Sunday, August 2, 2026
Homeಸೂರ್ಯಗಗನI ಕನ್ನಡ ಕೈ ಬರಹ ಸ್ಪರ್ಧೆ ವಿಜೇತರಿಗೆ ಬಹುಮಾನ I

I ಕನ್ನಡ ಕೈ ಬರಹ ಸ್ಪರ್ಧೆ ವಿಜೇತರಿಗೆ ಬಹುಮಾನ I

I ಕನ್ನಡ ಕೈ ಬರಹ ಸ್ಪರ್ಧೆ ವಿಜೇತರಿಗೆ ಬಹುಮಾನ I

ಶಿವಮೊಗ್ಗ: ಕಲ್ಲಹಳ್ಳಿ ಸಿರಿಚಂದನ ಸೇವಾ ಸಂಸ್ಥೆ ವತಿಯಿಂದ ವಿನೋಬನಗರದ ಗಣಪತಿ ದೇವಸ್ಥಾನ ಬಳಿಯ ಮಾದವ ನೆಲೆ ಸಭಾಂಗಣದಲ್ಲಿ ಭಾನುವಾರ 70ನೇ ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಶಾಲಾ,ಕಾಲೇಜು ವಿಶ್ವವಿದ್ಯಾಲಯ ವಿದ್ಯಾರ್ಥಿಗಳಿಗೆ ಅಂದದ ಕನ್ನಡ ಕೈ ಬರಹ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.

ಈ ಸ್ಪರ್ಧೆಯ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ಡಿ. ಮಂಜುನಾಥ ಇವರು ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಕನ್ನಡದ ಪರಂಪರೆ ನಾಡುನುಡಿಯ ಬಗ್ಗೆ ವಿಸ್ತಾರವಾಗಿ ಮಾತನಾಡಿದರು.

ಸಂಸ್ಥೆಯ ಉಪಾದ್ಯಾಕ್ಷರಾದ ಗೀತ ಗೌಡ್ರು ಪ್ರಾಸ್ತವಿಕ ನುಡಿಯಲ್ಲಿ ಸಿರಿಚಂದನ ಸೇವಾ ಸಂಸ್ಥೆಯ ಕಾರ್ಯ ವೈಕರಿ ಕನ್ನಡ ನಾಡಿನ ಹಿರಿಮೆ ಬಗ್ಗೆ ಹಾಗೂ ಭಗವದ್ಗೀತೆಯ ಮಹತ್ವವನ್ನು ತಿಳಿಸಿದರು. ಸಂಚಾಲಕರಾದ ಎಸ್. ಆರ್. ಸತೀಶ ಮಾದವನೆಲೆ, ಎಸ್. ಆರ್. ಎನ್. ಎಂ. ಎನ್. ಸಿ. ಕಾಲೇಜು ಪ್ರಾಧ್ಯಾಪಕರಾದ ಎಂ.ಗೀತಾ ಅವರು ಅತಿಥಿಗಳಾಗಿ ಆಗಮಿಸಿ ಮಕ್ಕಳಿಗೆ ಕನ್ನಡ ಪತ್ರಿಕೆಗಳನ್ನು ಓದುವ ಬಗ್ಗೆ ಕರ್ನಾಟಕದ ಏಕೀಕರಣದ ಬಗ್ಗೆ ತಿಳಿಸಿದರು.

ಸಂಸ್ಥೆಯ ಅಧ್ಯಕ್ಷರಾದ ಎನ್. ಬಸವರಾಜ ಮಾತನಾಡಿ,’ ತಾಯಿಯನ್ನು ತಾಯ್ಯಾಡನ್ನು ಗೌರವಿರುಸುವ ಬಗ್ಗೆ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳು ಭಾಗವಹಿಸಿ ಜ್ಞಾನವನ್ನು ವೃದ್ಧಿಸಿಕೊಳ್ಳುವ ಬಗ್ಗೆ ತಿಳಿಸಿದರು.

ಸಂಘಟನಾ ಕಾರ್ಯದರ್ಶಿಗಳಾದ ಶೋಭ ದೇವರಾಜ ಹಾಗೂ ಮಮತ ಕೆ. ಆರ್  ವೇದಿಕೆಯನ್ನು ಅಲಂಕರಿಸಿದ್ದರು. ಕಾರ್ಯದರ್ಶಿ  ಟಿ. ರಮೇಶ ಇವರು ಕಾರ್ಯಕ್ರಮದ ಉಸ್ತುವಾರಿ ವಹಿಸಿಕೊಂಡಿದ್ದರು .
ಕಲ್ಪನ ವೀರೇಶ್ ಸ್ವಾಗತ ಕೋರಿದರು. ಶಿವಕುಮಾರ ಕೆ. ಎಸ್ ನಿರೂಪಣೆ ಹಾಗೂ  ಶಿವಕುಮಾರ ಎಸ್ ಪಿ ವಂದನಾರ್ಪಣೆ ಮಾಡುವುದರೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಯ ಮುಕ್ತಾಯಗೊಳಿಸಲಾಯಿತು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I