Saturday, August 1, 2026
Homeಸೂರ್ಯಗಗನI ಗಮನ ಸೆಳೆದ ಶಿವಮೊಗ್ಗದ ಭಾವೈಕ್ಯತೆ ಮತ್ತು ಸಂಸ್ಕೃತಿಯ ಪ್ರತೀಕ I ಶ್ರೀ ಸೀತಾರಾಮಾಂಜನೇಯ ಸ್ವಾಮಿ...

I ಗಮನ ಸೆಳೆದ ಶಿವಮೊಗ್ಗದ ಭಾವೈಕ್ಯತೆ ಮತ್ತು ಸಂಸ್ಕೃತಿಯ ಪ್ರತೀಕ I ಶ್ರೀ ಸೀತಾರಾಮಾಂಜನೇಯ ಸ್ವಾಮಿ ಭವ್ಯ ತೆಪ್ಪೋತ್ಸವ I

I ಗಮನ ಸೆಳೆದ ಶಿವಮೊಗ್ಗದ ಭಾವೈಕ್ಯತೆ ಮತ್ತು ಸಂಸ್ಕೃತಿಯ ಪ್ರತೀಕ I ಶ್ರೀ ಸೀತಾರಾಮಾಂಜನೇಯ ಸ್ವಾಮಿ ಭವ್ಯ ತೆಪ್ಪೋತ್ಸವ I
    ಶಿವಮೊಗ್ಗ : ನಗರದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಹೆಗ್ಗುರುತಾಗಿರುವ ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪ್ರಸ್ತುತ ‘ಶ್ರೀ ಸೀತಾರಾಮ ಕಲ್ಯಾಣ ಶತಮಾನೋತ್ಸವ’ದ ಸಂಭ್ರಮ ಮನೆಮಾಡಿದೆ. ಈ ಅಭೂತಪೂರ್ವ ಸಂಭ್ರಮದ ಅಂಗವಾಗಿ ನಿನ್ನೆ ಸಂಜೆ ಪವಿತ್ರ ತುಂಗಾ ನದಿಯ ಮಡಲಿನಲ್ಲಿ ಆಯೋಜಿಸಲಾಗಿದ್ದ ಭವ್ಯ ‘ತೆಪ್ಪೋತ್ಸವ’ ಕಾರ್ಯಕ್ರಮದಲ್ಲಿ ಭಾಗವಹಿಸಿ, ದೈವಿಕ ಕ್ಷಣಗಳಿಗೆ ಸಾಕ್ಷಿಯಾಯಿತು,  ಸಂಪೂರ್ಣ ಸಂಪನ್ನವಾಗುವ ತನಕದಿ ಶಿವಮೊಗ್ಗ ಶಾಸಕರಾದ ಎಸ್.ಎನ್ ಚೆನ್ನಬಸಪ್ಪನವರು ಜನಸ್ತೋಮದೊಂದಿಗೆ ಸಾಮಾನ್ಯರಾಗಿಯೇ ಪಾಲ್ಗೊಂಡಿದ್ದು ವಿಶೇಷವಾಗಿತ್ತು,
ಇನ್ನೂ ಇದು ಕೆಳದಿ ಅರಸರ ಕಾಲದಿಂದಲೂ ಐತಿಹಾಸಿಕ ಮಹತ್ವ ಪಡೆದಿರುವ ಹಳೆಯ ಶಿವಮೊಗ್ಗದ ಕೋಟೆ ಪ್ರದೇಶವು ಹಿಂದೂ ಸಂಸ್ಕೃತಿಯ ಶಕ್ತಿ ಕೇಂದ್ರವಾಗಿ ಗುರುತಿಸಿಕೊಂಡಿದೆ. ಇಲ್ಲಿನ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯವು ಭಕ್ತರ ಶ್ರದ್ಧಾಕೇಂದ್ರವಾಗಿದ್ದು, ಈಗ ಶತಮಾನೋತ್ಸವದ ಹೊಸ್ತಿಲಲ್ಲಿದೆ. ದಕ್ಷಿಣಾಭಿಮುಖವಾಗಿ ಹರಿಯುವ ಪುಣ್ಯನದಿ ತುಂಗಾ ತೀರದಲ್ಲಿ ಈ ಪುಣ್ಯಕ್ಷೇತ್ರವಿರುವುದು  ನಗರದ ಸೌಭಾಗ್ಯ. ಕಳೆದ 74 ವರ್ಷಗಳಿಂದ ನಿರಂತರವಾಗಿ ನಡೆದುಕೊಂಡು ಬರುತ್ತಿರುವ ಈ ತೆಪ್ಪೋತ್ಸವವು, ಶಿವಮೊಗ್ಗದ ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾಗಿದೆ.
ಸೂರ್ಯಾಸ್ತದ ಮನಮೋಹಕ ಹೊತ್ತಿನಲ್ಲಿ, ವಿದ್ಯುತ್ ದೀಪಗಳಿಂದ ಅಲಂಕೃತಗೊಂಡ ಭವ್ಯ ತೆಪ್ಪದಲ್ಲಿ ಶ್ರೀ ಸೀತಾರಾಮ, ಲಕ್ಷ್ಮಣ ಹಾಗೂ ಆಂಜನೇಯ ಸ್ವಾಮಿಯ ಉತ್ಸವ ಮೂರ್ತಿಗಳು ತುಂಗಾ ನದಿಯಲ್ಲಿ ವಿಹರಿಸುವ ದೃಶ್ಯ ಅತ್ಯಂತ ನಯನ ಮನೋಹರವಾಗಿತ್ತು. ನದಿಯ ಅಲೆಗಳ ಮೇಲೆ ತೇಲಿಬಂದ ದೈವಿಕ ಕಳೆಯನ್ನು ಕಣ್ತುಂಬಿಕೊಳ್ಳಲು ಸಾವಿರಾರು ಭಕ್ತರು ತುಂಗಾ ತೀರಕ್ಕೆ ಆಗಮಿಸಿದ್ದರು. ಮಂತ್ರಘೋಷ, ಭಕ್ತರ ಜೈಕಾರ ಹಾಗೂ ಪಟಾಕಿಗಳ ಸಂಭ್ರಮದ ನಡುವೆ ನಡೆದ ಈ ಕಾರ್ಯಕ್ರಮವು ಕೇವಲ ಧಾರ್ಮಿಕ ವಿಧಿಯಲ್ಲ, ಇದು ಶಿವಮೊಗ್ಗದ ಭಾವೈಕ್ಯತೆ ಮತ್ತು ಸಂಸ್ಕೃತಿಯ ಪ್ರತೀಕವಾಗಿದೆ.
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I