Sunday, August 2, 2026
Homeಸೂರ್ಯಗಗನI ಅನುಭಾವ ಪರಂಪರೆಗೆ ಹೊಸ ಮೌಲ್ಯ ಕೊಟ್ಟ ಅಲ್ಲಮ I ಬಸವ ಮರುಳಸಿದ್ಧ ಸ್ವಾಮೀಜಿ I

I ಅನುಭಾವ ಪರಂಪರೆಗೆ ಹೊಸ ಮೌಲ್ಯ ಕೊಟ್ಟ ಅಲ್ಲಮ I ಬಸವ ಮರುಳಸಿದ್ಧ ಸ್ವಾಮೀಜಿ I

I ಅನುಭಾವ ಪರಂಪರೆಗೆ ಹೊಸ ಮೌಲ್ಯ ಕೊಟ್ಟ ಅಲ್ಲಮ I ಬಸವ ಮರುಳಸಿದ್ಧ ಸ್ವಾಮೀಜಿ I

ಶಿವಮೊಗ್ಗ: ವಿಶ್ವಗುರು ಬಸವಣ್ಣನವರು ಸ್ಥಾಪಿಸಿದ, ಪ್ರಜಾಪ್ರಭುತ್ವದ ಪ್ರಥಮ ಮಾದರಿ ಎನಿಸಿದ ಅನುಭವ ಮಂಟಪದ ಪ್ರಥಮ ಅಧ್ಯಕ್ಷರಾದ ಅಲ್ಲಮಪ್ರಭುದೇವರು ಕನ್ನಡದ ಅನುಭಾವ ಪರಂಪರೆಗೆ ಹೊಸ ಮೌಲ್ಯಗಳನ್ನು ಕೊಟ್ಟವರು ಎಂದು ಚಿಕ್ಕಮಗಳೂರಿನ ಶ್ರೀ ಬಸವತತ್ವ ಪೀಠ, ಚಿಕ್ಕಮಗಳೂರು, ಶಿವಮೊಗ್ಗ ಬಸವಕೇಂದ್ರದ ಶ್ರೀ ಮ. ನಿ. ಪ್ರ. ಡಾ. ಬಸವ ಮರುಳಸಿದ್ದ ಸ್ವಾಮೀಜಿ ಹೇಳಿದ್ದಾರೆ.

ಬಸವಪರ ಸಂಘಟನೆಗಳು ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ ಹಮ್ಮಿಕೊಂಡಿದ್ದ ಅಲ್ಲಮಪ್ರಭುದೇವರ ಜಯಂತಿ ಸಾನ್ನಿಧ್ಯವಹಿಸಿ ಅವರು ಅಶೀರ್ವಚನ ನೀಡಿದರು. ವಿಶ್ವಗುರು ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪ, ಶೂನ್ಯಸಿಂಹಾಸನದ ಪ್ರಥಮ ಅಧ್ಯಕ್ಷರಾದ ಅಲ್ಲಮ ಪ್ರಭುಗಳು,  ದೇಶ ಸಂಚಾರ ಮಾಡಿ ಸಾಮಾನ್ಯನಿಂದ ಸಾಧಕನವರೆಗೂ-ಎಲ್ಲರ ಸಾಧನೆಯ ಓರೆಕೋರೆಗಳನ್ನು ತಿದ್ದಿ ಸರಿದಾರಿಗೆ ಕಳಿಸಿದ ಮಹಾನುಭಾವಿ ಎಂದರು. ಕನ್ನಡ ಸಾಹಿತ್ಯಕ್ಕೆ ಮೌಲಿಕ ಕೊಡುಗೆ ನೀಡಿದ ಅಲ್ಲಮಪ್ರಭುಗಳ ವಚನಗಳ ಮೌಲ್ಯಗಳು ನಮಗೆಲ್ಲ ಪ್ರೇರಣೆಯಾಗಿವೆ ಎಂದರು.

ಸಾನಿಧ್ಯವಹಿಸಿದ್ದ ಆನಂದಪುರಂ- ಶ್ರೀ ಬೆಕ್ಕಿನಕಲ್ಮಠದ ಶ್ರೀ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮೀಜಿಗಳು ಆಶೀರ್ವಚನ ನೀಡಿ, ಅಲ್ಲಮಪ್ರಭುದೇವರ ಬಯಲ ತತ್ವವು ಕನ್ನಡದ ಆಧ್ಯಾತ್ಮ ಪರಂಪರೆಯ ಅಪರೂಪದ ಪರಿಕಲ್ಪನೆಯಾಗಿದೆ ಎಂದರು.

ಬಯಲಾಗುವುದು ಪ್ರತಿಯೊಬ್ಬ ಮಾನವನಿಗೂ ಸಾಧ್ಯ. ತಾನು ಬದುಕಿನ ಯಾವುದೇ ಸ್ಥಿತಿಯಲ್ಲಿದ್ದರೂ ಬಯಲಿನೆಡೆಗೆ  ಸಾಗುವ ಸುಲಭ ಮಾರ್ಗ ತೋರಿದ್ದು ಅಲ್ಲಮಪ್ರಭುದೇವರು. ಮುಕ್ತಾಯಕ್ಕನಿಂದ ಗೋರಕ್ಷನವರೆಗೂ ಅಲ್ಲಮಗಳ ಮುಖಾಮುಖಿಯಾದ ಪ್ರತಿಯೊಬ್ಬರೂ ಬಯಲ ಸಿದ್ಧಿ ಸಾಧಿಸಿದ್ದಾರೆ ಎಂದು ಹೇಳಿದರು.

ಶಾಸಕರಾದ ಧನಂಜಯ ಸರ್ಜಿ, ಶರಣ ಸಾಹಿತ್ಯ ಪರಿಷತ್‌ ಜಿಲ್ಲಾಧ್ಯಕ್ಷ ಹೆಚ್.ಎನ್.‌ ಮಹಾರುದ್ರ, ಪ್ರಧಾನ ಕಾರ್ಯದರ್ಶಿ ಬಾರಂದೂರು ಪ್ರಕಾಶ್‌, ವೀರಶೈವ- ಲಿಂಗಾಯ ಮಹಾ ಸಭಾದ ಜಿಲ್ಲಾಧ್ಯಕ್ಷ ರುದ್ರಮುನಿ ಸಜ್ಜನ್‌ ಇನ್ನಿತರರು ಈ ಸಂದರ್ಭದಲ್ಲಿ ಇದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I