Saturday, August 1, 2026
Homeಸೂರ್ಯಗಗನI ಮಕ್ಕಳಲ್ಲಿ ನಾಯಕತ್ವ ಗುಣ I ವೃದ್ಧಿಸುವ ಇಂಟರಾಕ್ಟ್ ಕ್ಲಬ್ I ಜಿಲ್ಲಾ ವೈಸ್ ಚೇರ್ಮನ್...

I ಮಕ್ಕಳಲ್ಲಿ ನಾಯಕತ್ವ ಗುಣ I ವೃದ್ಧಿಸುವ ಇಂಟರಾಕ್ಟ್ ಕ್ಲಬ್ I ಜಿಲ್ಲಾ ವೈಸ್ ಚೇರ್ಮನ್ ಮುಸ್ತಾಕ್ ಅಲಿ ಷಾ I

I ಮಕ್ಕಳಲ್ಲಿ ನಾಯಕತ್ವ ಗುಣ I ವೃದ್ಧಿಸುವ ಇಂಟರಾಕ್ಟ್ ಕ್ಲಬ್ I ಜಿಲ್ಲಾ ವೈಸ್ ಚೇರ್ಮನ್ ಮುಸ್ತಾಕ್ ಅಲಿ ಷಾ I

ಶಿವಮೊಗ್ಗ: ಮಕ್ಕಳಲ್ಲಿ ನಾಯಕತ್ವ ಗುಣ ಹಾಗೂ ಸಂವಹನ ಕೌಶಲ್ಯ ವೃದ್ಧಿಸುವಲ್ಲಿ ಇಂಟರಾಕ್ಟ್ ಕ್ಲಬ್ ಸಹಕಾರಿಯಾಗುತ್ತದೆ ಎಂದು ಜಿಲ್ಲಾ ವೈಸ್ ಚೇರ್ಮನ್ ಮುಸ್ತಾಕ್ ಅಲಿ ಷಾ ಹೇಳಿದರು.

ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಸಂಸ್ಥೆ ವತಿಯಿಂದ ವಿನೋಬನಗರದ ಡಿವಿಎಸ್ ಪ್ರೌಢಶಾಲೆಯಲ್ಲಿ ಇಂಟರಾಕ್ಟ್ ಕ್ಲಬ್ ಉದ್ಘಾಟಿಸಿ ಮಾತನಾಡಿ, ಮಕ್ಕಳು ನಾಯಕರಾಗಿ ರೂಪುಗೊಳ್ಳುವಲ್ಲಿ ಅಗತ್ಯ ಮಾರ್ಗದರ್ಶನ ಇಂಟರಾಕ್ಟ್ ಕ್ಲಬ್‌ನಲ್ಲಿ ದೊರೆಯುತ್ತದೆ ಎಂದು ತಿಳಿಸಿದರು.

ವಲಯ ಸೇನಾನಿ ಕಿರಣ್ ಕುಮಾರ್ ಜಿ ಮಾತನಾಡಿ, ಸಕರಾತ್ಮಕ ವ್ಯಕ್ತಿತ್ವವು ಜೀವನದಲ್ಲಿ ಯಶಸ್ವಿಯಾಗಲು ನೆರವಾಗುತ್ತದೆ. ವಿದ್ಯಾರ್ಥಿಗಳು ಗುರು ಹಿರಿಯರನ್ನು ಗೌರವಿಸಬೇಕು ಎಂದು ಹೇಳಿದರು.

ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ಬಸವರಾಜ್ ಬಿ ಮಾತನಾಡಿ, ಆರೋಗ್ಯಕರ ಸಮಾಜ ನಿರ್ಮಾಣ ಮಾಡುವಲ್ಲಿ ರೋಟರಿ ಪಾತ್ರ ಮಹತ್ತರವಾದದ್ದು. ರೋಟರಿ ಸಂಸ್ಥೆಯ ಮೂಲ ಉದ್ದೇಶವೇ ಸೇವೆ. ನಾವು ಶಿಕ್ಷಣದ ಅಡಿಯಲ್ಲಿ ಅಪಾರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು.

ಶಾಲೆಗಳಿಗೆ ಮೂಲಸೌಕರ್ಯ ಒದಗಿಸುವುದು ಮತ್ತು ಮಕ್ಕಳ ಆತ್ಮವಿಶ್ವಾಸ ಹೆಚ್ಚಿಸುವಲ್ಲಿ ಅನೇಕ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಪರೀಕ್ಷೇ ಎದುರಿಸುವುದು ಹೇಗೆ, ರಸಪ್ರಶ್ನೆ ಕಾರ್ಯಕ್ರಮ ಹಾಗೂ ಶೈಕ್ಷಣಿಕ ಪ್ರವಾಸ, ಪ್ರೌಢಾವಸ್ಥೆಯಲ್ಲಿ ಆಗುವ ದೈಹಿಕ ಬದಲಾವಣೆ, ಗುಡ್ ಟಚ್ ಬ್ಯಾಡ್ ಟಚ್, ಪರಿಸರ ಕಾಳಜಿ ಹಾಗೂ ರಸ್ತೆ ಸುರಕ್ಷಾ ನಿಯಮಗಳ ಬಗ್ಗೆ ಶಾಲೆಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.

ನೂತನ ಇಂಟರಾಕ್ಟ್ ಕ್ಲಬ್ ಅಧ್ಯಕ್ಷರಾಗಿ ಸಂಜನಾ ಮತ್ತು ಕಾರ್ಯದರ್ಶಿಯಾಗಿ ಭಾರ್ಗವ ಅವರ ತಂಡಕ್ಕೆ ಮುಸ್ತಾಕ್ ಅಲಿ ಷಾ ಪ್ರಮಾಣವಚನ ಬೋಧಿಸಿದರು. ಇಂಟರಾಕ್ಟ್ ಕ್ಲಬ್ ಚೇರ್ಮನ್ ಗೀತಾ ಜಗದೀಶ್, ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಕಾರ್ಯದರ್ಶಿ ಜಯಶೀಲ್ ಶೆಟ್ಟಿ, ಮಾಜಿ ಸಹಾಯಕ ಗವರ್ನರ್ ರವಿ ಕೋಟೋಜಿ, ಧರ್ಮೇಂದ್ರ ಸಿಂಗ್, ಸಂತೋಷ್, ನಟರಾಜ್, ಚಂದ್ರು ಜೆಪಿ, ಬಲರಾಮ್, ಜಗದೀಶ್, ಜ್ಯೋತಿ ಶ್ರೀ ರಾಮ್, ಆನ್ಸ್ ಕ್ಲಬ್ ಅಧ್ಯಕ್ಷೆ ರಾಜಶ್ರೀ ಬಸವರಾಜ್, ಮಧುರಾ ಧನಂಜಯ್, ರಾಜೇಶ್ವರಿ ಸಿಂಗ್, ಶಾಲೆ ಮುಖ್ಯೋಪಾಧ್ಯಾಯ ಲಕ್ಷ್ಮಣ್‌, ಶಿಕ್ಷಕಿ ಶ್ವೇತಾ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I