Tuesday, September 15, 2026
Homeಸೂರ್ಯಗಗನI ತಿಲಕ್ ನಗರದ ಹೊಟೇಲ್‌ ಹಾಗೂ ಜ್ಯೂಸ್ ಸೆಂಟರ್ ಮೇಲೆ I ದಿಢೀರ್ ಮೈತ್ರಿ ದಾಳಿ...

I ತಿಲಕ್ ನಗರದ ಹೊಟೇಲ್‌ ಹಾಗೂ ಜ್ಯೂಸ್ ಸೆಂಟರ್ ಮೇಲೆ I ದಿಢೀರ್ ಮೈತ್ರಿ ದಾಳಿ I

  •  I ತಿಲಕ್ ನಗರದ ಹೊಟೇಲ್‌ ಹಾಗೂ ಜ್ಯೂಸ್ ಸೆಂಟರ್ ಮೇಲೆ I ದಿಢೀರ್ ಮೈತ್ರಿ ದಾಳಿ I

ಶಿವಮೊಗ್ಗ  : ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗ ತಿಲಕ್‌ನಗರದಲ್ಲಿರುವ ಹೊಟೇಲ್‌ಗಳು ಹಾಗೂ ಜ್ಯೂಸ್ ಸೆಂಟರ್ ಮೇಲೆ ಶಿವಮೊಗ್ಗ ಉಪವಿಭಾಗಾಧಿಕಾರಿ ಡಾ. ಮೈತ್ರಿ ಅವರು ಕಂದಾಯ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿ-ಸಿಬ್ಬಂಧಿಗಳೊಂದಿಗೆ ದಿಢೀರ್‌ದಾಳಿ ನಡೆಸಿ, ಹೊಟೇಲ್‌ಗಳ ಶುಚಿತ್ವ, ಆಹಾರದ ಗುಣಮಟ್ಟದ ಕುರಿತು ಪರಿಶೀಲನೆ ನಡೆಸಿದರು.

ಪರಿಶೀಲನೆ ಸಂದರ್ಭದಲ್ಲಿ ಸ್ವಚ್ಚತೆ ಕಾಪಾಡಿಕೊಳ್ಳದಿರುವ ಮಾಂಸಹಾರಿ ಹೊಟೇಲ್‌ಗಳ ಮಾಲೀಕರಿಗೆ ಸ್ವಚ್ಚತೆ ಕಾಪಾಡಿಕೊಳ್ಳುವಂತೆ ಸೂಚಿಸಿದ ಅವರು, ಸ್ವಚ್ಚತೆ ಕಾಪಾಡಿಕೊಳ್ಳದಿದ್ದಲ್ಲಿ ಶುದ್ಧ ನೀರು ಬಳಸಿ ಆಹಾರ ತಯಾರಿಸದಿದ್ದಲ್ಲಿ ಹಾಗೂ ಗ್ರಾಹಕರಿಗೆ ಶುದ್ಧ ಕುಡಿಯುವ ನೀರು ಪೂರೈಸದಿದ್ದಲ್ಲಿ ಹೊಟೇಲ್‌ಗಳ ಪರವಾನಿಗೆ ರದ್ದುಗೊಳಿಸುವುದಾಗಿ ಎಚ್ಚರಿಸಿದ ಅವರು, ಹೊಟೇಲ್‌ಗಳಲ್ಲಿದ್ದ ಆಹಾರದ ಮಾದರಿಗಳನ್ನು ತೆಗೆದುಕೊಂಡು ಪರೀಕ್ಷೆಗಾಗಿ ಕಳುಹಿಸಿಕೊಡಲಾಗುವುದು ಎಂದರು.

ಆಹಾರ ತಯಾರಿಕೆಯಲ್ಲಿ ಬಣ್ಣ, ಮತ್ತಿತರ ಕ್ಯಾನ್ಸರ್‌ಕಾರಕ ರಸಾಯನಿಕಗಳ ಬಳಕೆ ಕಂಡುಬಂದಲ್ಲಿ ಹೊಟೇಲ್‌ಗಳ ಪರವಾನಿಗೆ ರದ್ದುಗೊಳಿಸಲಾಗುವುದಲ್ಲದೆ ನಿಯಾಮಾನುಸಾರ ಕಾನೂನು ಕ್ರಮಕ್ಕೆ ಶಿಫಾರಸ್ಸು ಮಾಡುವುದು ಅನಿವಾರ್ಯವಾಗಲಿದೆ ಎಂದ ಅವರು, ಅಶುಚಿಯಾಗಿರುವ ಹೊಟೇಲ್‌ಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಮುಂದಿನ ದಿನಗಳಲ್ಲಿ ಶುಚಿತ್ವ ಕಾಪಾಡಿಕೊಳ್ಳದಿರುವುದು ಕಂಡುಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಲಾಗುವುದಲ್ಲದೆ ಜಿಲ್ಲಾಧಿಕಾರಿಗಳಿಗೆ ಹಾಗೂ ಸಕ್ಷಮ ಪ್ರಾಧಿಕಾರಿಗಳಿಗೆ ವರದಿ ನೀಡಿ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸುವುದಾಗಿ ತಿಳಿಸಿದರು.


ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ|| ಚಂದ್ರಶೇಖರ್‌, ತಹಶೀಲ್ದಾರ್‌ರಾಜೀವ್‌, ಕಂದಾಯಾಧಿಕಾರಿ ಸತೀಶ್‌, ಕಂದಾಯ ನಿರೀಕ್ಷಕ ಹೊತ್ತಾರೆ ಶಿವಕುಮಾರ್‌, ದೀಪಕ್‌ಬಿ., ವಿನಾಯಕಸ್ವಾಮಿ ಜಿ.ಎಂ., ನಿಂಗರಾಜಪ್ಪ, ಮೋಹನ್‌ಕುಮಾರ್‌ಮತ್ತಿತರರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news