Monday, August 3, 2026
Homeಸೂರ್ಯಗಗನ I ಹಳೆ ಘಟನಾವಳಿಗಳನ್ನು ಮೆಲುಕು ಹಾಕಿದ I ಶಿವಾನಂದ ತಗಡೂರು I

 I ಹಳೆ ಘಟನಾವಳಿಗಳನ್ನು ಮೆಲುಕು ಹಾಕಿದ I ಶಿವಾನಂದ ತಗಡೂರು I

 I ಹಳೆ ಘಟನಾವಳಿಗಳನ್ನು ಮೆಲುಕು ಹಾಕಿದ I ಶಿವಾನಂದ ತಗಡೂರು I

ಬೆಂಗಳೂರು : ತಾವು ಓದಿದ ಚನ್ನರಾಯಪಟ್ಟಣ ತಾಲೂಕು ತಗಡೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ್ದ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು, ಶಾಲಾ ಮಕ್ಕಳೊಂದಿಗೆ ಸಂವಿಧಾನ ದಿನಾಚರಣೆ ಆಚರಿಸಿದರು.

ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಮತ್ತು ಸಂವಿಧಾನ ಪೀಠಿಕೆಯ ಚಿತ್ರಗಳಿಗೆ ಪುಷ್ಪಾರ್ಚನೆ ಮಾಡಿದ ಅವರು, ನ.26 ಭಾರತೀಯ ಇತಿಹಾಸದಲ್ಲಿ ಸಂವಿಧಾನವನ್ನು ಒಪ್ಪಿಸಿದ ಮಹತ್ವದ ದಿನವಾಗಿದೆ ಎಂದು ಹೇಳಿದರು. ಧ್ವನಿ ಇಲ್ಲದವರಿಗೆ, ನೊಂದವರು, ಅಶಕ್ತರು, ದೀನ ದಲಿತರಿಗೆ ಸಂವಿಧಾನದಿಂದ ಭರವಸೆಯ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗಿದೆ. ಸಾಮಾಜಿಕ ಪರಿಕಲ್ಪನೆಯಲ್ಲಿ ಬಹುದೊಡ್ಡ ಬದಲಾವಣೆ ಸಾಧ್ಯವಾಗಿದೆ. ಪ್ರತಿಯೊಬ್ಬರು ಸಮಾನ ಹಕ್ಕುಗಳನ್ನು ಹೊಂದಲು ಸಾಧ್ಯವಾಗಿದ್ದಕ್ಕೆ ಸಂವಿಧಾನವೇ ಕಾರಣ ಎಂದು ಹೇಳಿದರು.
ಈ ದೇಶದ ಕಟ್ಟ ಕಡೆಯ ವ್ಯಕ್ತಿ ಕೂಡ ಸಂವಿಧಾನ ಶಕ್ತಿಯನ್ನು ಬಳಸಿಕೊಂಡು ಯಾವುದೇ ಹುದ್ದೆಗಳಿಗೇರಲು ಸಾಧ್ಯವಿದೆ. ಜಗತ್ತಿನಲ್ಲಿಯೇ ಭಾರತ ಸಂವಿಧಾನ ಮಾದರಿ ಸಂವಿಧಾನವಾಗಿದೆ. ಇದರ ಪಾವಿತ್ರ್ಯತೆಯನ್ನು ಕಾಪಾಡಿಕೊಂಡು ಮುಂದಿನ ಪೀಳಿಗೆಗೆ ಉಳಿಸಿಕೊಂಡು ಹೋಗುವ ಜವಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.
ಮುಖ್ಯ ಶಿಕ್ಷಕಿ ರೂಪ ಅವರು ಮಾತನಾಡಿ, ಇದೇ ಶಾಲೆಯಲ್ಲಿ ಓದಿದ ಶಿವಾನಂದ ಸರ್ ಅವರು, ಇಂದು ರಾಜ್ಯ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾಗಿದ್ದಾರೆ. ಮನಸ್ಸು ಮಾಡಿದರೆ, ಸದಾ ಪ್ರಯತ್ನಶೀಲರಾಗಿದ್ದರೆ ಎಲ್ಲವೂ ಸಾಧ್ಯವಿದೆ ಎನ್ನುವುದಕ್ಕೆ ಇವರೇ ಉದಾಹರಣೆ ಎಂದರು. ಶಿಕ್ಷಕರಾದ ಕುಮಾರ್ ಮಾತನಾಡಿ, ತಾವು ಓದಿದ ಶಾಲೆಯನ್ನು ನೆನಪಿಸಿಕೊಂಡು ಇಲ್ಲಿಗೆ ಬಂದಿರುವುದು ನಮಗೆ ಅಭಿಮಾನ ಹೆಚ್ಚಿಸಿದೆ. ಸರ್ಕಾರಿ ಶಾಲೆಯಲ್ಲಿ ಓದಿದವರು ಏನಾದರೂ ಸಾಧನೆ ಮಾಡಬಹುದು ಎನ್ನುವುದಕ್ಕೆ ಶಿವಾನಂದ್ ಸರ್ ಉದಾಹರಣೆ ಎಂದರು. ಶಿಕ್ಷಕರಾದ ಹೇಮಲತಾ, ಗ್ರಾಮಸ್ಥರಾದ ಚಂದ್ರು ಮತ್ತಿತರರು ಹಾಜರಿದ್ದರು.

 

ಹಳೆ ಘಟನಾವಳಿ ಮೆಲುಕು 1ನೇ ತರಗತಿಯಿಂದ 7ನೇ ತರಗತಿ ತನಕ ಈ ಶಾಲೆಯಲ್ಲಿ ಓದುವಾಗ ನಡೆದ ಘಟನಾವಳಿಗಳನ್ನು ನೆನಪಿಸಿಕೊಂಡ ಶಿವಾನಂದ ತಗಡೂರು ಅವರು, ತಾವು ಕುಳಿತು ಪಾಠ ಕೇಳುತ್ತಿದ್ದ ಕೊಠಡಿಗಳಿಗೂ ಭೇಟಿ ನೀಡಿದ್ದರು. ಅಂದು ಬಾರಿಸುತ್ತಿದ್ದ ಶಾಲೆಯ ಗಂಟೆಯನ್ನು ಅವರೇ ಹೊಡೆದು ಆನಂದಿಸಿದರು. ವಿದ್ಯಾರ್ಥಿಗಳಾಗಿದ್ದಾಗ ನೆಟ್ಟಿದ್ದ ತೆಂಗಿನ ಸಸಿಗಳು ಇಂದು ಮರವಾಗಿ ಪಲ ಬಿಡುತ್ತಿರುವ ಬಗ್ಗೆಯೂ ಸಂತೋಷಪಟ್ಟರು. 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I