Monday, August 3, 2026
Homeಸೂರ್ಯಗಗನI ದಸರಾ ಆನೆ ಬಾಲಣ್ಣನ ಕಿವಿ ಕೊಳೆತ I ತಪ್ಪಿತಸ್ಥರ ವಜಾ ಮಾಡಲು ತೇಜಸ್ವಿ ಆಗ್ರಹ...

I ದಸರಾ ಆನೆ ಬಾಲಣ್ಣನ ಕಿವಿ ಕೊಳೆತ I ತಪ್ಪಿತಸ್ಥರ ವಜಾ ಮಾಡಲು ತೇಜಸ್ವಿ ಆಗ್ರಹ I

I ದಸರಾ ಆನೆ ಬಾಲಣ್ಣನ ಕಿವಿ ಕೊಳೆತ I ತಪ್ಪಿತಸ್ಥರ ವಜಾ ಮಾಡಲು ತೇಜಸ್ವಿ ಆಗ್ರಹ I

ಮೈಸೂರು: ಶಿವಮೊಗ್ಗ ಜಿಲ್ಲೆಯ ಸಕ್ಕರೆ ಬಯಲು ಆನೆ ಶಿಬಿರದಲ್ಲಿನ ವೈದ್ಯರ ಎಡವಟ್ಟಿನಿಂದ ಸಾಕಾನೆ ಬಾಲಣ್ಣನ ಆರೋಗ್ಯ ಗಂಭೀರವಾಗಿವಾದೆ ಎಂದು ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ.

ಕೂಡಲೇ ನಿರ್ಲಕ್ಷ್ಯ‌ ವಹಿಸಿದ ಅರಣ್ಯ ಇಲಾಖೆಯ‌‌ ಅಧಿಕಾರಿಗಳು ಮತ್ತು ವೈದ್ಯಾಧಿಕಾರಿಯನ್ನು ಸೇವೆಯಿಂದ ವಜಾಮಾಡಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಬಾಲಣ್ಣ ಆನೆಗೆ ಈಗಾಗಲೇ ಕಾಲಿನ ಸಮಸ್ಯೆ ಇದೆ ಎಂದು ತಿಳಿದಿದ್ದರೂ ಸಹ ಅರಣ್ಯ ಅಧಿಕಾರಿಗಳು ಈ ಬಾರಿಯ ಶಿವಮೊಗ್ಗ ದಸರಾ ಉತ್ಸವದಲ್ಲಿ ಅಂಬಾರಿ ಮೆರವಣಿಗೆಯಲ್ಲಿ ಭಾಗವಹಿಸಲು ಕರೆತಂದು ದಿವ್ಯ ನಿರ್ಲಕ್ಷ್ಯ ತೋರಿದ್ದಾರೆ ಎಂದು ತೇಜಸ್ವಿ ಬೇಸರ‌ ವ್ಯಕ್ತಪಡಿಸಿದ್ದಾರೆ.

ದಸರಾ ಸಮಯದಲ್ಲಿ ಬಾಲಣ್ಣ ನಿಗೆ ಕಾಲುನೋವು ಇದ್ದರು ಸಹ ಯಶಸ್ವಿ ಯಾಗಿ ಕಾರ್ಯ ನಿರ್ವಹಿಸಿತ್ತು, ಸಕ್ಕರೆ ಬಯಲಿಗೆ ಮರಳಿದ ನಂತರ ವಿಪರಿತವಾಗಿ ಕಾಲು ನೋವು ಕಾಡ ತೊಡಗಿತ್ತು ಅದಕ್ಕಾಗಿ ವೈದ್ಯರು ನೋವು ನಿವಾರಕ ಇಂಜೆಕ್ಷನ್ ಕಿವಿಗೆ ನೀಡಿದ್ದರು ಎಂದು ತಿಳಿದು ಬಂದಿದೆ
ಇದು ಆನೆಯ ಮೇಲೆ ಗಂಭೀರ ಪರಿಣಾಮ ಬೀರಿದ್ದು ಆನೆಯ ಕಿವಿ ಕೊಳೆಯುತ್ತಿದೆ, ಬಾಲಣ್ಣ ಸ್ಥಿತಿ ಚಿಂತಾಜನಕ ವಾಗಿದೆ ಎಂದು ಗೊತ್ತಾಗಿದೆ.

ಈಗಾಗಲೇ ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರು ಸಮಗ್ರ ತನಿಖೆ ನಡೆಸಲು ಆದೇಶ ನೀಡಿದ್ದಾರೆ. ಆನೆ ಬಾಲಣ್ಣ ಆರೋಗ್ಯ ಸರಿ ಇಲ್ಲದಿರುವುದು ತಿಳಿದಿದ್ದರೂ ಕೂಡ ದಸರಾ ಉತ್ಸವಕ್ಕೆ ಕರೆತಂದ ಅಧಿಕಾರಿಗಳ ಮೇಲೆ ಮತ್ತು ಅವೈಜ್ಞಾನಿಕವಾಗಿ ಚುಚ್ಚುಮದ್ದು ನೀಡಿದ ವೈದ್ಯಾಧಿಕಾರಿಗಳನ್ನು ವಜಾಮಾಡಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗ ಸ್ವಾಮಿ ಆಗ್ರಹಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I