Sunday, August 2, 2026
Homeಸೂರ್ಯಗಗನI ವನ್ನಿಯರ್‌ ಸಮಾಜದಿಂದ I ಪ್ರತಿಭಾ ಪುರಸ್ಕಾರ I

I ವನ್ನಿಯರ್‌ ಸಮಾಜದಿಂದ I ಪ್ರತಿಭಾ ಪುರಸ್ಕಾರ I

I ವನ್ನಿಯರ್‌ ಸಮಾಜದಿಂದ I ಪ್ರತಿಭಾ ಪುರಸ್ಕಾರ I

ಶಿವಮೊಗ್ಗ: ಕರ್ನಾಟಕ ಸ್ಟೇಟ್‌ ವನ್ನಿಯರ್‌ ಎಜುಕೇಷನಲ್‌ ಅಂಡ್‌ ಚಾರಿಟೇಬಲ್‌ ಟ್ರಸ್ಟ್‌ ವತಿಯಿಂದ  ವನ್ನಿಯರ್‌ ಗೌಂಡರ್‌ ಸಮುದಾಯದ  ಎಸ್.ಎಸ್ಎಲ್‌ ಸಿ ಮತ್ತು  ಪಿಯುಸಿಯಲ್ಲಿ ಅತಿಹೆಚ್ಚು ಅಂಕ ಪಡೆದ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಆಯೋಜಿಸಲಾಗಿತ್ತು. ನಗರದ ಸುವರ್ಣ ಸಂಸ್ಕೃತಿ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ಪೆಸೆಟ್‌ ಕಾಲೇಜು ಆಡಳಿತಾಧಿಕಾರಿ ಡಾ.ನಾಗರಾಜ್‌ ಅವರು ಉದ್ಘಾಟಿಸಿ, ಮಕ್ಕಳು ಶಿಸ್ತಿನ ಗುಣ ಬೆಳೆಸಿಕೊಂಡು ಮುನ್ನಡೆಯಬೇಕೆಂದು ಸಲಹೆ ನೀಡಿದರು.
ಸಭೆಯ ಅಧ್ಯಕ್ಷತೆಯನ್ನು ಟ್ರಸ್ಟ್‌ ಅಧ್ಯಕ್ಷರಾದ ಜಿ.ವಿ.ಗಣೇಶಪ್ಪ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಮಣಿಶೇಖರ್‌ ಆಗಮಿಸಿದ್ದರು. ವೇದಿಕೆಯಲ್ಲಿ ಕರುನಾಡು ರಾಜ್ಯ ವನ್ನಿಯರ್‌ ಮಹಾಸಭಾದ  ಅಧ್ಯಕ್ಷ ರೊಟ್ಟಿ ಸುಬ್ಬಣ್ಣ, ವನ್ನಿಯರ್‌ ಮಹಾ ಸಭಾ ಮಹಿಳಾ ಅಯಕ್ಷೆ ರಮಣಿ ಅವರು ಉಪಸ್ಥಿತರಿದ್ದರು.

ಸಮಾಜದ 160 ಪ್ರತಿಭಾವಂತ ಮಕ್ಕಳಿಗೆ ಪುರಸ್ಕಾರ ನೀಡಲಾಯಿತು. ಸಂಸದ ಬಿ.ವೈ.ರಾಘವೇಂದ್ರ ಅವರು ತಮ್ಮ ತಾಯಿ ದಿ.ಮೈತ್ರಾದೇವಿ ಅವರ ಸ್ಮರಣಾರ್ಥ ಎಲ್ಲ ಪ್ರತಿಭಾವಂತ ಮಕ್ಕಳಿಗೂ ಧನಸಹಾಯ ನೀಡಿದರು. ಬೇಲೂರು ರವಿ , ಮಣಿ ಶೇಖರ್‌ ಅವರು ಸಮಾಜದ ಕುರಿತು ಮಾತನಾಡಿದರು. ವಿ.ಮುರುಗೇಶ್‌, ಚಕ್ರವರ್ತಿ ಕಾರ್ಯಕ್ರಮ ನಡೆಸಿಕೊಟ್ಟರು. ಜೆ.ಮುರುಗನ್‌, ಎಸ್.ಮನೋಹರ್‌,ಗಿರೀಶ್‌ ಕುಮಾರ್‌, ಜಿ.ಪ್ರಕಾಶ್‌, ಎಸ್.ರವಿಕುಮಾರ್‌, ಕಣ್ಣಪ್ಪ, ವಿಜಯಣ್ಣ,ನಾಗರಾಜ್‌, ಕುಮಾರ್‌, ಸುಮಂಗಲ, ರಂಗಸ್ವಾಮಿ ಮತ್ತಿತರರು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I