I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I
ಶಿಕಾರಿಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಿವಮೊಗ್ಗ ತಾಲೂಕು ಆಡಳಿತ, ಪುರಸಭೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಶಿಕಾರಿಪುರ ಇವರುಗಳ ಸಂಯುಕ್ತ ಆಶ್ರಯದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆಡಿಟೋರಿಯಂನಲ್ಲಿ ಸಮಗ್ರ ಮತದಾರರ ಪಟ್ಟಿಯ ಪರಿಷ್ಕರಣೆ 2026 ಕಾರ್ಯದ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರಮವನ್ನು ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಮತದಾರ ನೋಂದಣಾಧಿಕಾರಿಗಳಾದ ಶ್ರೀ ರಂಗಸ್ವಾಮಿ ಅವರು ಉದ್ಘಾಟಿಸಿದರು. ಅವರು ಮಾತನಾಡುತ್ತಾ ಪ್ರಜಾಪ್ರಭುತ್ವದಲ್ಲಿ ಮತದಾನಕ್ಕೆ ವಿಶೇಷವಾದ ಮಹತ್ವವಿದೆ. ಮತದಾರರ ಪಟ್ಟಿಯ ಶುದ್ದಿ ಮಾಡುವ ನಿಟ್ಟಿನಲ್ಲಿ ಎಸ್,ಐ,ಆರ್ (S I R) ಕಾರ್ಯಕ್ರಮ ನಡೆಯುತ್ತಿದ್ದು ಯುವ ಸಮುದಾಯ ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಕರೆ ನೀಡಿದರು . ಎಲ್ಲಾ ವಿದ್ಯಾರ್ಥಿಗಳು ತಮ್ಮ ಹಾಗೂ ತಮ್ಮ ಕುಟುಂಬದ, ಬಂಧು ಬಳಗದ ನಮೂನೆಗಳನ್ನು ಭರ್ತಿ ಮಾಡಿ ಸಂಬಂಧಿಸಿದ ಬಿ ಎಲ್ ಓ ಗಳಿಗೆ ನೀಡಲು ಸಹಕರಿಸುವಂತೆ ಮನವಿ ಮಾಡಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ರಾಜ್ಯಮಟ್ಟದ ಸ್ವೀಪ್ ತರಭೇತುದಾರರಾದ ನವೀದ್ ಅಹ್ಮದ್ ಪರ್ವೇಶ್ ರವರು ಮಾತನಾಡುತ್ತಾ ಎಸ್ಐಆರ್ ಪ್ರಕ್ರಿಯೆಯು ದಿನಾಂಕ 29-07-2026 ರಿಂದ ಆಗಸ್ಟ್ 8 ರವರೆಗೆ ಜರುಗಲಿದ್ದು ಇದರ ಸದುಪಯೋಗ ಪಡೆದುಕೊಳ್ಳುವಂತೆ ಹಾಗೂ ಗಣತಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪುರಸಭೆಯ ಮುಖ್ಯಾಧಿಕಾರಿ ಭರತ್, ಪರಿಸರ ಅಭಿಯಂತರ ರಾಜಕುಮಾರ್, ಗ್ರೇಡ್ 2 ತಹಶಿಲ್ದಾರ್ ರವಿಕುಮಾರ್ , ಇಂದೂಧರ್ ಸೇರಿದಂತೆ ಕಾಲೇಜಿನ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ರುದ್ರೇಶ್ ರವರು ಹಾಗೂ ನಾರಾಯಣ್ ರವರು ವಂದಾನಾರ್ಪಣೆಯನ್ನು ನಡೆಸಿಕೊಟ್ಟರು.


