲಾ ಅಧ್ಯಕ್ಷತೆ ವಹಿಸಿದ್ದರು.
Gara Srinivas

Gara Srinivas

Leave a comment

error: Content is protected !!