I ಕರವೇ ಕಾವಲುಪಡೆಯ ರಾಮಣ್ಣ ರಾಗಿಗುಡ್ಡ ನೇತೃತ್ವದಲ್ಲಿ ಸಂಭ್ರಮದ ದಿನಾಚರಣೆ I ಅಂಗವಿಕಲ, ವಿಕಲಚೇತನರಿಗೆ ವಿಶೇಷ ಉಚಿತ ಕಿಟ್ ವಿತರಣೆ I
ಶಿವಮೊಗ್ಗ : ಕರ್ನಾಟಕ ರಕ್ಷಣಾ ವೇದಿಕೆ ಕಾವಲು ಕಡೆ ವತಿಯಿಂದ ರಾಮಣ್ಣ ರಾಗಿಗುಡ್ಡ ಅವರ ನೇತೃತ್ವದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ರಾಗಿ ಗುಡ್ಡದಲ್ಲಿ ಹಮ್ಮಿಕೊಳ್ಳಲಾಯತು.
ಈ ಕಾರ್ಯಕ್ರಮಕ್ಕೆ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮಿಗಳು ಹಿರೇಮಠ ಬಿಳಕಿ ಇವರು ಆಗಮಿಸಿದ್ದರು ಈ ಕಾರ್ಯಕ್ರಮವನ್ನು ಉದ್ದೇಶಿಸಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುವ ಬಗ್ಗೆ ಹಿತನುಡಿಗಳನ್ನು ಹೇಳಿದರು. ಹಾಗೂ ಧ್ವಜಾರೋಹಣ ಖ್ಯಾತ ಉದ್ಯಮಿಗಳು ಆದಂತಹ ಜ್ಯೋತಿಪ್ರಕಾಶ್ ಅವರು ನೆರವೇರಿಸಿದರು.
ಈ ಕಾರ್ಯಕ್ರಮದಲ್ಲಿ ವಿಶೇಷವಾಗಿ ಅಂಗವಿಕಲ ಮತ್ತು ವಿಕಲಚೇತನರಿಗೆ ವಿಶೇಷವಾದ ಕಿಟ್ ಕೊಡುವುದರ ಮುಖಾಂತರ ಅವರಿಗೆ ಸನ್ಮಾನಿಸಲಾಯಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ವಕೀಲರಾದಂತಹ ಅನಿಲ್ ಕುಮಾರ್ ಮತ್ತು ಸಾಹಿತಿಗಳು ಪತ್ರಕರ್ತರು ಗಾರಾ, ಶ್ರೀನಿವಾಸ್,ಚಲನಚಿತ್ರ ನಟ ರಘು ಮಲ್ನಾಡ್, ಕರವೇ ಕಾವಲು ಪಡೆಯ ಜಿಲ್ಲಾಧ್ಯಕ್ಷರಾದ ಶಿವಕುಮಾರ್ ಎಸ್, ಬಿ,ಪ್ರಧಾನ ಕಾರ್ಯದರ್ಶಿಯಾದ ಕೆಬಿ ಉಮೇಶ್, ಉಪಾಧ್ಯಕ್ಷರಾದ ರಮೇಶಣ್ಣ ಮಲ್ಲಿಗೆನಹಳ್ಳಿ,ಪತ್ರಿಕಾ ಸಂಚಾಲಕರಾದ ಎನ್, ಮಾಲತೇಶ್, ರಾಮು, ಕರವೇ ಮಹಿಳಾ ಘಟಕದ ಅಧ್ಯಕ್ಷರಾದ ಶಾರದಾ ಶ್ರೀಧರ್ಮೂರ್ತಿ, ಉಪಾಧ್ಯಕ್ಷರಾದ ಅನ್ನಪೂರ್ಣ ಕೃಷ್ಣವೇಣಿ ಹಾಗೂ ಕರವೇ ಕಾವಲುಪಡೆಯ ಹೊಸದುರ್ಗ ಅಧ್ಯಕ್ಷರಾದ ವೀಣಾ ಮತ್ತು ಅವರ ಪದಾಧಿಕಾರಿಗಳು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಚರಣೆ ಮಾಡಲಾಯಿತು.