Sunday, August 2, 2026
Homeಸೂರ್ಯಗಗನI ವಾದಿರಾಜ್ -ಕಣ್ಣಪ್ಪ, ಶ್ರೀಕಾಂತ್ ಭಟ್ ಅವರಿಗೆ I ಕೆಯುಡಬ್ಲೂಜೆ ರಾಜ್ಯಮಟ್ಟದ ದತ್ತಿ ಪ್ರಶಸ್ತಿ I

I ವಾದಿರಾಜ್ -ಕಣ್ಣಪ್ಪ, ಶ್ರೀಕಾಂತ್ ಭಟ್ ಅವರಿಗೆ I ಕೆಯುಡಬ್ಲೂಜೆ ರಾಜ್ಯಮಟ್ಟದ ದತ್ತಿ ಪ್ರಶಸ್ತಿ I

I ವಾದಿರಾಜ್ -ಕಣ್ಣಪ್ಪ, ಶ್ರೀಕಾಂತ್ ಭಟ್ ಅವರಿಗೆ I ಕೆಯುಡಬ್ಲೂಜೆ ರಾಜ್ಯಮಟ್ಟದ ದತ್ತಿ ಪ್ರಶಸ್ತಿ I

ಶಿವಮೊಗ್ಗ ಜಿಲ್ಲೆಯ ಹಿರಿಯ ಪತ್ರಕರ್ತರಾದ ಜಿ. ವಾದಿರಾಜ ಕಮರೂರು, ಪತ್ರಿಕೋದ್ಯಮಿ ಕಣ್ಣಪ್ಪ ಭದ್ರಾವತಿ ಅವರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2025 ನೇ ಸಾಲಿನ ರಾಜ್ಯಮಟ್ಟದ ವಾರ್ಷಿಕ ದತ್ತಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

2025 ನೇ ಸಾಲಿನ “ಶ್ರೀ.ಎಂ ನಾಗೇಂದ್ರರಾವ್ ದತ್ತಿ ಪ್ರಶಸ್ತಿ” ಗೆ ಹಿರಿಯ ಪತ್ರಿಕೋದ್ಯಮಿ ಭದ್ರಾವತಿಯ ಕಣ್ಣಪ್ಪ ಮತ್ತು “ಎಸ್ ಹೆಚ್ ರಂಗಸ್ವಾಮಿ ದತ್ತಿ ಪ್ರಶಸ್ತಿ” ಗೆ ಹೊಸದಿಗಂತ ಶಿವಮೊಗ್ಗ ಆವೃತ್ತಿಯ ಸ್ಥಾನಿಕ ಸಂಪಾದಕರಾದ ಜಿ.ವಾದಿರಾಜ್ ಕಮರೂರು ಅವರನ್ನು ಆಯ್ಕೆ ಮಾಡಲಾಗಿದೆ.

“ಮಿಂಚು ಶ್ರೀನಿವಾಸ್ ದತ್ತಿ ಪ್ರಶಸ್ತಿಗೆ” ವಿಜಯವಾಣಿ ಪತ್ರಿಕೆಯ ಬೆಂಗಳೂರು ಮುಖ್ಯವರದಿಗಾರ ಶಿವಮೊಗ್ಗ ಮೂಲದ ಶ್ರೀಕಾಂತ್ ಭಟ್ ಅವರನ್ನು ಆಯ್ಕೆ ಮಾಡಲಾಗಿದೆ.

ಶಿವಮೊಗ್ಗ ಜಿಲ್ಲೆಯ ಖ್ಯಾತ ಪತ್ರಕರ್ತರೂ, ಏಚ್ಚರಿಕೆ ಕನ್ನಡ ದಿನಪತ್ರಿಕೆ ಸ್ಥಾಪಕರೂ ಅಗಿದ್ದ ದಿವಂಗತ ಎಂ ನಾಗೇಂದ್ರ ರಾವ್, ನಾವಿಕ ಕನ್ನಡ ದಿನಪತ್ರಿಕೆಯ ಸಂಸ್ಥಾಪಕರಾದ ದಿವಂಗತ ಎಸ್ ಹೆಚ್ ರಂಗಸ್ವಾಮಿ ಹಾಗೂ ಖ್ಯಾತ ಹಿರಿಯಪತ್ರಕರ್ತರಾದ ಮಿಂಚು ಶ್ರೀನಿವಾಸ್ ಅವರ ಸ್ಮರಣಾರ್ಥ ಅವರ ಹೆಸರಿನಲ್ಲಿ ಪ್ರತಿ ವರ್ಷ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ರಾಜ್ಯಮಟ್ಟದ ದತ್ತಿ ಪ್ರಶಸ್ತಿಯನ್ನು ನೀಡುತ್ತಾ ಬಂದಿದೆ.

ಜಿ. ವಾದಿರಾಜ್ ಕಮರೂರು: ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಶಿಕ್ಷಣದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಶಿವಮೊಗ್ಗ ಜಿಲ್ಲೆಯ ಖ್ಯಾತ ನಾವಿಕ ಕನ್ನಡ ದಿನಪತ್ರಿಕೆಯ ವರದಿಗಾರರಾಗಿ ಪತ್ರಿಕಾ ಕ್ಷೇತ್ರಕ್ಕೆ ಪಾದಾರ್ಪಣೆ. ಕಳೆದ ೧೭ ವರ್ಷಗಳಿಂದ ಹೊಸದಿಗಂತ ಕನ್ನಡ ದಿನಪತ್ರಿಕೆಯ ವರದಿಗಾರರಾಗಿ, ಉಪಸಂಪಾದಕರಾಗಿ, ಶಿವಮೊಗ್ಗ ಆವೃತ್ತಿಯ ಸ್ಥಾನಿಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕಾ ಕ್ಷೇತ್ರದಲ್ಲಿ ಅವರ ಸೇವೆ ಮತ್ತು ವೃತ್ತಿಪರತೆಯನ್ನು ಗುರುತಿಸಿ ಎಸ್ ಎಚ್ ರಂಗಸ್ವಾಮಿ ದತ್ತಿಪ್ರಶಸ್ತಿ ಗೆ ಆಯ್ಕೆ ಮಾಡಲಾಗಿದೆ.

ಶ್ರೀಕಾಂತ್ ಭಟ್: ಶಿವಮೊಗ್ಗ ಜಿಲ್ಲೆಯಿಂದ ಪತ್ರಕರ್ತ ವೃತ್ತಿಯನ್ನು ಆರಂಭಿಸಿದ ಶ್ರೀಕಾಂತ್ ಭಟ್ ರಾಜ್ಯಮಟ್ಟದಲ್ಲಿ ಗಮನಸೆಳೆದ ಕ್ರಿಯಾಶೀಲ ಪತ್ರಕರ್ತ, ಜಿಲ್ಲೆಯ ಹಲವಾರುದಿನಪತ್ರಿಕೆಗಳಲ್ಲಿ ವರದಿಗಾರರಾಗಿ ಕಾರ್ಯನಿರ್ವಹಿಸಿದ್ದು, ಬೆಂಗಳೂರಿನಲ್ಲಿ ಕನ್ನಡ ಪ್ರಭ ಸೇರಿದಂತೆ ಅನೇಕ ರಾಜ್ಯಮಟ್ಟದ ಪತ್ರಿಕೆಗಳಲ್ಲಿ ವೃತ್ತಿಕೌಶಲ್ಯ ತೋರಿದ್ದಾರೆ. ಪ್ರಸ್ತುತ ವಿಜಯವಾಣಿ ಪತ್ರಿಕೆಯಲ್ಲಿ ರಾಜಕೀಯ ವಿಭಾಗದ ಮುಖ್ಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ವೃತ್ತಿಬದ್ದತೆ ಮತ್ತು ಸೇವೆಯನ್ನು ಪರಿಗಣಿಸಿ ಮಿಂಚು ಶ್ರೀನಿವಾಸ್ ದತ್ತಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಕಣ್ಣಪ್ಪ: ಜಿಲ್ಲೆಯ ಕಂಠೀರವ ಕನ್ನಡ ದಿನಪತ್ರಿಕೆಯ ವರದಿಗಾರರಾಗಿ ವೃತ್ತಿ ಆರಂಭಿಸಿದ್ದು, ಕಳೆದ ೩೫ ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಪ್ರಸ್ತುತ ಉಷಾಮಹಿ ಕನ್ನಡ ದಿನಪತ್ರಿಕೆ ಯ ಸುದ್ದಿ ಸಂಪಾದಕರೂ ಆಗಿದ್ದಾರೆ. ಪತ್ರಿಕಾ ಸಂಘಟನೆಗಳಲ್ಲೂ ಸಕ್ರೀಯವಾಗಿ ತೊಡಗಿಸಿಕೊಂಡಿರುವ ಇವರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಭದ್ರಾವತಿ ಪ್ರೆಸ್ ಟ್ರಸ್ಟ್ ನ ನಾಯಕತ್ವ ವಹಿಸಿಕೊಂಡು ಪತ್ರಕರ್ತರ ಕ್ಷೇಮಾಭಿವೃದ್ದಿಗೆ ದುಡಿಯುತ್ತಾ ಬಂದಿದ್ದಾರೆ. ಸಾಮಾಜಿಕ ಸಂಘಟನೆಗಳಲ್ಲೂ ಇವರ ಸೇವೆ ಅನನ್ಯವಾದುದ್ದು, ಪತ್ರಿಕೋದ್ಯಮದಲ್ಲಿ ಇವರ ಸೇವೆಯನ್ನು ಗುರುತಿಸಿ ಎಂ .ನಾಗೇಂದ್ರ ರಾವ್ ದತ್ತಿ ಪ್ರಶಸ್ತಿಗೆ ಇವರನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಯು ನಗದು ಮತ್ತು ಪ್ರಶಸ್ತಿಫಲಕ ಹೊಂದಿದೆ. ಜುಲೈ 25ರಂದು ಚಿಕ್ಕಮಗಳೂರಿನ ಕುವೆಂಪು ಕಲಾಮಂದಿರದಲ್ಲಿ ನಡೆಯಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಮಾರಂಭದಲ್ಲಿ ಇಂಧನ ಸಚಿವ ಕೆ ಜೆ ಜಾರ್ಜ್ ಅವರು ದತ್ತಿಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷರಾದ ಶಿವಾನಂದ ತಗಡೂರು, ಪ್ರಧಾನಕಾರ್ಯದರ್ಶಿ ಜಿ.ಸಿ ಲೋಕೇಶ್ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I